<p>ಪ್ರಜಾವಾಣಿ ವಾರ್ತೆ</p>.<p>ಶಿಕಾರಿಪುರ: ‘ಅತಿಥಿ ಉಪನ್ಯಾಸಕರ ಸೇವಾ ವಿಲೀನವನ್ನು ಸಚಿವ ಸಂಪುಟದಲ್ಲಿ ಇತ್ಯರ್ಥಗೊಳಿಸಬೇಕು’ ಎಂದು ಒತ್ತಾಯಿಸಿ ಪಟ್ಟಣದ ಆಡಳಿತಸೌಧ ಸಭಾಂಗಣದಲ್ಲಿ ಸೋಮವಾರ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ಧರಣಿ ನಡೆಸಿದರು.</p>.<p>ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಅಧ್ಯಕ್ಷ ಸೇವಾ ಸೋಮಶೇಖರ್ ಶಿಮೊಗ್ಗಿ ಮಾತನಾಡಿ, ‘ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಲು ಕರ್ನಾಟಕ ನಾಗರಿಕ ನಿಯಮ 1977/140 ಅಡಿ ಅವಕಾಶವಿದೆ. ಈ ನಿಯಮದ ಅಡಿ ಅತಿಥಿ ಉಪನ್ಯಾಸಕರ ಸೇವೆ ವಿಲೀನಗೊಳಿಸಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇವೆ ವಿಲೀನಗೊಳಿಸಲು ಮಧ್ಯ ಪ್ರವೇಶಿಸಿ ಅತಿಥಿ ಉಪನ್ಯಾಸಕರಿಗೆ ನ್ಯಾಯ ಒದಗಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕಾಲೇಜು ಶಿಕ್ಷಣ ಇಲಾಖೆ ಪುನಃ ಶೈಕ್ಷಣಿಕ ವರ್ಷದ ಅಂತಿಮ ಹಂತದಲ್ಲಿ ಇರುವಾಗ ಆನ್ಲೈನ್ ಮೂಲಕ ಅರ್ಜಿ ಕರೆಯುವ ಸಿದ್ಧತೆ ತೆರೆಮರೆಯಲ್ಲಿ ನಡೆಸುತ್ತಿದೆ ಎಂಬ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಪ್ರಕ್ರಿಯೆಯಿಂದ ಅತಿಥಿ ಉಪನ್ಯಾಸಕರು ಮತ್ತೆ ಆತಂಕಕ್ಕೆ ಈಡಾಗಿದ್ದಾರೆ. ಅತಿಥಿ ಉಪನ್ಯಾಸಕರ ಸೇವಾ ವಿಲೀನ ವಿಚಾರ ಸಚಿವ ಸಂಪುಟ ಸಮಿತಿ ಮುಂದೆ ತರಲು ಒತ್ತಾಯಿಸಿ ನಾಳೆಯಿಂದ ತರಗತಿ ಬಹಿಷ್ಕಾರ ಮಾಡಿ ಮುಷ್ಕರಕ್ಕೆ ಸಮಿತಿ ಕರೆ ನೀಡಿದೆ’ ಎಂದರು.</p>.<p>ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಪದಾಧಿಕಾರಿಗಳಾದ ಡಾ.ರವೀಂದ್ರ ಮೈಸೂರು, ಕೆ. ರಾಜೇಶ್ ಕುಮಾರ್, ನಾಗರಾಜ್ ಮದ್ದೂರು, ನಾಗರಾಜ್ ಅರಸಿಕೆರೆ, ಪಿ.ಸಿ. ಲೋಕೇಶ್ ತುಮಕೂರು, ಶಂಕರ ನಾಯ್ಕ ದಾವಣಗೆರೆ, ಆಶಾ, ಧನಂಜಯ, ಈಶ್ವರ್, ಕೆ. ಸುಮಾ, ಸಿ.ಎಸ್. ಪರಿಮಳ, ಶಶಿಕಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಶಿಕಾರಿಪುರ: ‘ಅತಿಥಿ ಉಪನ್ಯಾಸಕರ ಸೇವಾ ವಿಲೀನವನ್ನು ಸಚಿವ ಸಂಪುಟದಲ್ಲಿ ಇತ್ಯರ್ಥಗೊಳಿಸಬೇಕು’ ಎಂದು ಒತ್ತಾಯಿಸಿ ಪಟ್ಟಣದ ಆಡಳಿತಸೌಧ ಸಭಾಂಗಣದಲ್ಲಿ ಸೋಮವಾರ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರು ಅನಿರ್ದಿಷ್ಟಾವಧಿ ಧರಣಿ ನಡೆಸಿದರು.</p>.<p>ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಅಧ್ಯಕ್ಷ ಸೇವಾ ಸೋಮಶೇಖರ್ ಶಿಮೊಗ್ಗಿ ಮಾತನಾಡಿ, ‘ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸಲು ಕರ್ನಾಟಕ ನಾಗರಿಕ ನಿಯಮ 1977/140 ಅಡಿ ಅವಕಾಶವಿದೆ. ಈ ನಿಯಮದ ಅಡಿ ಅತಿಥಿ ಉಪನ್ಯಾಸಕರ ಸೇವೆ ವಿಲೀನಗೊಳಿಸಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇವೆ ವಿಲೀನಗೊಳಿಸಲು ಮಧ್ಯ ಪ್ರವೇಶಿಸಿ ಅತಿಥಿ ಉಪನ್ಯಾಸಕರಿಗೆ ನ್ಯಾಯ ಒದಗಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕಾಲೇಜು ಶಿಕ್ಷಣ ಇಲಾಖೆ ಪುನಃ ಶೈಕ್ಷಣಿಕ ವರ್ಷದ ಅಂತಿಮ ಹಂತದಲ್ಲಿ ಇರುವಾಗ ಆನ್ಲೈನ್ ಮೂಲಕ ಅರ್ಜಿ ಕರೆಯುವ ಸಿದ್ಧತೆ ತೆರೆಮರೆಯಲ್ಲಿ ನಡೆಸುತ್ತಿದೆ ಎಂಬ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಪ್ರಕ್ರಿಯೆಯಿಂದ ಅತಿಥಿ ಉಪನ್ಯಾಸಕರು ಮತ್ತೆ ಆತಂಕಕ್ಕೆ ಈಡಾಗಿದ್ದಾರೆ. ಅತಿಥಿ ಉಪನ್ಯಾಸಕರ ಸೇವಾ ವಿಲೀನ ವಿಚಾರ ಸಚಿವ ಸಂಪುಟ ಸಮಿತಿ ಮುಂದೆ ತರಲು ಒತ್ತಾಯಿಸಿ ನಾಳೆಯಿಂದ ತರಗತಿ ಬಹಿಷ್ಕಾರ ಮಾಡಿ ಮುಷ್ಕರಕ್ಕೆ ಸಮಿತಿ ಕರೆ ನೀಡಿದೆ’ ಎಂದರು.</p>.<p>ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಪದಾಧಿಕಾರಿಗಳಾದ ಡಾ.ರವೀಂದ್ರ ಮೈಸೂರು, ಕೆ. ರಾಜೇಶ್ ಕುಮಾರ್, ನಾಗರಾಜ್ ಮದ್ದೂರು, ನಾಗರಾಜ್ ಅರಸಿಕೆರೆ, ಪಿ.ಸಿ. ಲೋಕೇಶ್ ತುಮಕೂರು, ಶಂಕರ ನಾಯ್ಕ ದಾವಣಗೆರೆ, ಆಶಾ, ಧನಂಜಯ, ಈಶ್ವರ್, ಕೆ. ಸುಮಾ, ಸಿ.ಎಸ್. ಪರಿಮಳ, ಶಶಿಕಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>