‘ಸುಟ್ಟು ಹೋದ ಟಿಸಿಯನ್ನು 24 ಗಂಟೆಯೊಳಗೆ ಬದಲಾವಣೆ ಮಾಡಿಕೊಡುತ್ತೇವೆ ಎಂದು ಇಂಧನ ಸಚಿವ ವಿ. ಸುನೀಲ್ಕುಮಾರ್ ಭಾಷಣಗಳಲ್ಲಿ ಹೇಳುತ್ತಿದ್ದಾರೆ. ಆದರೆ, ತಾಲ್ಲೂಕಿನಲ್ಲಿ 15 ದಿನ ಕಳೆದರೂ ರೈತರಿಗೆ ಸುಟ್ಟು ಹೋದ ಟಿಸಿ ಬದಲಾವಣೆ ಮಾಡಿಕೊಟ್ಟಿಲ್ಲ. ರೈತರನ್ನು ಕಚೇರಿಗೆ ಅಲೆದಾಡಿಸುತ್ತಿದ್ದಾರೆ. ರೈತರ ವಿದ್ಯುತ್ ಸಮಸ್ಯೆ ನಿವಾರಿಸುವಲ್ಲಿ ಸ್ಥಳೀಯ ಶಾಸಕರಾದ ಯಡಿಯೂರಪ್ಪ ಹಾಗೂ ಸಂಸದ ರಾಘವೇಂದ್ರ ವಿಫಲರಾಗಿದ್ದಾರೆ’ ಎಂದು ಆರೋಪಿಸಿದರು. ಮುಖಂಡರಾದ ಎಚ್.ಎಸ್. ಶಾಂತವೀರಪ್ಪ ಗೌಡ್ರು, ಗೋಣಿ ಮಾಲತೇಶ್, ನಗರದ ಮಹಾದೇವಪ್ಪ, ಎಸ್.ಪಿ. ನಾಗರಾಜ್ ಗೌಡ್ರು, ಹುಲ್ಮಾರ್ ಮಹೇಶ್, ಗೋಣಿ ಪ್ರಕಾಶ್, ಎನ್. ಅರುಣಕುಮಾರ್, ಜಯಶ್ರೀ, ಉಳ್ಳಿ ದರ್ಶನ್, ಕಮಲಮ್ಮ ಹುಲ್ಮಾರ್, ಇದ್ದರು.