ಈ ಕ್ರೀಡಾ ಸಂಕೀರ್ಣದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತದೆ. ಮೈಸೂರು ರಾಜ ಜಯಚಾಮರಾಜೇಂದ್ರ ಒಡೆಯರ್ ಅವರು ಶೈಕ್ಷಣಿಕ ಉದ್ದೇಶಕ್ಕಾಗಿ 100 ಎಕರೆ ಭೂಮಿ ಮೀಸಲಿಟ್ಟಿದ್ದರು. ಪ್ರಸ್ತುತ 6 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ವ್ಯಾಸಂಗ ಕೊಠಡಿಗಳು, ಹಾಸ್ಟೆಲ್ ಹಾಗೂ ವಾಚನಾಲಯ, ಪ್ರಯೋಗಾಲಯ ಸೇರಿದಂತೆ ವಿವಿಧ ಶೈಕ್ಷಣಿಕ ಅಭಿವೃದ್ಧಿ ಚಟುವಟಿಕೆಗಳಿಗೆ, ಮೂಲ ಸೌಲಭ್ಯಗಳಿಗೆ ನಗರದ ಮಧ್ಯದ ಈ ಪ್ರದೇಶದ ಆವಶ್ಯಕತೆ ಇದೆ. ಮುಂದಿನ ದಿನಗಳಲ್ಲಿ ಸ್ನಾತಕೋತ್ತರ ವಿಷಯಗಳ ಬೋಧನೆಗೆ ಕೊಠಡಿಗಳು ಬೇಕಾಗುತ್ತವೆ. ಆಗ ಜಾಗದ ಕೊರತೆ ಉಂಟಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.