<p><strong>ಶಿವಮೊಗ್ಗ: </strong>ನಗರದ ಬಿ.ಎಚ್ ರಸ್ತೆಯ ಶಿವಪ್ಪ ನಾಯಕ ಪ್ರತಿಮೆಯ ಆಸುಪಾಸಿನಲ್ಲಿ ವ್ಯಾಪಾರಕ್ಕೆ ಅವಕಾಶ ನೀಡದ ಪೊಲೀಸರ ಕ್ರಮ ಖಂಡಿಸಿ ತಳ್ಳುವ ಗಾಡಿ ವ್ಯಾಪಾರಸ್ಥರು ಬುಧವಾರ ಮಾರಾಟಕ್ಕೆ ತಂದಿದ್ದ ಹೂವು ಹಣ್ಣುಗಳನ್ನು ರಸ್ತೆಗೆ ಎಸೆದು ಪೊಲೀಸರವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೆಲವು ತಿಂಗಳ ಹಿಂದೆ ಬೀದಿ ಬದಿ ವ್ಯಾಪಾರಸ್ಥರಿಂದ ಸಾರ್ವಜನಿಕರಿಗೆ, ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರು ನೀಡಿದ್ದರು. ಈ ಕಾರಣ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕಿನಿಂದ ಹಿಡಿದು ಬಿ.ಎಚ್.ರಸ್ತೆಯ ಶಿವಪ್ಪ ನಾಯಕ ಪ್ರತಿಮೆಯವರೆಗೆ ಬೀದಿಬದಿ ವ್ಯಾಪಾರಸ್ಥರನ್ನು ತೆರವುಗೊಳಿಸಲಾಗಿತ್ತು.</p>.<p>ಆದರೆ, ವ್ಯಾಪಾರಸ್ಥರು ತಮ್ಮನ್ನು ತೆರವುಗೊಳಿಸಿರುವುದರಿಂದ ವ್ಯಾಪಾರವಿಲ್ಲದೆ, ಜೀವನ ನಡೆಸಲು ತೊಂದರೆಯಾಗುತ್ತಿದೆ ಎಂದು ಅಧಿಕಾರಿಗಳು, ಇಲಾಖೆಗಳಿಗೆ ಮನವಿ ನೀಡಿದ್ದರು.</p>.<p class="Subhead"><strong>ಬದಲಿ ವ್ಯವಸ್ಥೆ:</strong> ವ್ಯಾಪಾರಸ್ಥರು ಸಾಕಷ್ಟು ಮನವಿ ನೀಡಿದ್ದರೂ ಸಂಬಂಧಪಟ್ಟವರು ಯಾವುದೇ ಕ್ರಮ ತೆಗೆದು<br />ಕೊಂಡಿರಲಿಲ್ಲ. ಆದರೆ ನಾಗರಾಜ್ ಕಂಕಾರಿ ಮಹಾನಗರ ಪಾಲಿಕೆ ಮೇಯರ್ ಆಗಿದ್ದಾಗ ಮತ್ತು ಈಚೆಗೆ ನಡೆದ ಪಾಲಿಕೆ ಸಭೆಯಲ್ಲಿ ಗಾಂಧಿ ಬಜಾರ್ ಬೀದಿ ಬದಿ ವ್ಯಾಪಾರಸ್ಥರಿಗೆ ಬದಲಿ ವ್ಯವಸ್ಥೆಯಾಗಿ ಕರ್ನಾಟಕ ಸಂಘದ ಮುರುಗನ್ ಬಿಲ್ಡಿಂಗ್ ಹಿಂಭಾಗದಲ್ಲಿ ಜಾಗ ಕಲ್ಪಿಸಬೇಕು ಎಂದು ತೀರ್ಮಾನಿಸಲಾಗಿತ್ತು.</p>.<p>ಈ ಜಾಗದಲ್ಲಿ ವ್ಯಾಪಾರ ನಡೆಸಲು ಇಷ್ಟಪಡದ ವ್ಯಾಪಾರಸ್ಥರು ಇಂದು ಏಕಾಏಕಿ ನಿಷೇಧಿತ ಜಾಗದಲ್ಲಿ ವ್ಯಾಪಾರ ಆರಂಭಿಸಲು ಯತ್ನಿಸಿದರು. ಆದರೆ ಪೊಲೀಸರು ಅಡ್ಡಿಪಡಿಸಿದ ಕಾರಣ ಕುಪಿತಗೊಂಡು ಅವರ ವಿರುದ್ಧ ಬೀದಿಗೆ ಇಳಿದು ಪ್ರತಿಭಟಿಸಿದರು.</p>.<p class="Subhead"><strong>ಮತ್ತೊಮ್ಮೆ ಸಭೆ ನಡೆಸಿ ನಿರ್ಧಾರ: </strong>ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಮತ್ತೊಮ್ಮೆ ಸಭೆ ನಡೆಸಿ ವ್ಯಾಪಾರಕ್ಕೆ ಸೂಕ್ತ ಜಾಗವನ್ನು ನಿಗದಿಪಡಿಸಲಾಗುವುದು. ಸಹಕರಿಸಬೇಕು ಎಂದು ವ್ಯಾಪಾರಸ್ಥರ ಮನವೊಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ನಗರದ ಬಿ.ಎಚ್ ರಸ್ತೆಯ ಶಿವಪ್ಪ ನಾಯಕ ಪ್ರತಿಮೆಯ ಆಸುಪಾಸಿನಲ್ಲಿ ವ್ಯಾಪಾರಕ್ಕೆ ಅವಕಾಶ ನೀಡದ ಪೊಲೀಸರ ಕ್ರಮ ಖಂಡಿಸಿ ತಳ್ಳುವ ಗಾಡಿ ವ್ಯಾಪಾರಸ್ಥರು ಬುಧವಾರ ಮಾರಾಟಕ್ಕೆ ತಂದಿದ್ದ ಹೂವು ಹಣ್ಣುಗಳನ್ನು ರಸ್ತೆಗೆ ಎಸೆದು ಪೊಲೀಸರವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೆಲವು ತಿಂಗಳ ಹಿಂದೆ ಬೀದಿ ಬದಿ ವ್ಯಾಪಾರಸ್ಥರಿಂದ ಸಾರ್ವಜನಿಕರಿಗೆ, ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರು ನೀಡಿದ್ದರು. ಈ ಕಾರಣ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕಿನಿಂದ ಹಿಡಿದು ಬಿ.ಎಚ್.ರಸ್ತೆಯ ಶಿವಪ್ಪ ನಾಯಕ ಪ್ರತಿಮೆಯವರೆಗೆ ಬೀದಿಬದಿ ವ್ಯಾಪಾರಸ್ಥರನ್ನು ತೆರವುಗೊಳಿಸಲಾಗಿತ್ತು.</p>.<p>ಆದರೆ, ವ್ಯಾಪಾರಸ್ಥರು ತಮ್ಮನ್ನು ತೆರವುಗೊಳಿಸಿರುವುದರಿಂದ ವ್ಯಾಪಾರವಿಲ್ಲದೆ, ಜೀವನ ನಡೆಸಲು ತೊಂದರೆಯಾಗುತ್ತಿದೆ ಎಂದು ಅಧಿಕಾರಿಗಳು, ಇಲಾಖೆಗಳಿಗೆ ಮನವಿ ನೀಡಿದ್ದರು.</p>.<p class="Subhead"><strong>ಬದಲಿ ವ್ಯವಸ್ಥೆ:</strong> ವ್ಯಾಪಾರಸ್ಥರು ಸಾಕಷ್ಟು ಮನವಿ ನೀಡಿದ್ದರೂ ಸಂಬಂಧಪಟ್ಟವರು ಯಾವುದೇ ಕ್ರಮ ತೆಗೆದು<br />ಕೊಂಡಿರಲಿಲ್ಲ. ಆದರೆ ನಾಗರಾಜ್ ಕಂಕಾರಿ ಮಹಾನಗರ ಪಾಲಿಕೆ ಮೇಯರ್ ಆಗಿದ್ದಾಗ ಮತ್ತು ಈಚೆಗೆ ನಡೆದ ಪಾಲಿಕೆ ಸಭೆಯಲ್ಲಿ ಗಾಂಧಿ ಬಜಾರ್ ಬೀದಿ ಬದಿ ವ್ಯಾಪಾರಸ್ಥರಿಗೆ ಬದಲಿ ವ್ಯವಸ್ಥೆಯಾಗಿ ಕರ್ನಾಟಕ ಸಂಘದ ಮುರುಗನ್ ಬಿಲ್ಡಿಂಗ್ ಹಿಂಭಾಗದಲ್ಲಿ ಜಾಗ ಕಲ್ಪಿಸಬೇಕು ಎಂದು ತೀರ್ಮಾನಿಸಲಾಗಿತ್ತು.</p>.<p>ಈ ಜಾಗದಲ್ಲಿ ವ್ಯಾಪಾರ ನಡೆಸಲು ಇಷ್ಟಪಡದ ವ್ಯಾಪಾರಸ್ಥರು ಇಂದು ಏಕಾಏಕಿ ನಿಷೇಧಿತ ಜಾಗದಲ್ಲಿ ವ್ಯಾಪಾರ ಆರಂಭಿಸಲು ಯತ್ನಿಸಿದರು. ಆದರೆ ಪೊಲೀಸರು ಅಡ್ಡಿಪಡಿಸಿದ ಕಾರಣ ಕುಪಿತಗೊಂಡು ಅವರ ವಿರುದ್ಧ ಬೀದಿಗೆ ಇಳಿದು ಪ್ರತಿಭಟಿಸಿದರು.</p>.<p class="Subhead"><strong>ಮತ್ತೊಮ್ಮೆ ಸಭೆ ನಡೆಸಿ ನಿರ್ಧಾರ: </strong>ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಮತ್ತೊಮ್ಮೆ ಸಭೆ ನಡೆಸಿ ವ್ಯಾಪಾರಕ್ಕೆ ಸೂಕ್ತ ಜಾಗವನ್ನು ನಿಗದಿಪಡಿಸಲಾಗುವುದು. ಸಹಕರಿಸಬೇಕು ಎಂದು ವ್ಯಾಪಾರಸ್ಥರ ಮನವೊಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>