<p><strong>ಶಿವಮೊಗ್ಗ</strong>: ಸಾಗರ ರಸ್ತೆಯ ಸರ್ಕಾರಿ ಜಾಗವನ್ನು ಖಾಸಗಿ ಹೋಟೆಲ್ನ ರಸ್ತೆಗೆ ಬಳಸಿಕೊಳ್ಳಲು ಅವಕಾಶ ಮಾಡಿಕೊಟ್ಟ ನಿರ್ಧಾರ ಖಂಡಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ಕಾರ್ಯಕರ್ತರು ಮಂಗಳವಾರ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಎಂಜಿನಿಯರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಸಾಗರ ರಸ್ತೆಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ತುಂಗಾ ಮೇಲ್ದಂಡೆ ಯೋಜನೆಗೆ ಸೇರಿದ ₹ 45 ಕೋಟಿಗೂ ಹೆಚ್ಚು ಬೆಲೆ ಬಾಳುವ ಜಾಗವನ್ನು ರಸ್ತೆಗಾಗಿ ಬಿಟ್ಟುಕೊಡಲಾಗಿದೆ. ಹಿಂದೆ ₹ 70 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ರಸ್ತೆ, ಚರಂಡಿ, ಸಮುದಾಯ ಭವನದ ಕಾಮಗಾರಿಗಳು ಸಂಪೂರ್ಣವಾಗಿ ಹಾಳಾಗಿವೆ ಎಂದು ಪ್ರತಿಭಟನಾಕಾರರು ದೂರಿದರು.</p>.<p>ಹೋಟೆಲ್ಗೆ ಈ ಮೊದಲೇ ಹೋಗಲು ರಸ್ತೆ ಇದ್ದರೂ, ಇಲಾಖೆ ಜಾಗದಲ್ಲಿ ರಸ್ತೆ ಮಾಡಿಕೊಟ್ಟಿರುವುದು ಏಕೆ? ಅಲ್ಲಿ ಇನ್ನೊಂದು ರಸ್ತೆಯ ಅವಶ್ಯಕತೆ ಇದೆಯೇ? ಈ ಕಾಮಗಾರಿಗೆ ಯಾವ ಹಣ ಬಳಕೆಯಾಗಿದೆ? ಎಷ್ಟು ಬಳಕೆಯಾಗಿದೆ ಎಂದು ಸಾರ್ವಜನಿಕರಿಗೆ ತಿಳಿಸಬೇಕು. ಹೋಟೆಲ್ಗೆ ನೀಡಿದ್ದ ಜಾಗ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಟಿ.ಎಂ.ಅಶೋಕ್ ಯಾದವ್, ಮುಖಂಡರಾದ ಬಾಬಣ್ಣ, ಶಿವಕುಮಾರ್ ಕಸಟ್ಟೆ, ವೆಂಕಟನಾರಾಯಣ್, ಶ್ರೀಕಾಂತ್, ಪ್ರೊ.ಕಲ್ಲಣ್ಣ, ನಾಗರಾಜ್, ಪ್ರೊ.ಚಂದ್ರಶೇಖರ್, ಬಾಲಕೃಷ್ಣ ನಾಯ್ಡು, ಸುಬ್ರಮಣ್ಯ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಸಾಗರ ರಸ್ತೆಯ ಸರ್ಕಾರಿ ಜಾಗವನ್ನು ಖಾಸಗಿ ಹೋಟೆಲ್ನ ರಸ್ತೆಗೆ ಬಳಸಿಕೊಳ್ಳಲು ಅವಕಾಶ ಮಾಡಿಕೊಟ್ಟ ನಿರ್ಧಾರ ಖಂಡಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ಕಾರ್ಯಕರ್ತರು ಮಂಗಳವಾರ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಎಂಜಿನಿಯರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಸಾಗರ ರಸ್ತೆಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ತುಂಗಾ ಮೇಲ್ದಂಡೆ ಯೋಜನೆಗೆ ಸೇರಿದ ₹ 45 ಕೋಟಿಗೂ ಹೆಚ್ಚು ಬೆಲೆ ಬಾಳುವ ಜಾಗವನ್ನು ರಸ್ತೆಗಾಗಿ ಬಿಟ್ಟುಕೊಡಲಾಗಿದೆ. ಹಿಂದೆ ₹ 70 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ರಸ್ತೆ, ಚರಂಡಿ, ಸಮುದಾಯ ಭವನದ ಕಾಮಗಾರಿಗಳು ಸಂಪೂರ್ಣವಾಗಿ ಹಾಳಾಗಿವೆ ಎಂದು ಪ್ರತಿಭಟನಾಕಾರರು ದೂರಿದರು.</p>.<p>ಹೋಟೆಲ್ಗೆ ಈ ಮೊದಲೇ ಹೋಗಲು ರಸ್ತೆ ಇದ್ದರೂ, ಇಲಾಖೆ ಜಾಗದಲ್ಲಿ ರಸ್ತೆ ಮಾಡಿಕೊಟ್ಟಿರುವುದು ಏಕೆ? ಅಲ್ಲಿ ಇನ್ನೊಂದು ರಸ್ತೆಯ ಅವಶ್ಯಕತೆ ಇದೆಯೇ? ಈ ಕಾಮಗಾರಿಗೆ ಯಾವ ಹಣ ಬಳಕೆಯಾಗಿದೆ? ಎಷ್ಟು ಬಳಕೆಯಾಗಿದೆ ಎಂದು ಸಾರ್ವಜನಿಕರಿಗೆ ತಿಳಿಸಬೇಕು. ಹೋಟೆಲ್ಗೆ ನೀಡಿದ್ದ ಜಾಗ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಟಿ.ಎಂ.ಅಶೋಕ್ ಯಾದವ್, ಮುಖಂಡರಾದ ಬಾಬಣ್ಣ, ಶಿವಕುಮಾರ್ ಕಸಟ್ಟೆ, ವೆಂಕಟನಾರಾಯಣ್, ಶ್ರೀಕಾಂತ್, ಪ್ರೊ.ಕಲ್ಲಣ್ಣ, ನಾಗರಾಜ್, ಪ್ರೊ.ಚಂದ್ರಶೇಖರ್, ಬಾಲಕೃಷ್ಣ ನಾಯ್ಡು, ಸುಬ್ರಮಣ್ಯ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>