<p>ಶಿವಮೊಗ್ಗ: ಸಹ್ಯಾದ್ರಿ ಕಾಲೇಜು ಕ್ಯಾಂಪಸ್ನಲ್ಲಿ ಖೇಲೋ ಇಂಡಿಯಾ ಯೋಜನೆಯ ವಿಶೇಷ ಕ್ರೀಡಾ ಸಂಕೀರ್ಣ ಮತ್ತು ಕ್ರೀಡಾ ತರಬೇತಿ ನಿರ್ಮಾಣ ಖಂಡಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.</p>.<p>ಈ ಕ್ರೀಡಾ ಸಂಕೀರ್ಣದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತದೆ. ಮೈಸೂರು ರಾಜ ಜಯಚಾಮರಾಜೇಂದ್ರ ಒಡೆಯರ್ ಅವರು ಶೈಕ್ಷಣಿಕ ಉದ್ದೇಶಕ್ಕಾಗಿ 100 ಎಕರೆ ಭೂಮಿ ಮೀಸಲಿಟ್ಟಿದ್ದರು. ಪ್ರಸ್ತುತ 6 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ವ್ಯಾಸಂಗ ಕೊಠಡಿಗಳು, ಹಾಸ್ಟೆಲ್ ಹಾಗೂ ವಾಚನಾಲಯ, ಪ್ರಯೋಗಾಲಯ ಸೇರಿದಂತೆ ವಿವಿಧ ಶೈಕ್ಷಣಿಕ ಅಭಿವೃದ್ಧಿ ಚಟುವಟಿಕೆಗಳಿಗೆ, ಮೂಲ ಸೌಲಭ್ಯಗಳಿಗೆ ನಗರದ ಮಧ್ಯದ ಈ ಪ್ರದೇಶದ ಆವಶ್ಯಕತೆ ಇದೆ. ಮುಂದಿನ ದಿನಗಳಲ್ಲಿ ಸ್ನಾತಕೋತ್ತರ ವಿಷಯಗಳ ಬೋಧನೆಗೆ ಕೊಠಡಿಗಳು ಬೇಕಾಗುತ್ತವೆ. ಆಗ ಜಾಗದ ಕೊರತೆ ಉಂಟಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಭವಿಷ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗಾಗಿ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಜಿಲ್ಲಾಡಳಿತ ಮತ್ತು ಕುವೆಂಪು ವಿಶ್ವವಿದ್ಯಾಲಯ ಈ ಯೋಜನೆ ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.</p>.<p>ಯೋಜನೆಗೆ ನಮ್ಮ ವಿರೋಧವಿಲ್ಲ. ಆದರೆ, ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಬೇಡ. ಆಯನೂರು ಕಾಲೇಜು ಬಳಿ 50 ಎಕರೆ ಜಾಗವಿದೆ. ಅಲ್ಲಿ ಯೋಜನೆ ಜಾರಿಗೊಳಿಸಬೇಕು ಎಂದು ಸಲಹೆ ನೀಡಿದರು.</p>.<p>ಸಂಸದ ಬಿ.ವೈ.ರಾಘವೇಂದ್ರ, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಸ್ಥಳಕ್ಕೆ ಆಗಮಿಸುವಂತೆ ವಿದ್ಯಾರ್ಥಿಗಳು ಪಟ್ಟು ಹಿಡಿದರು. ಪೊಲೀಸರು ಮತ್ತು ಕಾಲೇಜು ಆಡಳಿತ ಮಂಡಳಿ ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳ ಮನವೊಲಿಸಿದರು. ಪ್ರಾಂಶುಪಾಲರು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು.</p>.<p>ಸಹ್ಯಾದ್ರಿ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘ, ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ಕಾಲೇಜು ವಿದ್ಯಾರ್ಥಿ ಮುಖಂಡರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಸಹ್ಯಾದ್ರಿ ಕಾಲೇಜು ಕ್ಯಾಂಪಸ್ನಲ್ಲಿ ಖೇಲೋ ಇಂಡಿಯಾ ಯೋಜನೆಯ ವಿಶೇಷ ಕ್ರೀಡಾ ಸಂಕೀರ್ಣ ಮತ್ತು ಕ್ರೀಡಾ ತರಬೇತಿ ನಿರ್ಮಾಣ ಖಂಡಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.</p>.<p>ಈ ಕ್ರೀಡಾ ಸಂಕೀರ್ಣದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತದೆ. ಮೈಸೂರು ರಾಜ ಜಯಚಾಮರಾಜೇಂದ್ರ ಒಡೆಯರ್ ಅವರು ಶೈಕ್ಷಣಿಕ ಉದ್ದೇಶಕ್ಕಾಗಿ 100 ಎಕರೆ ಭೂಮಿ ಮೀಸಲಿಟ್ಟಿದ್ದರು. ಪ್ರಸ್ತುತ 6 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ವ್ಯಾಸಂಗ ಕೊಠಡಿಗಳು, ಹಾಸ್ಟೆಲ್ ಹಾಗೂ ವಾಚನಾಲಯ, ಪ್ರಯೋಗಾಲಯ ಸೇರಿದಂತೆ ವಿವಿಧ ಶೈಕ್ಷಣಿಕ ಅಭಿವೃದ್ಧಿ ಚಟುವಟಿಕೆಗಳಿಗೆ, ಮೂಲ ಸೌಲಭ್ಯಗಳಿಗೆ ನಗರದ ಮಧ್ಯದ ಈ ಪ್ರದೇಶದ ಆವಶ್ಯಕತೆ ಇದೆ. ಮುಂದಿನ ದಿನಗಳಲ್ಲಿ ಸ್ನಾತಕೋತ್ತರ ವಿಷಯಗಳ ಬೋಧನೆಗೆ ಕೊಠಡಿಗಳು ಬೇಕಾಗುತ್ತವೆ. ಆಗ ಜಾಗದ ಕೊರತೆ ಉಂಟಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಭವಿಷ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗಾಗಿ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಜಿಲ್ಲಾಡಳಿತ ಮತ್ತು ಕುವೆಂಪು ವಿಶ್ವವಿದ್ಯಾಲಯ ಈ ಯೋಜನೆ ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.</p>.<p>ಯೋಜನೆಗೆ ನಮ್ಮ ವಿರೋಧವಿಲ್ಲ. ಆದರೆ, ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಬೇಡ. ಆಯನೂರು ಕಾಲೇಜು ಬಳಿ 50 ಎಕರೆ ಜಾಗವಿದೆ. ಅಲ್ಲಿ ಯೋಜನೆ ಜಾರಿಗೊಳಿಸಬೇಕು ಎಂದು ಸಲಹೆ ನೀಡಿದರು.</p>.<p>ಸಂಸದ ಬಿ.ವೈ.ರಾಘವೇಂದ್ರ, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಸ್ಥಳಕ್ಕೆ ಆಗಮಿಸುವಂತೆ ವಿದ್ಯಾರ್ಥಿಗಳು ಪಟ್ಟು ಹಿಡಿದರು. ಪೊಲೀಸರು ಮತ್ತು ಕಾಲೇಜು ಆಡಳಿತ ಮಂಡಳಿ ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳ ಮನವೊಲಿಸಿದರು. ಪ್ರಾಂಶುಪಾಲರು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು.</p>.<p>ಸಹ್ಯಾದ್ರಿ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘ, ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ಕಾಲೇಜು ವಿದ್ಯಾರ್ಥಿ ಮುಖಂಡರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>