<p>ಶಿವಮೊಗ್ಗ: ರೈತರ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು‘ರೈತರ ಉತ್ಪನ್ನಗಳಿಗೆ ಬೆಲೆ ಸ್ವಾತಂತ್ರ್ಯ ಚಳವಳಿ’ ನಡೆಸಿದರು. ನಂತರ ಜಿಲ್ಲಾಡಳಿದ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.</p>.<p>76ನೇ ಸ್ವಾತಂತ್ರ್ಯೋತ್ಸವಕ್ಕೆ ದೇಶ ಸಜ್ಜಾಗಿದೆ. ಇದನ್ನು ರೈತರು ಬಿಟ್ಟು ರಾಜಕಾರಣಿಗಳು, ರಾಜಕೀಯ ಕೃಪಾಪೋಷಿತರು, ಕೈಗಾರಿಕೆ ಮಾಲೀಕರು, ವರ್ತಕರು, ನೌಕರಶಾಹಿಗಳು ಸಂಭ್ರಮಿಸುತ್ತಿ<br />ದ್ದಾರೆ. ಅವರ ಅಗತ್ಯಗಳನ್ನು ರೈತ ಅಗ್ಗದ ಬೆಲೆಯಲ್ಲಿ ಪೂರೈಸಿ ಸಾಲದ ಸುಳಿಗೆ ಸಿಲುಕಿದ್ದಾನೆ ಎಂದು ದೂರಿದರು.</p>.<p>‘ರೈತರಿಗೆ ಮಾತ್ರ ಇದುವರೆಗೂ ನಿಜವಾದ ಸ್ವಾತಂತ್ರ್ಯ ಸಿಕ್ಕಿಲ್ಲ. ರೈತರನ್ನು ಹೊರತುಪಡಿಸಿ ಎಲ್ಲರೂ ಬೆಲೆಗಳ ಲಾಭ ಪ್ರಯೋಜನ ಪಡೆಯುತ್ತಿದ್ದಾರೆ. ಹಾಗಾಗಿ ನಮ್ಮ ಬೆಳೆಗಳಿಗೆ ಬೆಲೆಯಾದರೂ ಬರಲಿ ಎಂಬ ನಿಟ್ಟಿನಲ್ಲಿ ಬೆಲೆ ಸ್ವಾತಂತ್ರ್ಯ ಚಳವಳಿ ಆರಂಭಿಸಿದ್ದೇವೆ’ ಎಂದರು.</p>.<p>ಕಾರ್ಖಾನೆಯ ಉತ್ಪಾದನೆಗಳಂತೆ ರೈತರ ಉತ್ಪನ್ನಗಳಿಗೂ ಬೆಲೆ ಭದ್ರತೆ ಕಾಯ್ದೆ ಜಾರಿಯಾಗಬೇಕು. ಕೃಷಿ ಬೆಲೆ ಆಯೋಗದ ಮಾರ್ಗದರ್ಶಿಯಲ್ಲಿಯೇ ಬೆಲೆ ಭದ್ರತೆ ಕಾಯ್ದೆ ಇರಬೇಕು. ಇಲ್ಲಿವರೆಗೂ ಬೆಲೆಯ ಮೋಸದಿಂದಾಗಿ ರೈತರ ಮೇಲೆ ಬಂದಿರುವ ಎಲ್ಲಾ ಸಾಲಗಳ ಹೊಣೆಗಾರಿಕೆ ಸರ್ಕಾರಗಳೇ ಹೊರಬೇಕು ಎಂದು ಆಗ್ರಹಿಸಿದರು.</p>.<p>ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ, ಪ್ರಮುಖರಾದ ಹಿಟ್ಟೂರು ರಾಜು, ಟಿ.ಎಂ.ಚಂದ್ರಪ್ಪ, ಬಿ.ಎಂ.ಚಿಕ್ಕಸ್ವಾಮಿ, ಕೆ.ರಾಘವೇಂದ್ರ, ಎಸ್.ಶಿವಮೂರ್ತಿ, ರುದ್ರೇಶ್, ಸಿ.ಚಂದ್ರಪ್ಪ, ಪಿ.ಡಿ.ಮಂಜಪ್ಪ, ರಾಮ ಚಂದ್ರಪ್ಪ, ಪಂಚಾಕ್ಷರಿ, ಜ್ಞಾನೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ರೈತರ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು‘ರೈತರ ಉತ್ಪನ್ನಗಳಿಗೆ ಬೆಲೆ ಸ್ವಾತಂತ್ರ್ಯ ಚಳವಳಿ’ ನಡೆಸಿದರು. ನಂತರ ಜಿಲ್ಲಾಡಳಿದ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.</p>.<p>76ನೇ ಸ್ವಾತಂತ್ರ್ಯೋತ್ಸವಕ್ಕೆ ದೇಶ ಸಜ್ಜಾಗಿದೆ. ಇದನ್ನು ರೈತರು ಬಿಟ್ಟು ರಾಜಕಾರಣಿಗಳು, ರಾಜಕೀಯ ಕೃಪಾಪೋಷಿತರು, ಕೈಗಾರಿಕೆ ಮಾಲೀಕರು, ವರ್ತಕರು, ನೌಕರಶಾಹಿಗಳು ಸಂಭ್ರಮಿಸುತ್ತಿ<br />ದ್ದಾರೆ. ಅವರ ಅಗತ್ಯಗಳನ್ನು ರೈತ ಅಗ್ಗದ ಬೆಲೆಯಲ್ಲಿ ಪೂರೈಸಿ ಸಾಲದ ಸುಳಿಗೆ ಸಿಲುಕಿದ್ದಾನೆ ಎಂದು ದೂರಿದರು.</p>.<p>‘ರೈತರಿಗೆ ಮಾತ್ರ ಇದುವರೆಗೂ ನಿಜವಾದ ಸ್ವಾತಂತ್ರ್ಯ ಸಿಕ್ಕಿಲ್ಲ. ರೈತರನ್ನು ಹೊರತುಪಡಿಸಿ ಎಲ್ಲರೂ ಬೆಲೆಗಳ ಲಾಭ ಪ್ರಯೋಜನ ಪಡೆಯುತ್ತಿದ್ದಾರೆ. ಹಾಗಾಗಿ ನಮ್ಮ ಬೆಳೆಗಳಿಗೆ ಬೆಲೆಯಾದರೂ ಬರಲಿ ಎಂಬ ನಿಟ್ಟಿನಲ್ಲಿ ಬೆಲೆ ಸ್ವಾತಂತ್ರ್ಯ ಚಳವಳಿ ಆರಂಭಿಸಿದ್ದೇವೆ’ ಎಂದರು.</p>.<p>ಕಾರ್ಖಾನೆಯ ಉತ್ಪಾದನೆಗಳಂತೆ ರೈತರ ಉತ್ಪನ್ನಗಳಿಗೂ ಬೆಲೆ ಭದ್ರತೆ ಕಾಯ್ದೆ ಜಾರಿಯಾಗಬೇಕು. ಕೃಷಿ ಬೆಲೆ ಆಯೋಗದ ಮಾರ್ಗದರ್ಶಿಯಲ್ಲಿಯೇ ಬೆಲೆ ಭದ್ರತೆ ಕಾಯ್ದೆ ಇರಬೇಕು. ಇಲ್ಲಿವರೆಗೂ ಬೆಲೆಯ ಮೋಸದಿಂದಾಗಿ ರೈತರ ಮೇಲೆ ಬಂದಿರುವ ಎಲ್ಲಾ ಸಾಲಗಳ ಹೊಣೆಗಾರಿಕೆ ಸರ್ಕಾರಗಳೇ ಹೊರಬೇಕು ಎಂದು ಆಗ್ರಹಿಸಿದರು.</p>.<p>ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ, ಪ್ರಮುಖರಾದ ಹಿಟ್ಟೂರು ರಾಜು, ಟಿ.ಎಂ.ಚಂದ್ರಪ್ಪ, ಬಿ.ಎಂ.ಚಿಕ್ಕಸ್ವಾಮಿ, ಕೆ.ರಾಘವೇಂದ್ರ, ಎಸ್.ಶಿವಮೂರ್ತಿ, ರುದ್ರೇಶ್, ಸಿ.ಚಂದ್ರಪ್ಪ, ಪಿ.ಡಿ.ಮಂಜಪ್ಪ, ರಾಮ ಚಂದ್ರಪ್ಪ, ಪಂಚಾಕ್ಷರಿ, ಜ್ಞಾನೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>