<p>ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಮರುವಸತಿಗಾಗಿ ನೀಡಿದ ಜಮೀನಿನ ದಾಖಲೆಗಳನ್ನು ಬದಲಾವಣೆ ಮಾಡದಿರುವ ಬಗ್ಗೆ ಶುಕ್ರವಾರ ಮುಳುಗಡೆ ರೈತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.</p>.<p>ಈ ಹಿಂದೆ ಸರ್ಕಾರವು 1959ರಿಂದ 69ರವರೆಗೆ ಶರಾವತಿ ನದಿಗೆ ಲಿಂಗನಮಕ್ಕಿ ಆಣೆಕಟ್ಟು ನಿರ್ಮಿಸಿ ವಿದ್ಯುತ್ ಉತ್ಪಾದನೆ ಮಾಡುವ ಘಟಕ ಸ್ಥಾಪಿಸಿದೆ. ಈ ಮಹತ್ವದ ಯೋಜನೆಗೆ ಜಿಲ್ಲೆಯ ಸಾಗರ ಮತ್ತು ಹೊಸನಗರ ತಾಲ್ಲೂಕಿನ ಅನೇಕ ಗ್ರಾಮಗಳು ಮುಳುಗಡೆಯಾಗಿದ್ದು, ಈ ಸ್ಥಳದಲ್ಲಿ ವಾಸಿಸುತ್ತಿದ್ದ ರೈತರು, ಗೇಣಿದಾರರು, ಕುಲಕಸುಬು ಮಾಡುತ್ತಿದ್ದ ಕುಟುಂಬಗಳು ತಾವು ಸ್ವಾಧೀನವಿದ್ದ ಮನೆ, ಜಮೀನುಗಳನ್ನು ಹಾಗೂ ಇತರ ಸ್ವತ್ತುಗಳನ್ನು ಸರ್ಕಾರ ಭೂ ಸ್ವಾಧೀನ ಪಡಿಸಿಕೊಂಡಿದ್ದರಿಂದ ಸುಮಾರು 7 ಸಾವಿರಕ್ಕಿಂತ ಹೆಚ್ಚಿನ ಕುಟುಂಬಗಳು ನಿರಾಶ್ರಿತರಾಗಿದ್ದವು ಎಂದು ಮನವಿಯಲ್ಲಿ ತಿಳಿಸಿದರು.</p>.<p>ಮುಳುಗಡೆ ಸಂತ್ರಸ್ತರಿಗೆ ಸರ್ಕಾರ ಪುನರ್ವಸತಿ ಕಲ್ಪಿಸಲು ಅರಣ್ಯ ಇಲಾಖೆ ಹೆಸರಿನಲ್ಲಿರುವ ಸಾಕಷ್ಟು ಜಮೀನನ್ನು ಅಂದಿನ ಕಾನೂನಿನನ್ವಯ ಸಾಕಷ್ಟು ನಡುವಳಿ ಮೂಲಕ ಜಮೀನು ಮಂಜೂರು ಮಾಡಲಾಗಿತ್ತು. ಆದರೆ, ಇದುವರೆಗೂ ನಿರಾಶ್ರಿತರ ಹೆಸರಿಗೆ ಈ ಜಮೀನಿನ ದಾಖಲೆಗಳನ್ನು ಮಾಡಿಕೊಟ್ಟಿಲ್ಲ ಎಂದು ದೂರಿದರು.</p>.<p>ಈಗಾಗಲೇ ಕಂದಾಯ ಇಲಾಖೆಗೆ ಹಸ್ತಾಂತರವಾಗಿ ಸಂತ್ರಸ್ತರಿಗೆ ವಿತರಿಸಿರುವ ಜಮೀನಿನ ಯಾವುದೇ ದಾಖಲೆ ಬದಲಾವಣೆ ಮಾಡದಂತೆ ಯಥಾ ಸ್ಥಿತಿ ಕಾಪಾಡಿಕೊಂಡು ಹೋಗಬೇಕು. ಸರ್ಕಾರದಿಂದ ಪೂರ್ವಾನುಮತಿ ಪಡೆಯುವ ಪ್ರಕ್ರಿಯೆ ಶೀಘ್ರ ಮಾಡಬೇಕು ಎಂದು ಸಂತ್ರಸ್ತ ರೈತರು ಮನವಿಯಲ್ಲಿ ತಿಳಿಸಿದ್ದಾರೆ.</p>.<p>ಪ್ರಮುಖರಾದ ತೀ.ನಾ.ಶ್ರೀನಿವಾಸ್, ಎಂ.ಬಿ.ರಾಜು, ಎಸ್.ಬಿ. ಧರ್ಮರಾಜ್, ನಾರಾಯಣಪ್ಪ, ರಘುಪತಿ, ಸುರೇಶ, ಮೋಹನ, ರಮೇಶ್, ಗಣಪತಿ, ಚಂದ್ರಪ್ಪ, ಲಕ್ಷ್ಮಣಪ್ಪ, ಅಣ್ಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಮರುವಸತಿಗಾಗಿ ನೀಡಿದ ಜಮೀನಿನ ದಾಖಲೆಗಳನ್ನು ಬದಲಾವಣೆ ಮಾಡದಿರುವ ಬಗ್ಗೆ ಶುಕ್ರವಾರ ಮುಳುಗಡೆ ರೈತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.</p>.<p>ಈ ಹಿಂದೆ ಸರ್ಕಾರವು 1959ರಿಂದ 69ರವರೆಗೆ ಶರಾವತಿ ನದಿಗೆ ಲಿಂಗನಮಕ್ಕಿ ಆಣೆಕಟ್ಟು ನಿರ್ಮಿಸಿ ವಿದ್ಯುತ್ ಉತ್ಪಾದನೆ ಮಾಡುವ ಘಟಕ ಸ್ಥಾಪಿಸಿದೆ. ಈ ಮಹತ್ವದ ಯೋಜನೆಗೆ ಜಿಲ್ಲೆಯ ಸಾಗರ ಮತ್ತು ಹೊಸನಗರ ತಾಲ್ಲೂಕಿನ ಅನೇಕ ಗ್ರಾಮಗಳು ಮುಳುಗಡೆಯಾಗಿದ್ದು, ಈ ಸ್ಥಳದಲ್ಲಿ ವಾಸಿಸುತ್ತಿದ್ದ ರೈತರು, ಗೇಣಿದಾರರು, ಕುಲಕಸುಬು ಮಾಡುತ್ತಿದ್ದ ಕುಟುಂಬಗಳು ತಾವು ಸ್ವಾಧೀನವಿದ್ದ ಮನೆ, ಜಮೀನುಗಳನ್ನು ಹಾಗೂ ಇತರ ಸ್ವತ್ತುಗಳನ್ನು ಸರ್ಕಾರ ಭೂ ಸ್ವಾಧೀನ ಪಡಿಸಿಕೊಂಡಿದ್ದರಿಂದ ಸುಮಾರು 7 ಸಾವಿರಕ್ಕಿಂತ ಹೆಚ್ಚಿನ ಕುಟುಂಬಗಳು ನಿರಾಶ್ರಿತರಾಗಿದ್ದವು ಎಂದು ಮನವಿಯಲ್ಲಿ ತಿಳಿಸಿದರು.</p>.<p>ಮುಳುಗಡೆ ಸಂತ್ರಸ್ತರಿಗೆ ಸರ್ಕಾರ ಪುನರ್ವಸತಿ ಕಲ್ಪಿಸಲು ಅರಣ್ಯ ಇಲಾಖೆ ಹೆಸರಿನಲ್ಲಿರುವ ಸಾಕಷ್ಟು ಜಮೀನನ್ನು ಅಂದಿನ ಕಾನೂನಿನನ್ವಯ ಸಾಕಷ್ಟು ನಡುವಳಿ ಮೂಲಕ ಜಮೀನು ಮಂಜೂರು ಮಾಡಲಾಗಿತ್ತು. ಆದರೆ, ಇದುವರೆಗೂ ನಿರಾಶ್ರಿತರ ಹೆಸರಿಗೆ ಈ ಜಮೀನಿನ ದಾಖಲೆಗಳನ್ನು ಮಾಡಿಕೊಟ್ಟಿಲ್ಲ ಎಂದು ದೂರಿದರು.</p>.<p>ಈಗಾಗಲೇ ಕಂದಾಯ ಇಲಾಖೆಗೆ ಹಸ್ತಾಂತರವಾಗಿ ಸಂತ್ರಸ್ತರಿಗೆ ವಿತರಿಸಿರುವ ಜಮೀನಿನ ಯಾವುದೇ ದಾಖಲೆ ಬದಲಾವಣೆ ಮಾಡದಂತೆ ಯಥಾ ಸ್ಥಿತಿ ಕಾಪಾಡಿಕೊಂಡು ಹೋಗಬೇಕು. ಸರ್ಕಾರದಿಂದ ಪೂರ್ವಾನುಮತಿ ಪಡೆಯುವ ಪ್ರಕ್ರಿಯೆ ಶೀಘ್ರ ಮಾಡಬೇಕು ಎಂದು ಸಂತ್ರಸ್ತ ರೈತರು ಮನವಿಯಲ್ಲಿ ತಿಳಿಸಿದ್ದಾರೆ.</p>.<p>ಪ್ರಮುಖರಾದ ತೀ.ನಾ.ಶ್ರೀನಿವಾಸ್, ಎಂ.ಬಿ.ರಾಜು, ಎಸ್.ಬಿ. ಧರ್ಮರಾಜ್, ನಾರಾಯಣಪ್ಪ, ರಘುಪತಿ, ಸುರೇಶ, ಮೋಹನ, ರಮೇಶ್, ಗಣಪತಿ, ಚಂದ್ರಪ್ಪ, ಲಕ್ಷ್ಮಣಪ್ಪ, ಅಣ್ಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>