ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಳೀನ್ ಕುಮಾರ್ ಕಟೀಲ್‌ ವಿರುದ್ಧ ಶಿವಮೊಗ್ಗ ಯುವ ಕಾಂಗ್ರೆಸ್ ಪ್ರತಿಭಟನೆ

Last Updated 19 ಅಕ್ಟೋಬರ್ 2021, 10:36 IST
ಅಕ್ಷರ ಗಾತ್ರ

ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ನಾಯಕರು ಬಾಲಿಶತನ ಹಾಗೂ ಜೋಕರ್ ಹೇಳಿಕೆ ನೀಡುತ್ತಿದ್ದಾರೆ. ದೇಶದಲ್ಲಿ ಬಿಜೆಪಿ ಸಂಸ್ಕೃತಿ ಜೋಕರ್ ಸಂಸ್ಕೃತಿಯತ್ತ ಸಾಗಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಸಂಸದ ಸ್ಥಾನ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್, ಜಿಲ್ಲಾ ಘಟಕದ ಎಚ್.ಪಿ.ಗಿರೀಶ್, ಬ್ಲಾಕ್ ಯುವ ಕಾಂಗ್ರೆಸ್‌ನ ಎಸ್.ಕುಮಾರೇಶ್, ಕಾರ್ಯದರ್ಶಿ ಎಂ ರಾಹುಲ್, ಪುಷ್ಪಕ್ ಕುಮಾರ್ , ಯುವ ಕಾಂಗ್ರೆಸ್ ಮುಖಂಡ ಟಿ.ವಿ.ರಂಜಿತ್ , ಶ್ರೀನಿವಾಸ್ ,ರಾಹುಲ್, ಪವನ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT