ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಶ್ರೀ ಅವರು ಸರ್ಕಾರಕ್ಕೆ ಪತ್ರ ಬರೆದು ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕುವೆಂಪು ಅವರಿಗೆ ಅವಮಾನ ಎಸಗಿರುವ ಘಟನೆಯನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸಿದ್ದಾರೆ. ಹೀಗಾಗಿ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು. ಒಕ್ಕಲಿಗರ ಸಂಘದ ಪ್ರಮುಖರಾದ ಎನ್. ರಮೇಶ್, ಬಸವರಾಜ್, ಭಾಗೀರಥಿ, ವೆಂಕಟರಮಣ ಗೌಡ, ಶೇಷಗಿರಿ ಇದ್ದರು.