<p><strong>ಭದ್ರಾವತಿ</strong>: ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆ ನೀತಿಗಳನ್ನು ಖಂಡಿಸಿ ನಗರ ಮಂಡಲದಿಂದ ಬಸ್ ನಿಲ್ದಾಣದ ಮುಂಭಾಗ ಶನಿವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.</p>.<p>‘ಕಾಂಗ್ರೆಸ್ ಸರ್ಕಾರ ಹಲವು ಹಗರಣಗಳಲ್ಲಿ ಸಿಲುಕಿದೆ. ವಾಲ್ಮೀಕಿ ನಿಗಮಕ್ಕೆ ಮೀಸಲಾದ ₹187 ಕೋಟಿ ಹಣವನ್ನು ಲೂಟಿ ಮಾಡಿದೆ. ಮೂಡಾ ಹರಗಣ, ಇತ್ತೀಚಿನ ಹೊಸ ಸ್ಮಾರ್ಟ್ ಮೀಟರ್ ಅಳವಡಿಕೆ ಪ್ರಕರಣಗಳಲ್ಲಿ ಹಗರಣ ನಡೆದಿದೆ’ ಎಂದು ಮಂಡಲ ಅಧ್ಯಕ್ಷ ಧರ್ಮಪ್ರಸಾದ್ ಆರೋಪಿಸಿದರು.</p>.<p>ಹಾಲು, ಡೀಸೆಲ್ ಬೆಲೆ ಏರಿಕೆ ಜೊತೆಗೆ ದಿನ ಬಳಕೆಯ ವಸ್ತುಗಳ ಬೆಲೆ ದುಬಾರಿಯಾಗಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಪೂರೈಕೆಗಾಗಿ ಸಾಮಾನ್ಯ ಜನರ ಮೇಲೆ ಬೆಲೆ ಏರಿಕೆಯ ಪ್ರಹಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಜನಸಾಮಾನ್ಯರನ್ನು ರಕ್ಷಿಸಬೇಕಾದ ಸರ್ಕಾರ ಭಕ್ಷಣೆಗೆ ಮುಂದಾಗಿದೆ ಎಂದು ಮುಖಂಡ ತೀರ್ಥಯ್ಯ ಟೀಕಿಸಿದರು.</p>.<p>ಜಿಲ್ಲಾ ಉಪಾಧ್ಯಕ್ಷ ಆನಂದ್ ಕುಮಾರ್ ಜಿ., ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚೆನ್ನೇಶ್ ಹಾಗೂ ಮೊಸರಳ್ಳಿ ಅಣ್ಣಪ್ಪ, ಪ್ರಮುಖರಾದ ಸತೀಶ್, ರಾಜ್ ಶೇಖರ್, ಶಿವಮೂರ್ತಿ, ರಘು ರಾವ್, ನಿರಂಜನ್ ಗೌಡ, ಧನುಷ್ ಬೋಸ್ಲೆ, ಆಟೋ ಮೂರ್ತಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ</strong>: ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆ ನೀತಿಗಳನ್ನು ಖಂಡಿಸಿ ನಗರ ಮಂಡಲದಿಂದ ಬಸ್ ನಿಲ್ದಾಣದ ಮುಂಭಾಗ ಶನಿವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.</p>.<p>‘ಕಾಂಗ್ರೆಸ್ ಸರ್ಕಾರ ಹಲವು ಹಗರಣಗಳಲ್ಲಿ ಸಿಲುಕಿದೆ. ವಾಲ್ಮೀಕಿ ನಿಗಮಕ್ಕೆ ಮೀಸಲಾದ ₹187 ಕೋಟಿ ಹಣವನ್ನು ಲೂಟಿ ಮಾಡಿದೆ. ಮೂಡಾ ಹರಗಣ, ಇತ್ತೀಚಿನ ಹೊಸ ಸ್ಮಾರ್ಟ್ ಮೀಟರ್ ಅಳವಡಿಕೆ ಪ್ರಕರಣಗಳಲ್ಲಿ ಹಗರಣ ನಡೆದಿದೆ’ ಎಂದು ಮಂಡಲ ಅಧ್ಯಕ್ಷ ಧರ್ಮಪ್ರಸಾದ್ ಆರೋಪಿಸಿದರು.</p>.<p>ಹಾಲು, ಡೀಸೆಲ್ ಬೆಲೆ ಏರಿಕೆ ಜೊತೆಗೆ ದಿನ ಬಳಕೆಯ ವಸ್ತುಗಳ ಬೆಲೆ ದುಬಾರಿಯಾಗಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಪೂರೈಕೆಗಾಗಿ ಸಾಮಾನ್ಯ ಜನರ ಮೇಲೆ ಬೆಲೆ ಏರಿಕೆಯ ಪ್ರಹಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಜನಸಾಮಾನ್ಯರನ್ನು ರಕ್ಷಿಸಬೇಕಾದ ಸರ್ಕಾರ ಭಕ್ಷಣೆಗೆ ಮುಂದಾಗಿದೆ ಎಂದು ಮುಖಂಡ ತೀರ್ಥಯ್ಯ ಟೀಕಿಸಿದರು.</p>.<p>ಜಿಲ್ಲಾ ಉಪಾಧ್ಯಕ್ಷ ಆನಂದ್ ಕುಮಾರ್ ಜಿ., ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚೆನ್ನೇಶ್ ಹಾಗೂ ಮೊಸರಳ್ಳಿ ಅಣ್ಣಪ್ಪ, ಪ್ರಮುಖರಾದ ಸತೀಶ್, ರಾಜ್ ಶೇಖರ್, ಶಿವಮೂರ್ತಿ, ರಘು ರಾವ್, ನಿರಂಜನ್ ಗೌಡ, ಧನುಷ್ ಬೋಸ್ಲೆ, ಆಟೋ ಮೂರ್ತಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>