ಬುಧವಾರ, ಮಾರ್ಚ್ 22, 2023
33 °C
ಜಿಲ್ಲಾಧಿಕಾರಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಮನವಿ

ಏಕರೂಪ ವೇಳಾಪಟ್ಟಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕುವೆಂಪು ವಿವಿಯ ಸ್ನಾತಕ ವಿದ್ಯಾರ್ಥಿಗಳಿಗೆ ಏಕರೂಪ ವೇಳಾಪಟ್ಟಿ ಜಾರಿಗೊಳಿಸಲು ಆಗ್ರಹಿಸಿ ಮತ್ತು ಹೆಚ್ಚಳ ಮಾಡಿರುವ ಪರೀಕ್ಷಾ ಶುಲ್ಕ ಕಡಿಮೆ ಮಾಡಲು ಒತ್ತಾಯಿಸಿ ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸೋಮವಾರ ಮನವಿ ಸಲ್ಲಿಸಿದರು.

‘ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಸ್ಪಷ್ಟತೆ ಇಲ್ಲ. ಪ್ರಸಕ್ತ ಸ್ನಾತಕ ಪದವಿ ಪ್ರಥಮ ಸೆಮ್‌ನ ವಿದ್ಯಾರ್ಥಿಗಳ ತರಗತಿಗಳು ಕಳೆದ ವರ್ಷ ಸೆ. 1ರಂದು ಆರಂಭವಾಗಿವೆ. ಆದರೆ, ಆಗ ಪ್ರಥಮ ವರ್ಷದ ತರಗತಿಗಳು, 2 ಮತ್ತು 3ನೇ ವರ್ಷದ ವಿದ್ಯಾರ್ಥಿಗಳ ತರಗತಿಗಳು ಸೆ. 17ರವರೆಗೆ ನಡೆದಿದ್ದ ಕಾರಣ ಬಹುತೇಕ ಕಾಲೇಜಿನಲ್ಲಿ ಕೊಠಡಿಗಳ ಕೊರತೆಯಿಂದ ತರಗತಿಗಳು ನಡೆದಿಲ್ಲ’ ಎಂದು ಆರೋಪಿಸಿದರು.

‘2021 -22ನೇ ಸಾಲಿನ 2 ಮತ್ತು 3ನೇ ವರ್ಷದ ವಿದ್ಯಾರ್ಥಿಗಳಿಗೆ ಸೆ. 29ರಿಂದ ಅ. 20ರವರೆಗೆ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರಣದಿಂದಲೂ ತರಗತಿಗಳು ಸಮರ್ಪಕವಾಗಿ ನಡೆಯಲಿಲ್ಲ. ಹೀಗೆ ಅವೈಜ್ಞಾನಿಕ ವೇಳಾಪಟ್ಟಿಯಿಂದ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ಆದ್ದರಿಂದ ಎಲ್ಲ ವರ್ಷದ ವಿದ್ಯಾರ್ಥಿಗಳಿಗೆ ಇತರ ವಿವಿಗಳಲ್ಲಿ ಇರುವಂತೆ ಏಕರೂಪ ವೇಳಾಪಟ್ಟಿಯನ್ನು ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಕುವೆಂಪು ವಿವಿಯ ಎನ್ಇಪಿ ಮೊದಲನೇ ಬ್ಯಾಚ್‌ನ ಮೊದಲ ಸೆಮ್ ವಿದ್ಯಾರ್ಥಿಗಳ ವಿವಿಧ ಕೋರ್ಸ್‌ಗಳ ಪರೀಕ್ಷಾ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿದೆ. ಎಬಿವಿಪಿ ಪ್ರತಿಭಟನೆಯ ನಂತರ ಕೇವಲ ಬಿಕಾಂ ವಿದ್ಯಾರ್ಥಿಗಳಿಗೆ ಮಾತ್ರ ₹ 300 ಕಡಿಮೆ ಮಾಡಲಾಗಿದೆ. ಎಲ್ಲ ಕೋರ್ಸ್ ಮತ್ತು ಎಲ್ಲ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಏರಿಕೆ ಮಾಡಿರುವ ಪರೀಕ್ಷಾ ಶುಲ್ಕವನ್ನು ತಕ್ಷಣವೇ ಕಡಿಮೆ ಮಾಡಬೇಕು’ ಎಂದು ಮನವಿಯಲ್ಲಿ ತಿಳಿಸಿದರು.

ಪ್ರತಿಭಟನೆಯಲ್ಲಿ ಎಚ್.ಕೆ. ಪ್ರವೀಣ್, ವಿಜಯ್, ಮನು, ರವಿ, ಸ್ಫೂರ್ತಿ, ಯಶಸ್ವಿನಿ, ವಿಧಾತ್ರಿ, ಶರಣಪ್ಪ, ಪ್ರಖ್ಯಾತ್ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು