<p><strong>ಸಾಗರ: ತಾಲ್ಲೂಕಿನ ಭಾರಂಗಿ ಹೋಬಳಿ ಸೇರಿದಂತೆ ತಾಲ್ಲೂಕು ಕೇಂದ್ರದಿಂದ ದೂರದ ಪ್ರದೇಶದಲ್ಲಿರುವ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಗುರುವಾರ ಕರ್ನಾಟಕ ಅರಣ್ಯಮೂಲ ಬುಡಕಟ್ಟು ಒಕ್ಕೂಟ ಹಾಗೂ ರೈತ ಸಂಘದ ವತಿಯಿಂದ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.</strong></p>.<p><strong>ಭಾರಂಗಿ ಹೋಬಳಿ ಇಂದ್ರೋಡಿ ಮನೆ ಶಾಲೆಯಿಂದ ಕುಡುಗುಂಜಿಯವರೆಗೆ 10 ಕಿ.ಮೀ. ದೂರದ ರಸ್ತೆ ಡಾಂಬರೀಕರಣಗೊಳಿಸುವಂತೆ ದೀರ್ಘಕಾಲದಿಂದ ಒತ್ತಾಯಿಸುತ್ತಿದ್ದರೂ ತಾಲ್ಲೂಕು ಆಡಳಿತ ಅದಕ್ಕೆ ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.</strong></p>.<p><strong>ಕುಡುಗುಂಜಿ, ಸುಂಕದಮನೆ, ಕೆರೋಡಿ, ಐತಾಳಮನೆ, ವಟ್ಟಕ್ಕಿ, ಹೆನ್ನಿ ಮೊದಲಾದ ಗ್ರಾಮಗಳು ರಸ್ತೆ, ಕುಡಿಯುವ ನೀರು, ವಿದ್ಯುತ್ ಮೊದಲಾದ ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿವೆ. ಈ ಹಿಂದೆ ಶಂಕುಸ್ಥಾಪನೆ ನೆರವೇರಿಸಿದ ರಸ್ತೆ ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.</strong></p>.<p><strong>ಹಿಂದಿನ ಶಾಸಕರು ಶಂಕುಸ್ಥಾಪನೆ ನೆರವೇರಿಸಿದ್ದಾರೆ ಎಂದು ಈಗಿನ ಶಾಸಕರು ಕಾಮಗಾರಿ ನಡೆಸಲು ಆಸಕ್ತಿ ತೋರುತ್ತಿಲ್ಲ. ಇದರಿಂದಾಗಿ ಭಾರಂಗಿ ಹೋಬಳಿಯ ಅನೇಕ ಗ್ರಾಮಗಳ ಜನರು ಮೂಲ ಸೌಕರ್ಯಗಳ ಕೊರತೆಯಿಂದ ನಲುಗಿ ಹೋಗಿದ್ದಾರೆ ಎಂದು ಪ್ರತಿಭಟನಾಕಾರರು ತಮ್ಮ ಅಹವಾಲು ಮಂಡಿಸಿದರು.</strong></p>.<p><strong>ಕರ್ನಾಟಕ ಅರಣ್ಯಮೂಲ ಬುಡಕಟ್ಟು ಒಕ್ಕೂಟದ ಜಿಲ್ಲಾ ಸಂಚಾಲಕ ರಾಮಣ್ಣ ಹಸಲರು, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮಂಜಪ್ಪ ಹಿರೇನೆಲ್ಲೂರು, ದೇವು ಆಲಳ್ಳಿ, ಹೊಯ್ಸಳ ಗಣಪತಿಯಪ್ಪ, ನಾಗರಾಜ್, ಲಕ್ಷ್ಮಮ್ಮ ಹಿರೇಮನೆ, ಈಶ್ವರಪ್ಪ, ಶಿಲ್ಪಾ, ಗಣೇಶ್ ಇದ್ದರು.</strong></p>.<p><strong>ಬಾಕ್ಸ್ : ರಸ್ತೆ ಹಾಳಾಗಿರುವುದರಿಂದ ಭಾರಂಗಿ ಹೋಬಳಿಯ ಗ್ರಾಮಸ್ಥರು ಕೈಕಾಲು ಮುರಿದುಕೊಂಡು ಆಸ್ಪತ್ರೆ ಸೇರುತ್ತಿದ್ದಾರೆ. ತಾಲ್ಲೂಕು ಕೇಂದ್ರಕ್ಕೆ ಬರಲು ಗ್ರಾಮಸ್ಥರು ಹರಸಾಹಸ ಮಾಡಬೇಕಾಗಿದೆ. </strong></p>.<p><strong>ರಾಮಣ್ಣ ಹಸಲರು, ಜಿಲ್ಲಾ ಸಂಚಾಲಕ, ಕರ್ನಾಟಕ ಅರಣ್ಯಮೂಲ ಬುಡಕಟ್ಟು ಒಕ್ಕೂಟ.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ತಾಲ್ಲೂಕಿನ ಭಾರಂಗಿ ಹೋಬಳಿ ಸೇರಿದಂತೆ ತಾಲ್ಲೂಕು ಕೇಂದ್ರದಿಂದ ದೂರದ ಪ್ರದೇಶದಲ್ಲಿರುವ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಗುರುವಾರ ಕರ್ನಾಟಕ ಅರಣ್ಯಮೂಲ ಬುಡಕಟ್ಟು ಒಕ್ಕೂಟ ಹಾಗೂ ರೈತ ಸಂಘದ ವತಿಯಿಂದ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.</strong></p>.<p><strong>ಭಾರಂಗಿ ಹೋಬಳಿ ಇಂದ್ರೋಡಿ ಮನೆ ಶಾಲೆಯಿಂದ ಕುಡುಗುಂಜಿಯವರೆಗೆ 10 ಕಿ.ಮೀ. ದೂರದ ರಸ್ತೆ ಡಾಂಬರೀಕರಣಗೊಳಿಸುವಂತೆ ದೀರ್ಘಕಾಲದಿಂದ ಒತ್ತಾಯಿಸುತ್ತಿದ್ದರೂ ತಾಲ್ಲೂಕು ಆಡಳಿತ ಅದಕ್ಕೆ ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.</strong></p>.<p><strong>ಕುಡುಗುಂಜಿ, ಸುಂಕದಮನೆ, ಕೆರೋಡಿ, ಐತಾಳಮನೆ, ವಟ್ಟಕ್ಕಿ, ಹೆನ್ನಿ ಮೊದಲಾದ ಗ್ರಾಮಗಳು ರಸ್ತೆ, ಕುಡಿಯುವ ನೀರು, ವಿದ್ಯುತ್ ಮೊದಲಾದ ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿವೆ. ಈ ಹಿಂದೆ ಶಂಕುಸ್ಥಾಪನೆ ನೆರವೇರಿಸಿದ ರಸ್ತೆ ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.</strong></p>.<p><strong>ಹಿಂದಿನ ಶಾಸಕರು ಶಂಕುಸ್ಥಾಪನೆ ನೆರವೇರಿಸಿದ್ದಾರೆ ಎಂದು ಈಗಿನ ಶಾಸಕರು ಕಾಮಗಾರಿ ನಡೆಸಲು ಆಸಕ್ತಿ ತೋರುತ್ತಿಲ್ಲ. ಇದರಿಂದಾಗಿ ಭಾರಂಗಿ ಹೋಬಳಿಯ ಅನೇಕ ಗ್ರಾಮಗಳ ಜನರು ಮೂಲ ಸೌಕರ್ಯಗಳ ಕೊರತೆಯಿಂದ ನಲುಗಿ ಹೋಗಿದ್ದಾರೆ ಎಂದು ಪ್ರತಿಭಟನಾಕಾರರು ತಮ್ಮ ಅಹವಾಲು ಮಂಡಿಸಿದರು.</strong></p>.<p><strong>ಕರ್ನಾಟಕ ಅರಣ್ಯಮೂಲ ಬುಡಕಟ್ಟು ಒಕ್ಕೂಟದ ಜಿಲ್ಲಾ ಸಂಚಾಲಕ ರಾಮಣ್ಣ ಹಸಲರು, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮಂಜಪ್ಪ ಹಿರೇನೆಲ್ಲೂರು, ದೇವು ಆಲಳ್ಳಿ, ಹೊಯ್ಸಳ ಗಣಪತಿಯಪ್ಪ, ನಾಗರಾಜ್, ಲಕ್ಷ್ಮಮ್ಮ ಹಿರೇಮನೆ, ಈಶ್ವರಪ್ಪ, ಶಿಲ್ಪಾ, ಗಣೇಶ್ ಇದ್ದರು.</strong></p>.<p><strong>ಬಾಕ್ಸ್ : ರಸ್ತೆ ಹಾಳಾಗಿರುವುದರಿಂದ ಭಾರಂಗಿ ಹೋಬಳಿಯ ಗ್ರಾಮಸ್ಥರು ಕೈಕಾಲು ಮುರಿದುಕೊಂಡು ಆಸ್ಪತ್ರೆ ಸೇರುತ್ತಿದ್ದಾರೆ. ತಾಲ್ಲೂಕು ಕೇಂದ್ರಕ್ಕೆ ಬರಲು ಗ್ರಾಮಸ್ಥರು ಹರಸಾಹಸ ಮಾಡಬೇಕಾಗಿದೆ. </strong></p>.<p><strong>ರಾಮಣ್ಣ ಹಸಲರು, ಜಿಲ್ಲಾ ಸಂಚಾಲಕ, ಕರ್ನಾಟಕ ಅರಣ್ಯಮೂಲ ಬುಡಕಟ್ಟು ಒಕ್ಕೂಟ.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>