<p><strong>ಶಿವಮೊಗ್ಗ:</strong> ಕ್ರೈಸ್ತರ ಮೇಲೆ ನಡೆದ ಹಲ್ಲೆ ಖಂಡಿಸಿ ಜಿಲ್ಲಾ ಕ್ರೈಸ್ತ ಒಕ್ಕೂಟ, ಜಿಲ್ಲಾ ಫಾಸ್ಟರ್ ಫೆಲೋಶಿಪ್, ಅಖಿಲ ಭಾರತ ಕ್ರೈಸ್ತ ಮಹಾಸಭಾ, ಅಖಿಲ ಕರ್ನಾಟಕ ಫಾಸ್ಪರ್ ಮತ್ತು ಲೀಡರ್ ಫೆಲೋಶಿಪ್ ಮತ್ತಿತರ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲೆಯ ಸೊರಬ, ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ನಡೆಸುತ್ತಿದ್ದ ಕ್ರೈಸ್ತರ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ.</p>.<p>ಸರ್ಕಾರದ ಜವಾಬ್ದಾರಿ ಸ್ಥಾನದಲ್ಲಿರುವ ಕೆಲವು ಜನಪ್ರತಿನಿಧಿಗಳು ಕುಮ್ಮಕ್ಕು ನೀಡುವ ಮೂಲಕ ಸಮಾಜದ ಶಾಂತಿಗೆ ಭಂಗ ತರುತ್ತಿರುದ್ದಾರೆ. ಕ್ರೈಸ್ತ ಗುರುಗಳು, ನಾಯಕರುಗಳು ಬಲವಂತವಾಗಿ ಹಾಗೂ ಆಮಿಷ ಒಡ್ಡಿ ಮತಾಂತರ ಮಾಡುತ್ತಿದ್ದಾರೆ ಎಂದು ಆಪಾದಿಸುತ್ತಿದ್ದಾರೆ. ಅಂತಹ ನಿರ್ದಿಷ್ಟ ಪ್ರಕರಣಗಳು ಇದ್ದರೆ ದೂರು ನೀಡಲಿ. ಆದರೆ, ಕಾನೂನು ಕೈಗೆತ್ತಿಕೊಂಡು ಹಲ್ಲೆ ಮಾಡುವುದು ಸಲ್ಲದು ಎಂದು ಖಂಡಿಸಿದರು.</p>.<p>ಹಲ್ಲೆಗೆ ಒಳಗಾದ ದೇವರ ಸೇವಕರು ಪೊಲೀಸರಿಗೆ ದೂರು ನೀಡಿದಾಗ, ದೂರು ಸ್ವೀಕರಿಸದೆ ಏಕ ಪಕ್ಷೀಯವಾಗಿ ಹಲ್ಲೆಗೊಳಗಾದವರ ಮೇಲೆ ಎಫ್ಐಆರ್ ದಾಖಲಿಸಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಶಾಂತಿಯುತವಾಗಿ ಕ್ರೈಸ್ತರು ಪ್ರಾರ್ಥನೆ ಸಲ್ಲಿಸಲು ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಕ್ರೈಸ್ತರ ಮೇಲೆ ನಡೆದ ಹಲ್ಲೆ ಖಂಡಿಸಿ ಜಿಲ್ಲಾ ಕ್ರೈಸ್ತ ಒಕ್ಕೂಟ, ಜಿಲ್ಲಾ ಫಾಸ್ಟರ್ ಫೆಲೋಶಿಪ್, ಅಖಿಲ ಭಾರತ ಕ್ರೈಸ್ತ ಮಹಾಸಭಾ, ಅಖಿಲ ಕರ್ನಾಟಕ ಫಾಸ್ಪರ್ ಮತ್ತು ಲೀಡರ್ ಫೆಲೋಶಿಪ್ ಮತ್ತಿತರ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲೆಯ ಸೊರಬ, ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ನಡೆಸುತ್ತಿದ್ದ ಕ್ರೈಸ್ತರ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ.</p>.<p>ಸರ್ಕಾರದ ಜವಾಬ್ದಾರಿ ಸ್ಥಾನದಲ್ಲಿರುವ ಕೆಲವು ಜನಪ್ರತಿನಿಧಿಗಳು ಕುಮ್ಮಕ್ಕು ನೀಡುವ ಮೂಲಕ ಸಮಾಜದ ಶಾಂತಿಗೆ ಭಂಗ ತರುತ್ತಿರುದ್ದಾರೆ. ಕ್ರೈಸ್ತ ಗುರುಗಳು, ನಾಯಕರುಗಳು ಬಲವಂತವಾಗಿ ಹಾಗೂ ಆಮಿಷ ಒಡ್ಡಿ ಮತಾಂತರ ಮಾಡುತ್ತಿದ್ದಾರೆ ಎಂದು ಆಪಾದಿಸುತ್ತಿದ್ದಾರೆ. ಅಂತಹ ನಿರ್ದಿಷ್ಟ ಪ್ರಕರಣಗಳು ಇದ್ದರೆ ದೂರು ನೀಡಲಿ. ಆದರೆ, ಕಾನೂನು ಕೈಗೆತ್ತಿಕೊಂಡು ಹಲ್ಲೆ ಮಾಡುವುದು ಸಲ್ಲದು ಎಂದು ಖಂಡಿಸಿದರು.</p>.<p>ಹಲ್ಲೆಗೆ ಒಳಗಾದ ದೇವರ ಸೇವಕರು ಪೊಲೀಸರಿಗೆ ದೂರು ನೀಡಿದಾಗ, ದೂರು ಸ್ವೀಕರಿಸದೆ ಏಕ ಪಕ್ಷೀಯವಾಗಿ ಹಲ್ಲೆಗೊಳಗಾದವರ ಮೇಲೆ ಎಫ್ಐಆರ್ ದಾಖಲಿಸಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಶಾಂತಿಯುತವಾಗಿ ಕ್ರೈಸ್ತರು ಪ್ರಾರ್ಥನೆ ಸಲ್ಲಿಸಲು ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>