<p><strong>ಶಿವಮೊಗ್ಗ: </strong>ಕಾಮಗಾರಿ ವಿಳಂಬದ ಪರಿಣಾಮ ವಿನೋಬನಗರ 100 ಅಡಿ ರಸ್ತೆದೂಳುಮಯವಾಗಿದೆ.ಈ ಭಾಗದ ಜನರು ಶ್ವಾಸಕೋಶಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿನಾಗರಿಕರು ಶುಕ್ರವಾರ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.</p>.<p>‘ಸ್ಮಾರ್ಟ್ಸಿಟಿ’ ಹೆಸರಿನಲ್ಲಿ ನಗರದಎಲ್ಲೆಡೆ ಕಾಮಗಾರಿಗಳು ನಡೆಯುತ್ತಿವೆ. ಅವೈಜ್ಞಾನಿಕ ಕಾಮಗಾರಿ ಪರಿಣಾಮ ಈ ಭಾಗದಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದೆ. ಶಿಕಾರಿಪುರ, ಹೊನ್ನಾಳಿಭಾಗದಬಸ್ಗಳು ಇದೇ ಮಾರ್ಗದಲ್ಲಿ ಸಾಗುತ್ತವೆ.ಇದರಿಂದಾಗಿ ವಾಹನ ಮತ್ತು ಜನಸಂಚಾರ ದಟ್ಟವಾಗಿದೆ.ಎಲ್ಲರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆಎಂದು ಆರೋಪಿಸಿದರು.</p>.<p>ಸುತ್ತಮುತ್ತಲ ಪ್ರದೇಶದಲ್ಲಿ ಅಂಗಡಿ ಮುಂಗಟ್ಟುಗಳು ಹೆಚ್ಚಾಗಿವೆ. ವ್ಯವಹಾರಕ್ಕೂ ತೊಂದರೆಯಾಗಿದೆ. ಏಕಮುಖ ಸಂಚಾರ ಅಪಘಾತಗಳಿಗೆ ಕಾರಣವಾಗಿದೆ.ಸುಮಾರುಮೂರುತಿಂಗಳಿನಿಂದ ಕಾಮಗಾರಿ ನಡೆಯುತ್ತಿದೆ.ಸದ್ಯಕ್ಕೆ ಮುಗಿಯುವಲಕ್ಷಣ ಕಾಣುತ್ತಿಲ್ಲ.ನಿತ್ಯವೂಕಿರಿಕಿರಿಯಾಗುತ್ತಿದೆ ಎಂದು ದೂರಿದರು.</p>.<p>ಅಧಿಕಾರಿಗಳು ತಕ್ಷಣ ಕಾಮಗಾರಿ ಮುಗಿಸಬೇಕು. ಭಾರಿವಾಹನಗಳ ಸಂಚಾರಕ್ಕೆಬದಲಿ ಮಾರ್ಗ ಸೂಚಿಸಬೇಕು. ವಿನಾಕಾರಣ ವಿಳಂಬ ಮಾಡುತ್ತಿರುವ ಗುತ್ತಿಗೆದಾರನಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಹರೀಶ್, ಶರತ್, ಮೋಹನ್ ಕುಮಾರ್, ದೀಪಕ್, ಕುಮಾರ್ ಪ್ರತಿಭಟನೆಯ ನೇತೃತ್ವವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಕಾಮಗಾರಿ ವಿಳಂಬದ ಪರಿಣಾಮ ವಿನೋಬನಗರ 100 ಅಡಿ ರಸ್ತೆದೂಳುಮಯವಾಗಿದೆ.ಈ ಭಾಗದ ಜನರು ಶ್ವಾಸಕೋಶಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿನಾಗರಿಕರು ಶುಕ್ರವಾರ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.</p>.<p>‘ಸ್ಮಾರ್ಟ್ಸಿಟಿ’ ಹೆಸರಿನಲ್ಲಿ ನಗರದಎಲ್ಲೆಡೆ ಕಾಮಗಾರಿಗಳು ನಡೆಯುತ್ತಿವೆ. ಅವೈಜ್ಞಾನಿಕ ಕಾಮಗಾರಿ ಪರಿಣಾಮ ಈ ಭಾಗದಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದೆ. ಶಿಕಾರಿಪುರ, ಹೊನ್ನಾಳಿಭಾಗದಬಸ್ಗಳು ಇದೇ ಮಾರ್ಗದಲ್ಲಿ ಸಾಗುತ್ತವೆ.ಇದರಿಂದಾಗಿ ವಾಹನ ಮತ್ತು ಜನಸಂಚಾರ ದಟ್ಟವಾಗಿದೆ.ಎಲ್ಲರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆಎಂದು ಆರೋಪಿಸಿದರು.</p>.<p>ಸುತ್ತಮುತ್ತಲ ಪ್ರದೇಶದಲ್ಲಿ ಅಂಗಡಿ ಮುಂಗಟ್ಟುಗಳು ಹೆಚ್ಚಾಗಿವೆ. ವ್ಯವಹಾರಕ್ಕೂ ತೊಂದರೆಯಾಗಿದೆ. ಏಕಮುಖ ಸಂಚಾರ ಅಪಘಾತಗಳಿಗೆ ಕಾರಣವಾಗಿದೆ.ಸುಮಾರುಮೂರುತಿಂಗಳಿನಿಂದ ಕಾಮಗಾರಿ ನಡೆಯುತ್ತಿದೆ.ಸದ್ಯಕ್ಕೆ ಮುಗಿಯುವಲಕ್ಷಣ ಕಾಣುತ್ತಿಲ್ಲ.ನಿತ್ಯವೂಕಿರಿಕಿರಿಯಾಗುತ್ತಿದೆ ಎಂದು ದೂರಿದರು.</p>.<p>ಅಧಿಕಾರಿಗಳು ತಕ್ಷಣ ಕಾಮಗಾರಿ ಮುಗಿಸಬೇಕು. ಭಾರಿವಾಹನಗಳ ಸಂಚಾರಕ್ಕೆಬದಲಿ ಮಾರ್ಗ ಸೂಚಿಸಬೇಕು. ವಿನಾಕಾರಣ ವಿಳಂಬ ಮಾಡುತ್ತಿರುವ ಗುತ್ತಿಗೆದಾರನಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಹರೀಶ್, ಶರತ್, ಮೋಹನ್ ಕುಮಾರ್, ದೀಪಕ್, ಕುಮಾರ್ ಪ್ರತಿಭಟನೆಯ ನೇತೃತ್ವವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>