ಈ ಭಾಗದ ಗ್ರಾಮಗಳಲ್ಲಿ ವರಾಹಿ ಮುಳುಗಡೆ ಸಂತ್ರಸ್ತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದ್ದು, ಕೋರನಕೋಟೆ, ನಾಲೂರು, ಮೇಗರವಳ್ಳಿ ಮಾರ್ಗವಾಗಿ ತೀರ್ಥಹಳ್ಳಿಗೆ ಬೆಳಿಗ್ಗೆ ಮಧ್ಯಾಹ್ನ ಮತ್ತು ಸಂಜೆ ಸಮಯಕ್ಕೆ ಮೂರು ಟ್ರಿಪ್ ಕೆಎಸ್ಆರ್ಟಿಸಿ ಬಸ್ ಸೌಲಭ್ಯ ಒದಗಿಸಿಕೊಡುವ ಮೂಲಕ ಈ ಭಾಗದ ವಿದ್ಯಾರ್ಥಿಗಳಿಗೆ, ಕೂಲಿ ಕಾರ್ಮಿಕರಿಗೆ, ರೈತರಿಗೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.