<p><strong>ಶಿವಮೊಗ್ಗ:</strong> ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಹಾಗೂ ಅದನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶನಿವಾರ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಮರು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಪ್ರತಿಭಟನಾ ಸಭೆ ಆಯೋಜಿಸಿದ್ದು, ಬಾಲರಾಜ್ ಅರಸ್ ರಸ್ತೆಯ ಮಹಾವೀರ ಸರ್ಕಲ್ ನಿಂದ ಶಿವಮೂರ್ತಿ ರಸ್ತೆಯವರೆಗೆ ಭಾರೀ ಸಂಖ್ಯೆಯಲ್ಲಿ ಸಮುದಾಯದವರು ಜಮಾಯಿಸಿದ್ದಾರೆ.</p>.<p>ತ್ರಿವರ್ಣ ಧ್ವಜ ಹಿಡಿದು ನೆರೆದಿರುವ ಮುಸ್ಲಿಂ ಸಮಾಜದವರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ವಕ್ಫ್ ಕಾಯ್ದೆ ಲೋಪದೋಷಗಳಿಂದ ಕೂಡಿದೆ. ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿಗೂ ಅವಕಾಶ ಕೊಡುವುದಕ್ಕೆ ನಮ್ಮ ಪ್ರಬಲ ವಿರೋಧವಿದೆ. ನಮ್ಮ ಆಸ್ತಿ ಲೂಟಿಗೆ ಬಿಜೆಪಿ ಸಂಚು ಮಾಡಿದೆ. ಕಾಯ್ದೆ ತಿದ್ದುಪಡಿ ವಾಪಸ್ ಪಡೆಯಲಾಗಿದೆ ಎಂದು ಕೇಂದ್ರ ಘೋಷಣೆ ಮಾಡುವ ತನಕ ಹೋರಾಟ ಮುಂದುವರೆಸಲಿದ್ದೇವೆ ಎಂದರು.</p>.<p>ಪ್ರತಿಭಟನಾ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಪೊಲೀಸರ ನಿಯೋಜಿಸಿದ್ದು, ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ.</p>.<p>ಗೋಪಿ ವೃತ್ತದಿಂದ ಬಾಲರಾಜ ಅರಸ್ ರಸ್ತೆ, ಆರ್ ಟಿಒ ಕಚೇರಿ ರಸ್ತೆ, ದುರ್ಗಿಗುಡಿಯ ರಾಘವೇಂದ್ರ ಮಠದ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಪೊಲೀಸರು ವಾಹನ ಸಂಚಾರ ಬಂದ್ ಮಾಡಿದ್ದಾರೆ.</p>.<p>ಹೆಣ್ಣು ಮಕ್ಕಳು, ಮಕ್ಕಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮ್ ಸಮುದಾಯದವರು ಪ್ರತಿಭಟನಾ ಸ್ಥಳದಲ್ಲಿ ನೆರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಹಾಗೂ ಅದನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶನಿವಾರ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಮರು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಪ್ರತಿಭಟನಾ ಸಭೆ ಆಯೋಜಿಸಿದ್ದು, ಬಾಲರಾಜ್ ಅರಸ್ ರಸ್ತೆಯ ಮಹಾವೀರ ಸರ್ಕಲ್ ನಿಂದ ಶಿವಮೂರ್ತಿ ರಸ್ತೆಯವರೆಗೆ ಭಾರೀ ಸಂಖ್ಯೆಯಲ್ಲಿ ಸಮುದಾಯದವರು ಜಮಾಯಿಸಿದ್ದಾರೆ.</p>.<p>ತ್ರಿವರ್ಣ ಧ್ವಜ ಹಿಡಿದು ನೆರೆದಿರುವ ಮುಸ್ಲಿಂ ಸಮಾಜದವರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ವಕ್ಫ್ ಕಾಯ್ದೆ ಲೋಪದೋಷಗಳಿಂದ ಕೂಡಿದೆ. ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿಗೂ ಅವಕಾಶ ಕೊಡುವುದಕ್ಕೆ ನಮ್ಮ ಪ್ರಬಲ ವಿರೋಧವಿದೆ. ನಮ್ಮ ಆಸ್ತಿ ಲೂಟಿಗೆ ಬಿಜೆಪಿ ಸಂಚು ಮಾಡಿದೆ. ಕಾಯ್ದೆ ತಿದ್ದುಪಡಿ ವಾಪಸ್ ಪಡೆಯಲಾಗಿದೆ ಎಂದು ಕೇಂದ್ರ ಘೋಷಣೆ ಮಾಡುವ ತನಕ ಹೋರಾಟ ಮುಂದುವರೆಸಲಿದ್ದೇವೆ ಎಂದರು.</p>.<p>ಪ್ರತಿಭಟನಾ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಪೊಲೀಸರ ನಿಯೋಜಿಸಿದ್ದು, ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ.</p>.<p>ಗೋಪಿ ವೃತ್ತದಿಂದ ಬಾಲರಾಜ ಅರಸ್ ರಸ್ತೆ, ಆರ್ ಟಿಒ ಕಚೇರಿ ರಸ್ತೆ, ದುರ್ಗಿಗುಡಿಯ ರಾಘವೇಂದ್ರ ಮಠದ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಪೊಲೀಸರು ವಾಹನ ಸಂಚಾರ ಬಂದ್ ಮಾಡಿದ್ದಾರೆ.</p>.<p>ಹೆಣ್ಣು ಮಕ್ಕಳು, ಮಕ್ಕಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮ್ ಸಮುದಾಯದವರು ಪ್ರತಿಭಟನಾ ಸ್ಥಳದಲ್ಲಿ ನೆರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>