ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಆಹಾರ ಧಾನ್ಯ, ಖಾದ್ಯ ತೈಲ, ಆಲೂಗಡ್ಡೆ, ಈರುಳ್ಳಿ, ಎಣ್ಣೆ ಬೀಜ ಸಂಗ್ರಹಕ್ಕಿದ್ದ ನಿಷೇಧ ತೆರವುಗೊಂಡಿದೆ. ಇದರಿಂದ ದೊಡ್ಡ ದೊಡ್ಡ ಕಂಪನಿಗಳು ಆಹಾರ ಮತ್ತು ತೈಲ ಪದಾರ್ಥಗಳನ್ನು ದೊಡ್ಡ ಸಂಖ್ಯೆಯಲ್ಲಿ ಸಂಗ್ರಹಿಸಿ ಇಟ್ಟುಕೊಂಡಿವೆ. ಕಾಳಸಂತೆಯಲ್ಲಿ ಮಾರಾಟ ಮಾಡಲು, ಬೆಲೆ ಏರಿಕೆಗೆ ಸರ್ಕಾರವೇ ಅವಕಾಶ ಕಲ್ಪಿಸಿದಂತಾಗಿದೆ’ ಎಂದು ಟೀಕಿಸಿದರು.