ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ವಿರೋಧಿ ನೀತಿ ವಿರೋಧಿಸಿ ಫೆ. 6ಕ್ಕೆ ಹೆದ್ದಾರಿ ತಡೆ

Last Updated 5 ಫೆಬ್ರುವರಿ 2021, 1:34 IST
ಅಕ್ಷರ ಗಾತ್ರ

ಸಾಗರ: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯಲ್ಲಿ ಪಂಜಾಬ್ ಹಾಗೂ ಹರಿಯಾಣದ ರೈತರು ನಡೆಸುತ್ತಿರುವ ಚಳವಳಿಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಅನುಸರಿಸುತ್ತಿರುವ ದಮನಕಾರಿ ನೀತಿಯನ್ನು ಖಂಡಿಸಿ ಫೆ. 6ರಂದು ವಿವಿಧ ರೈತ ಸಂಘಟನೆಗಳ ವತಿಯಿಂದ ಹೆದ್ದಾರಿ ತಡೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ರೈತ, ದಲಿತ, ಕಾರ್ಮಿಕ, ಐಕ್ಯ ಹೋರಾಟ ಸಂಘಟನೆಯ ಪ್ರಮುಖರಾದ ಶಿವಾನಂದ ಕುಗ್ವೆ ತಿಳಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಆಹಾರ ಧಾನ್ಯ, ಖಾದ್ಯ ತೈಲ, ಆಲೂಗಡ್ಡೆ, ಈರುಳ್ಳಿ, ಎಣ್ಣೆ ಬೀಜ ಸಂಗ್ರಹಕ್ಕಿದ್ದ ನಿಷೇಧ ತೆರವುಗೊಂಡಿದೆ. ಇದರಿಂದ ದೊಡ್ಡ ದೊಡ್ಡ ಕಂಪನಿಗಳು ಆಹಾರ ಮತ್ತು ತೈಲ ಪದಾರ್ಥಗಳನ್ನು ದೊಡ್ಡ ಸಂಖ್ಯೆಯಲ್ಲಿ ಸಂಗ್ರಹಿಸಿ ಇಟ್ಟುಕೊಂಡಿವೆ. ಕಾಳಸಂತೆಯಲ್ಲಿ ಮಾರಾಟ ಮಾಡಲು, ಬೆಲೆ ಏರಿಕೆಗೆ ಸರ್ಕಾರವೇ ಅವಕಾಶ ಕಲ್ಪಿಸಿದಂತಾಗಿದೆ’ ಎಂದು ಟೀಕಿಸಿದರು.

ಚಿಲ್ಲರೆ ವ್ಯಾಪಾರ ಕ್ಷೇತ್ರವನ್ನು ಕಾರ್ಪೊರೇಟ್ ಕಂಪನಿಗಳಿಗೆ ಮುಕ್ತಗೊಳಿಸಿರುವುದರಿಂದ ಚಿಲ್ಲರೆ ವ್ಯಾಪಾರವನ್ನೇ ನಂಬಿರುವ 8 ಕೋಟಿಗೂ ಹೆಚ್ಚು ಕುಟುಂಬ ಬೀದಿಗೆ ಬರಲಿದೆ. ಕೃಷಿ ಉತ್ಪನ್ನಗಳ ಖರೀದಿ, ಮಾರಾಟದ ಮೇಲಿನ ನಿರ್ಬಂಧ ತೆರವುಗೊಳಿಸಿರುವುದರಿಂದ ಸಹಕಾರ ಸಂಘಗಳು ಮುಚ್ಚುವ ಅಪಾಯವಿದೆ ಎಂದು ದೂರಿದರು.

ರೈತ ಮುಖಂಡ ಕನ್ನಪ್ಪ, ರೈತ ಮುಖಂಡರಾದ ಗುರುಮೂರ್ತಿ ಕೌತಿ, ಎನ್.ಡಿ.ವಸಂತಕುಮಾರ್, ಅರುಣ್ ಕುಮಾರ್ ಕಸವೆ, ದಿನೇಶ್ ಶಿರವಾಳ, ಹೊಯ್ಸಳ ಗಣಪತಿಯಪ್ಪ, ಗಾಮಪ್ಪ, ರಮೇಶ್ ಐಗಿನಬೈಲು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT