<p><strong>ಸಾಗರ: </strong>ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯಲ್ಲಿ ಪಂಜಾಬ್ ಹಾಗೂ ಹರಿಯಾಣದ ರೈತರು ನಡೆಸುತ್ತಿರುವ ಚಳವಳಿಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಅನುಸರಿಸುತ್ತಿರುವ ದಮನಕಾರಿ ನೀತಿಯನ್ನು ಖಂಡಿಸಿ ಫೆ. 6ರಂದು ವಿವಿಧ ರೈತ ಸಂಘಟನೆಗಳ ವತಿಯಿಂದ ಹೆದ್ದಾರಿ ತಡೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ರೈತ, ದಲಿತ, ಕಾರ್ಮಿಕ, ಐಕ್ಯ ಹೋರಾಟ ಸಂಘಟನೆಯ ಪ್ರಮುಖರಾದ ಶಿವಾನಂದ ಕುಗ್ವೆ ತಿಳಿಸಿದ್ದಾರೆ.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಆಹಾರ ಧಾನ್ಯ, ಖಾದ್ಯ ತೈಲ, ಆಲೂಗಡ್ಡೆ, ಈರುಳ್ಳಿ, ಎಣ್ಣೆ ಬೀಜ ಸಂಗ್ರಹಕ್ಕಿದ್ದ ನಿಷೇಧ ತೆರವುಗೊಂಡಿದೆ. ಇದರಿಂದ ದೊಡ್ಡ ದೊಡ್ಡ ಕಂಪನಿಗಳು ಆಹಾರ ಮತ್ತು ತೈಲ ಪದಾರ್ಥಗಳನ್ನು ದೊಡ್ಡ ಸಂಖ್ಯೆಯಲ್ಲಿ ಸಂಗ್ರಹಿಸಿ ಇಟ್ಟುಕೊಂಡಿವೆ. ಕಾಳಸಂತೆಯಲ್ಲಿ ಮಾರಾಟ ಮಾಡಲು, ಬೆಲೆ ಏರಿಕೆಗೆ ಸರ್ಕಾರವೇ ಅವಕಾಶ ಕಲ್ಪಿಸಿದಂತಾಗಿದೆ’ ಎಂದು ಟೀಕಿಸಿದರು.</p>.<p>ಚಿಲ್ಲರೆ ವ್ಯಾಪಾರ ಕ್ಷೇತ್ರವನ್ನು ಕಾರ್ಪೊರೇಟ್ ಕಂಪನಿಗಳಿಗೆ ಮುಕ್ತಗೊಳಿಸಿರುವುದರಿಂದ ಚಿಲ್ಲರೆ ವ್ಯಾಪಾರವನ್ನೇ ನಂಬಿರುವ 8 ಕೋಟಿಗೂ ಹೆಚ್ಚು ಕುಟುಂಬ ಬೀದಿಗೆ ಬರಲಿದೆ. ಕೃಷಿ ಉತ್ಪನ್ನಗಳ ಖರೀದಿ, ಮಾರಾಟದ ಮೇಲಿನ ನಿರ್ಬಂಧ ತೆರವುಗೊಳಿಸಿರುವುದರಿಂದ ಸಹಕಾರ ಸಂಘಗಳು ಮುಚ್ಚುವ ಅಪಾಯವಿದೆ ಎಂದು ದೂರಿದರು.</p>.<p>ರೈತ ಮುಖಂಡ ಕನ್ನಪ್ಪ, ರೈತ ಮುಖಂಡರಾದ ಗುರುಮೂರ್ತಿ ಕೌತಿ, ಎನ್.ಡಿ.ವಸಂತಕುಮಾರ್, ಅರುಣ್ ಕುಮಾರ್ ಕಸವೆ, ದಿನೇಶ್ ಶಿರವಾಳ, ಹೊಯ್ಸಳ ಗಣಪತಿಯಪ್ಪ, ಗಾಮಪ್ಪ, ರಮೇಶ್ ಐಗಿನಬೈಲು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯಲ್ಲಿ ಪಂಜಾಬ್ ಹಾಗೂ ಹರಿಯಾಣದ ರೈತರು ನಡೆಸುತ್ತಿರುವ ಚಳವಳಿಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಅನುಸರಿಸುತ್ತಿರುವ ದಮನಕಾರಿ ನೀತಿಯನ್ನು ಖಂಡಿಸಿ ಫೆ. 6ರಂದು ವಿವಿಧ ರೈತ ಸಂಘಟನೆಗಳ ವತಿಯಿಂದ ಹೆದ್ದಾರಿ ತಡೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ರೈತ, ದಲಿತ, ಕಾರ್ಮಿಕ, ಐಕ್ಯ ಹೋರಾಟ ಸಂಘಟನೆಯ ಪ್ರಮುಖರಾದ ಶಿವಾನಂದ ಕುಗ್ವೆ ತಿಳಿಸಿದ್ದಾರೆ.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಆಹಾರ ಧಾನ್ಯ, ಖಾದ್ಯ ತೈಲ, ಆಲೂಗಡ್ಡೆ, ಈರುಳ್ಳಿ, ಎಣ್ಣೆ ಬೀಜ ಸಂಗ್ರಹಕ್ಕಿದ್ದ ನಿಷೇಧ ತೆರವುಗೊಂಡಿದೆ. ಇದರಿಂದ ದೊಡ್ಡ ದೊಡ್ಡ ಕಂಪನಿಗಳು ಆಹಾರ ಮತ್ತು ತೈಲ ಪದಾರ್ಥಗಳನ್ನು ದೊಡ್ಡ ಸಂಖ್ಯೆಯಲ್ಲಿ ಸಂಗ್ರಹಿಸಿ ಇಟ್ಟುಕೊಂಡಿವೆ. ಕಾಳಸಂತೆಯಲ್ಲಿ ಮಾರಾಟ ಮಾಡಲು, ಬೆಲೆ ಏರಿಕೆಗೆ ಸರ್ಕಾರವೇ ಅವಕಾಶ ಕಲ್ಪಿಸಿದಂತಾಗಿದೆ’ ಎಂದು ಟೀಕಿಸಿದರು.</p>.<p>ಚಿಲ್ಲರೆ ವ್ಯಾಪಾರ ಕ್ಷೇತ್ರವನ್ನು ಕಾರ್ಪೊರೇಟ್ ಕಂಪನಿಗಳಿಗೆ ಮುಕ್ತಗೊಳಿಸಿರುವುದರಿಂದ ಚಿಲ್ಲರೆ ವ್ಯಾಪಾರವನ್ನೇ ನಂಬಿರುವ 8 ಕೋಟಿಗೂ ಹೆಚ್ಚು ಕುಟುಂಬ ಬೀದಿಗೆ ಬರಲಿದೆ. ಕೃಷಿ ಉತ್ಪನ್ನಗಳ ಖರೀದಿ, ಮಾರಾಟದ ಮೇಲಿನ ನಿರ್ಬಂಧ ತೆರವುಗೊಳಿಸಿರುವುದರಿಂದ ಸಹಕಾರ ಸಂಘಗಳು ಮುಚ್ಚುವ ಅಪಾಯವಿದೆ ಎಂದು ದೂರಿದರು.</p>.<p>ರೈತ ಮುಖಂಡ ಕನ್ನಪ್ಪ, ರೈತ ಮುಖಂಡರಾದ ಗುರುಮೂರ್ತಿ ಕೌತಿ, ಎನ್.ಡಿ.ವಸಂತಕುಮಾರ್, ಅರುಣ್ ಕುಮಾರ್ ಕಸವೆ, ದಿನೇಶ್ ಶಿರವಾಳ, ಹೊಯ್ಸಳ ಗಣಪತಿಯಪ್ಪ, ಗಾಮಪ್ಪ, ರಮೇಶ್ ಐಗಿನಬೈಲು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>