<p><strong>ಶಿವಮೊಗ್ಗ:</strong> ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘ, ಅಕ್ಷರ ದಾಸೋಹ ನೌಕರರ ಸಂಘ ಮತ್ತು ಆಶಾ ಕಾರ್ಯಕರ್ತೆಯರ ಸಂಘದಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.</p>.<p>‘ಹಲವು ವರ್ಷ ಕಳೆದರೂ ಅಂಗನವಾಡಿ, ಅಕ್ಷರದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳು ಇನ್ನೂ ಜೀವಂತವಾಗಿವೆ. ಜೀವನ ಭದ್ರತೆ ಇಲ್ಲವಾಗಿದೆ. ನಮಗೂ ಸಂರಕ್ಷಣೆ, ಮರಣ ಪರಿಹಾರ, ಕನಿಷ್ಠ ವೇತನ ಮತ್ತು ಪಿಂಚಣಿ ಸೌಲಭ್ಯ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಮಾಸಿಕ ₹ 10 ಸಾವಿರ ವಿಶೇಷ ಭತ್ಯೆ ನೀಡಬೇಕು. ಕೋವಿಡ್ನಿಂದ ಮೃತಪಟ್ಟವರಿಗೆ ₹ 10 ಲಕ್ಷ ಪರಿಹಾರ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭವಿಷ್ಯನಿಧಿ, ಇಎಸ್ಐ ಸೇರಿ ವಿವಿಧ ಯೋಜನೆಗಳಿಗೆ ಅನುದಾನವನ್ನು ಹೆಚ್ಚಿಗೆ ಬಿಡುಗಡೆ ಮಾಡಬೇಕು.ನಿವೃತ್ತಿ ವೇತನ ನಿಗದಿ ಮಾಡಬೇಕು. ನಿವೃತ್ತಿ ವೇತನ ನಿಗದಿ ಮಾಡುವವರಿಗೂ ₹ 1.5 ಲಕ್ಷ ಇಡುಗಂಟು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಪ್ರಮುಖರಾದ ಆರ್. ಹನುಮಮ್ಮ, ತುಳಸಿಪ್ರಭ, ವಿಜಯಲಕ್ಷ್ಮೀ, ಭಾಗ್ಯಮ್ಮ, ಅಶ್ವಿನಿ, ತಾರಾ, ಚಂದ್ರಮ್ಮ, ಸುನಿತಾ, ನಾಗರತ್ನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘ, ಅಕ್ಷರ ದಾಸೋಹ ನೌಕರರ ಸಂಘ ಮತ್ತು ಆಶಾ ಕಾರ್ಯಕರ್ತೆಯರ ಸಂಘದಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.</p>.<p>‘ಹಲವು ವರ್ಷ ಕಳೆದರೂ ಅಂಗನವಾಡಿ, ಅಕ್ಷರದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳು ಇನ್ನೂ ಜೀವಂತವಾಗಿವೆ. ಜೀವನ ಭದ್ರತೆ ಇಲ್ಲವಾಗಿದೆ. ನಮಗೂ ಸಂರಕ್ಷಣೆ, ಮರಣ ಪರಿಹಾರ, ಕನಿಷ್ಠ ವೇತನ ಮತ್ತು ಪಿಂಚಣಿ ಸೌಲಭ್ಯ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಮಾಸಿಕ ₹ 10 ಸಾವಿರ ವಿಶೇಷ ಭತ್ಯೆ ನೀಡಬೇಕು. ಕೋವಿಡ್ನಿಂದ ಮೃತಪಟ್ಟವರಿಗೆ ₹ 10 ಲಕ್ಷ ಪರಿಹಾರ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭವಿಷ್ಯನಿಧಿ, ಇಎಸ್ಐ ಸೇರಿ ವಿವಿಧ ಯೋಜನೆಗಳಿಗೆ ಅನುದಾನವನ್ನು ಹೆಚ್ಚಿಗೆ ಬಿಡುಗಡೆ ಮಾಡಬೇಕು.ನಿವೃತ್ತಿ ವೇತನ ನಿಗದಿ ಮಾಡಬೇಕು. ನಿವೃತ್ತಿ ವೇತನ ನಿಗದಿ ಮಾಡುವವರಿಗೂ ₹ 1.5 ಲಕ್ಷ ಇಡುಗಂಟು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಪ್ರಮುಖರಾದ ಆರ್. ಹನುಮಮ್ಮ, ತುಳಸಿಪ್ರಭ, ವಿಜಯಲಕ್ಷ್ಮೀ, ಭಾಗ್ಯಮ್ಮ, ಅಶ್ವಿನಿ, ತಾರಾ, ಚಂದ್ರಮ್ಮ, ಸುನಿತಾ, ನಾಗರತ್ನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>