<p><strong>ಶಿವಮೊಗ್ಗ: </strong>ಒತ್ತುವರಿ ಜಾಗ ತೆರವುಗೊಳಿಸಲು ಆಗ್ರಹಿಸಿ ಪುರಲೆ ಗ್ರಾಮಸ್ಥರು ಶುಕ್ರವಾರ ನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಪುರಲೆ ಗ್ರಾಮಠಾಣಾ ನಗರಪಾಲಿಕೆ ಸ್ವತ್ತು. ಪ್ರಭಾವಿಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ನಿವೇಶನ ರಚಿಸುತ್ತಿದ್ದಾರೆ. ಮಾರಾಟ ಮಾಡುತ್ತಿದ್ದಾರೆ. ಈ ಸರ್ವೆ ನಂಬರ್ನಲ್ಲಿ ಬಡವರು ಮತ್ತು ದಲಿತರು ವಾಸವಾಗಿದ್ದರು. ಆಗ ಪಾಲಿಕೆ ಅಧಿಕಾರಿಗಳು ಅವರನ್ನು ಒಕ್ಕಲೆಬ್ಬಿಸಿದ್ದರು. ಆದರೆ, ಈಗ ಅದೇ ಜಾಗ ಕಬಳಿಸಿಕೊಂಡು ಮಾರಾಟ ಮಾಡಲಾಗುತ್ತಿದೆ. ಪಾಲಿಕೆ ಅಧಿಕಾರಿಗಳು ಕಣ್ಣುಮುಚ್ಚಿಕೊಂಡು ಕುಳಿತಿದ್ದಾರೆ ಎಂದು ಆರೋಪಿಸಿದರು.</p>.<p>ತಕ್ಷಣವೇ ಅಕ್ರಮ ಒತ್ತುವರಿದಾರರ ವಿರುದ್ಧ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ 2011ರ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಒತ್ತುವರಿ ಜಾಗ ತೆರವುಗೊಳಿಸಬೇಕು. ಪಾಲಿಕೆ ಸ್ವತ್ತು ಉಳಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು. ಪಾಲಿಕೆ ವಿರುದ್ಧವೂ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವುದು ಎಂದು ಎಚ್ಚರಿಸಿದರು.</p>.<p>ಪಾಲಿಕೆ ವಿರೋಧ ಪಕ್ಷದ ನಾಯಕ ಎಚ್.ಸಿ.ಯೋಗೀಶ್, ಸದಸ್ಯ ರಮೇಶ್ ಹೆಗ್ಡೆ, ಯುವ ಕಾಂಗ್ರೆಸ್ ಮುಖಂಡ ಸಿ.ಜಿ.ಮಧುಸೂದನ್, ಕಾರ್ತಿಕ್, ಗ್ರಾಮದ ಮುಖಂಡರಾದ ನಾಗೇಶಪ್ಪ, ಸಂತೋಷ್, ನಾಗರಾಜ್, ಗುತ್ಯಪ್ಪ, ಲೋಕೇಶ್, ವಿಜಯ್, ಲಕ್ಷ್ಮಮ್ಮ, ಸುಮಾ, ಪ್ರಭಾಕರ್, ಶೋಭಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಒತ್ತುವರಿ ಜಾಗ ತೆರವುಗೊಳಿಸಲು ಆಗ್ರಹಿಸಿ ಪುರಲೆ ಗ್ರಾಮಸ್ಥರು ಶುಕ್ರವಾರ ನಗರ ಪಾಲಿಕೆ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಪುರಲೆ ಗ್ರಾಮಠಾಣಾ ನಗರಪಾಲಿಕೆ ಸ್ವತ್ತು. ಪ್ರಭಾವಿಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ನಿವೇಶನ ರಚಿಸುತ್ತಿದ್ದಾರೆ. ಮಾರಾಟ ಮಾಡುತ್ತಿದ್ದಾರೆ. ಈ ಸರ್ವೆ ನಂಬರ್ನಲ್ಲಿ ಬಡವರು ಮತ್ತು ದಲಿತರು ವಾಸವಾಗಿದ್ದರು. ಆಗ ಪಾಲಿಕೆ ಅಧಿಕಾರಿಗಳು ಅವರನ್ನು ಒಕ್ಕಲೆಬ್ಬಿಸಿದ್ದರು. ಆದರೆ, ಈಗ ಅದೇ ಜಾಗ ಕಬಳಿಸಿಕೊಂಡು ಮಾರಾಟ ಮಾಡಲಾಗುತ್ತಿದೆ. ಪಾಲಿಕೆ ಅಧಿಕಾರಿಗಳು ಕಣ್ಣುಮುಚ್ಚಿಕೊಂಡು ಕುಳಿತಿದ್ದಾರೆ ಎಂದು ಆರೋಪಿಸಿದರು.</p>.<p>ತಕ್ಷಣವೇ ಅಕ್ರಮ ಒತ್ತುವರಿದಾರರ ವಿರುದ್ಧ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ 2011ರ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಒತ್ತುವರಿ ಜಾಗ ತೆರವುಗೊಳಿಸಬೇಕು. ಪಾಲಿಕೆ ಸ್ವತ್ತು ಉಳಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು. ಪಾಲಿಕೆ ವಿರುದ್ಧವೂ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವುದು ಎಂದು ಎಚ್ಚರಿಸಿದರು.</p>.<p>ಪಾಲಿಕೆ ವಿರೋಧ ಪಕ್ಷದ ನಾಯಕ ಎಚ್.ಸಿ.ಯೋಗೀಶ್, ಸದಸ್ಯ ರಮೇಶ್ ಹೆಗ್ಡೆ, ಯುವ ಕಾಂಗ್ರೆಸ್ ಮುಖಂಡ ಸಿ.ಜಿ.ಮಧುಸೂದನ್, ಕಾರ್ತಿಕ್, ಗ್ರಾಮದ ಮುಖಂಡರಾದ ನಾಗೇಶಪ್ಪ, ಸಂತೋಷ್, ನಾಗರಾಜ್, ಗುತ್ಯಪ್ಪ, ಲೋಕೇಶ್, ವಿಜಯ್, ಲಕ್ಷ್ಮಮ್ಮ, ಸುಮಾ, ಪ್ರಭಾಕರ್, ಶೋಭಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>