<p><strong>ಶಿವಮೊಗ್ಗ: </strong>ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ನೇತೃತ್ವದಲ್ಲಿ ಸಾಗರ ರಸ್ತೆ ಶ್ರೀರಾಂಪುರ ಹಕ್ಕಿಪಿಕ್ಕಿ ಸಮುದಾಯದ ಜನರು ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಸಾಗರ ರಸ್ತೆಯ ಶ್ರೀರಾಂಪುರ ಸಮೀಪದ ಖಾಸಗಿ ಜಮೀನಿನಲ್ಲಿ ತಾತ್ಕಾಲಿಕ ಜೋಪಡಿ ಹಾಕೊಕೊಂಡು ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ವಾಸಮಾಡುತ್ತಿವೆ. ಹೊಟ್ಟೆಪಾಡಿಗಾಗಿ ಬೀದಿ ವ್ಯಾಪಾರ ಮಾಡುತ್ತಾರೆ. ಪೆನ್ನು ಮಾರಾಟ ಮಾಡಲು ಹೋದವರನ್ನು ಭಿಕ್ಷುಕರು ಎಂದು ರಿಮ್ಯಾಂಡ್ ಹೋಂಗೆ ಕಳುಹಿಸಿದ್ದರು ಎಂದು ದೂರಿದರು.</p>.<p>ಜಿಲ್ಲಾಡಳಿತ ಈ ಅಲೆಮಾರಿಗಳಿಗಾಗಿ ವೀರಣ್ಣನಬೆನವಳ್ಳಿ ಗ್ರಾಮದ ಸರ್ವೆ ನಂಬರ್ 78ರಲ್ಲಿ 4 ಎಕರೆ ಜಮೀನು ನೀಡಿದೆ. ಆದರೆ, ಅಲ್ಲಿ ಯಾವುದೇ ಮೂಲ ಸೌಲಭ್ಯಗಳಿಲ್ಲ. ಅಲ್ಲಿ ಸೌಕರ್ಯ ಕಲ್ಪಿಸಬೇಕು. ಪಡಿತರ, ಆಧಾರ್ ಕಾರ್ಡ್ ನೀಡಬೇಕು. ಮನೆ ಕಟ್ಟಿಸಿಕೊಡಬೇಕು. ಮತದಾನದ ಹಕ್ಕು ಕೊಡಬೇಕು, ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಕಾರ್ಯಕ್ರಮ ರೂಪಿಸಬೇಕು. ರುದ್ರಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.<br />ಬಿಎಸ್ಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಡಿ.ಶಿವಪ್ಪ, ಮುಖಂಡರಾದ ಮಾರುತಿ, ತಮ್ಮಡಿಹಳ್ಳಿ ಲೋಕೇಶ್, ರಾಜು, ರವಿ, ಲಕ್ಷ್ಮಿಪತಿ, ಗೌರಮ್ಮ, ರೂಪಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ನೇತೃತ್ವದಲ್ಲಿ ಸಾಗರ ರಸ್ತೆ ಶ್ರೀರಾಂಪುರ ಹಕ್ಕಿಪಿಕ್ಕಿ ಸಮುದಾಯದ ಜನರು ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಸಾಗರ ರಸ್ತೆಯ ಶ್ರೀರಾಂಪುರ ಸಮೀಪದ ಖಾಸಗಿ ಜಮೀನಿನಲ್ಲಿ ತಾತ್ಕಾಲಿಕ ಜೋಪಡಿ ಹಾಕೊಕೊಂಡು ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ವಾಸಮಾಡುತ್ತಿವೆ. ಹೊಟ್ಟೆಪಾಡಿಗಾಗಿ ಬೀದಿ ವ್ಯಾಪಾರ ಮಾಡುತ್ತಾರೆ. ಪೆನ್ನು ಮಾರಾಟ ಮಾಡಲು ಹೋದವರನ್ನು ಭಿಕ್ಷುಕರು ಎಂದು ರಿಮ್ಯಾಂಡ್ ಹೋಂಗೆ ಕಳುಹಿಸಿದ್ದರು ಎಂದು ದೂರಿದರು.</p>.<p>ಜಿಲ್ಲಾಡಳಿತ ಈ ಅಲೆಮಾರಿಗಳಿಗಾಗಿ ವೀರಣ್ಣನಬೆನವಳ್ಳಿ ಗ್ರಾಮದ ಸರ್ವೆ ನಂಬರ್ 78ರಲ್ಲಿ 4 ಎಕರೆ ಜಮೀನು ನೀಡಿದೆ. ಆದರೆ, ಅಲ್ಲಿ ಯಾವುದೇ ಮೂಲ ಸೌಲಭ್ಯಗಳಿಲ್ಲ. ಅಲ್ಲಿ ಸೌಕರ್ಯ ಕಲ್ಪಿಸಬೇಕು. ಪಡಿತರ, ಆಧಾರ್ ಕಾರ್ಡ್ ನೀಡಬೇಕು. ಮನೆ ಕಟ್ಟಿಸಿಕೊಡಬೇಕು. ಮತದಾನದ ಹಕ್ಕು ಕೊಡಬೇಕು, ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಕಾರ್ಯಕ್ರಮ ರೂಪಿಸಬೇಕು. ರುದ್ರಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.<br />ಬಿಎಸ್ಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಡಿ.ಶಿವಪ್ಪ, ಮುಖಂಡರಾದ ಮಾರುತಿ, ತಮ್ಮಡಿಹಳ್ಳಿ ಲೋಕೇಶ್, ರಾಜು, ರವಿ, ಲಕ್ಷ್ಮಿಪತಿ, ಗೌರಮ್ಮ, ರೂಪಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>