<p><strong>ಸಾಗರ: </strong>ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಸಾರ್ವಜನಿಕರಿಗೆ ಯಾವುದೇ ಪ್ರಯೋಜವಿಲ್ಲ. ಅದರಿಂದ ರಾಜಕಾರಣಿಗಳು, ಅಧಿಕಾರಿಗಳು, ಗುತ್ತಿಗೆದಾರರಿಗಷ್ಟೇ ಲಾಭ ಎಂದು ರಂಗಕರ್ಮಿ ಕೆ.ವಿ.ಅಕ್ಷರ ಹೇಳಿದರು. </p><p>ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಎದುರು ರೈತ ಸಂಘ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಶುಕ್ರವಾರ ಬೆಂಬಲ ಸೂಚಿಸಿ, ಸಹಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು.</p><p>‘ಪಂಪ್ಡ್ ಸ್ಟೋರೇಜ್ ಯೋಜನೆಯ ಸಾಧಕ ಬಾಧಕಗಳ ಕುರಿತು ವಿವರವಾಗಿ ಅಧ್ಯಯನ ಮಾಡಿದ್ದೇನೆ. ₹125 ಖರ್ಚು ಮಾಡಿ ₹100 ಆದಾಯ ಗಳಿಸುವ ಅವೈಜ್ಞಾನಿಕ ಯೋಜನೆ ಇದಾಗಿದೆ’ ಎಂದು ಅಭಿಪ್ರಾಯಪಟ್ಟರು.</p><p>ಶರಾವತಿ ನದಿ ಕಣಿವೆ ಈಗಾಗಲೇ ಹಲವು ಯೋಜನೆಗಳ ಭಾರದಿಂದ ಕುಸಿದಿದೆ. ಯಾವುದೆ ಹೊಸ ಯೋಜನೆಯ ಭಾರವನ್ನು ತಡೆದುಕೊಳ್ಳುವ ಧಾರಣಾ ಶಕ್ತಿಯನ್ನು ಕಳೆದುಕೊಂಡಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಂಗ ನಿರ್ಮಿಸಿ ಗುಡ್ಡ ಬಗೆಯುವ ಯೋಜನೆ ಖಂಡಿಯವಾಗಿಯೂ ಪರಿಸರಕ್ಕೆ ಹಾನಿಕಾರಕವಾಗಿದೆ ಎಂದರು.</p><p>ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಿನೇಶ್ ಶಿರವಾಳ, ಪ್ರಮುಖರಾದ ಆನೆಗುಳಿ ಸುಬ್ರಾವ್, ಅಖಿಲೇಶ್ ಚಿಪ್ಪಳಿ, ತೀ.ನ.ಶ್ರೀನಿವಾಸ್, ಅಶೋಕ್ ಸೂರಮನೆ, ಸುಂದರ್ ಸಿಂಗ್, ಹಿತಕರ ಜೈನ್, ಪರಮೇಶ್ವರ ದೂಗೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಸಾರ್ವಜನಿಕರಿಗೆ ಯಾವುದೇ ಪ್ರಯೋಜವಿಲ್ಲ. ಅದರಿಂದ ರಾಜಕಾರಣಿಗಳು, ಅಧಿಕಾರಿಗಳು, ಗುತ್ತಿಗೆದಾರರಿಗಷ್ಟೇ ಲಾಭ ಎಂದು ರಂಗಕರ್ಮಿ ಕೆ.ವಿ.ಅಕ್ಷರ ಹೇಳಿದರು. </p><p>ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಎದುರು ರೈತ ಸಂಘ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಶುಕ್ರವಾರ ಬೆಂಬಲ ಸೂಚಿಸಿ, ಸಹಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು.</p><p>‘ಪಂಪ್ಡ್ ಸ್ಟೋರೇಜ್ ಯೋಜನೆಯ ಸಾಧಕ ಬಾಧಕಗಳ ಕುರಿತು ವಿವರವಾಗಿ ಅಧ್ಯಯನ ಮಾಡಿದ್ದೇನೆ. ₹125 ಖರ್ಚು ಮಾಡಿ ₹100 ಆದಾಯ ಗಳಿಸುವ ಅವೈಜ್ಞಾನಿಕ ಯೋಜನೆ ಇದಾಗಿದೆ’ ಎಂದು ಅಭಿಪ್ರಾಯಪಟ್ಟರು.</p><p>ಶರಾವತಿ ನದಿ ಕಣಿವೆ ಈಗಾಗಲೇ ಹಲವು ಯೋಜನೆಗಳ ಭಾರದಿಂದ ಕುಸಿದಿದೆ. ಯಾವುದೆ ಹೊಸ ಯೋಜನೆಯ ಭಾರವನ್ನು ತಡೆದುಕೊಳ್ಳುವ ಧಾರಣಾ ಶಕ್ತಿಯನ್ನು ಕಳೆದುಕೊಂಡಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಂಗ ನಿರ್ಮಿಸಿ ಗುಡ್ಡ ಬಗೆಯುವ ಯೋಜನೆ ಖಂಡಿಯವಾಗಿಯೂ ಪರಿಸರಕ್ಕೆ ಹಾನಿಕಾರಕವಾಗಿದೆ ಎಂದರು.</p><p>ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಿನೇಶ್ ಶಿರವಾಳ, ಪ್ರಮುಖರಾದ ಆನೆಗುಳಿ ಸುಬ್ರಾವ್, ಅಖಿಲೇಶ್ ಚಿಪ್ಪಳಿ, ತೀ.ನ.ಶ್ರೀನಿವಾಸ್, ಅಶೋಕ್ ಸೂರಮನೆ, ಸುಂದರ್ ಸಿಂಗ್, ಹಿತಕರ ಜೈನ್, ಪರಮೇಶ್ವರ ದೂಗೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>