<p>ಶಿವಮೊಗ್ಗ: ಯುಗಾದಿ ಹಬ್ಬದ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ಹಬ್ಬದ ಖರೀದಿ ಜೋರಾಗಿದೆ. ನಗರದ ಮಾರುಕಟ್ಟೆಗಳಲ್ಲಿ ಯುಗಾದಿ ಖರೀದಿ ಭರದಿಂದ ಸಾಗುತ್ತಿದೆ.</p>.<p>ಈ ಬಾರಿ ಯುಗಾದಿ ಹಬ್ಬವನ್ನು ಜನರು ಸಡಗರದಿಂದ ಆಚರಿಸುತ್ತಿದ್ದು, ಹಬ್ಬದ ವಸ್ತುಗಳ ಖರೀದಿಗೆ<br />ಮುಗಿಬಿದ್ದಿದ್ದಾರೆ.</p>.<p>ಬೆಲೆ ಏರಿಕೆಯ ಬಿಸಿ ನಡುವೆ ಹೊಸ ವರ್ಷವನ್ನು ಸಂಭ್ರಮದಿಂದ ಬರ ಮಾಡಿಕೊಳ್ಳಲು ಜನರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಬ್ಬಕ್ಕೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಅಡುಗೆ ಎಣ್ಣೆ ಒಂದು ಲೀಟರ್ಗೆ ₹ 200 ದಾಟಿದೆ. ದೀಪದ ಎಣ್ಣೆಯೂ ಲೀಟರ್ಗೆ ₹ 200ಕ್ಕಿಂತ ಹೆಚ್ಚಾಗಿದೆ.</p>.<p>ಇನ್ನು ಬೇಳೆ, ಬೆಲ್ಲ, ಮೈದಾಹಿಟ್ಟು ಸೇರಿ ದಿನಸಿ ವಸ್ತುಗಳ ಬೆಲೆ ಗಗನಕ್ಕೇರಿದೆ. ಮಾರುಕಟ್ಟೆಯಲ್ಲಿ ಹೂವಿನ ಬೆಲೆ ಕೂಡ ಏರಿಕೆಯಾಗಿತ್ತು. ಒಂದು ಮಾರು ಸೇವಂತಿಗೆಗೆ₹ 100 ದರ ಇತ್ತು. ತರಕಾರಿಗಳ ಬೆಲೆ ಕೂಡ ಸ್ವಲ್ಪ ಮಟ್ಟಿಗೆ ಏರಿಕೆಯಾಗಿದೆ. ಈ ಬೆಲೆ ಏರಿಕೆ ನಡುವೆಯೂ ಹಬ್ಬದ ಸಿದ್ಧತೆ ಮಾತ್ರ ಜೋರಾಗಿಯೇನಡೆಯುತ್ತಿದೆ.</p>.<p>ಮಾರುಕಟ್ಟೆಯಲ್ಲಿ ಶುಕ್ರವಾರ ಜನಜಂಗುಳಿ ಕಂಡುಬಂತು. ಗಾಂಧಿ ಬಜಾರ್, ಶಿವಪ್ಪ ನಾಯಕ ವೃತ್ತದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹೊಸ ಬಟ್ಟೆ ಖರೀದಿ, ದಿನಸಿ, ಮಾವಿನ ಸೊಪ್ಪು, ಬೇವಿನ ಹೂವು ಮತ್ತು ಸೊಪ್ಪು, ಹೂವು, ಹಣ್ಣು ಹಂಪಲು ಖರೀದಿಯಲ್ಲಿ ಜನರು ತೊಡಗಿದ್ದರು.</p>.<p>ಶಿವಪ್ಪನಾಯಕ ಹೂವಿನ ಮಾರುಕಟ್ಟೆ, ನೆಹರೂ ರಸ್ತೆ, ಬಿ.ಎಚ್. ರಸ್ತೆ, ದುರ್ಗಿಗುಡಿ, ಗೋಪಿ ವೃತ್ತ, ಸವಳಂಗ ರಸ್ತೆ ಮುಂತಾದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಜನಜಂಗುಳಿ ಇತ್ತು. ಅಂಗಡಿಗಳಲ್ಲೂ ವ್ಯಾಪಾರ ಜೋರಾಗಿತ್ತು. ಪ್ರಮುಖ ವೃತ್ತಗಳಲ್ಲಿ ಮಾವು, ಕಹಿಬೇವು, ಬಾಳೆ ಕಂದು, ಹಣ್ಣು ಖರೀದಿನಡೆಯಿತು.</p>.<p>ಹಬ್ಬಕ್ಕೆ ಹೊರ ಊರುಗಳಲ್ಲಿ ಕೆಲಸ ಮಾಡುತ್ತಿರುವವರು ತಮ್ಮ ಊರುಗಳಿಗೆ ತೆರಳುತ್ತಿದ್ದು, ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು. ಶಿವಮೊಗ್ಗಕ್ಕೆ ಬರುವ ರೈಲುಗಳಲ್ಲೂ ಪ್ರಯಾಣಿಕರ ಸಂಖ್ಯೆ ಹೆಚ್ಚಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಯುಗಾದಿ ಹಬ್ಬದ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ಹಬ್ಬದ ಖರೀದಿ ಜೋರಾಗಿದೆ. ನಗರದ ಮಾರುಕಟ್ಟೆಗಳಲ್ಲಿ ಯುಗಾದಿ ಖರೀದಿ ಭರದಿಂದ ಸಾಗುತ್ತಿದೆ.</p>.<p>ಈ ಬಾರಿ ಯುಗಾದಿ ಹಬ್ಬವನ್ನು ಜನರು ಸಡಗರದಿಂದ ಆಚರಿಸುತ್ತಿದ್ದು, ಹಬ್ಬದ ವಸ್ತುಗಳ ಖರೀದಿಗೆ<br />ಮುಗಿಬಿದ್ದಿದ್ದಾರೆ.</p>.<p>ಬೆಲೆ ಏರಿಕೆಯ ಬಿಸಿ ನಡುವೆ ಹೊಸ ವರ್ಷವನ್ನು ಸಂಭ್ರಮದಿಂದ ಬರ ಮಾಡಿಕೊಳ್ಳಲು ಜನರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಬ್ಬಕ್ಕೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಅಡುಗೆ ಎಣ್ಣೆ ಒಂದು ಲೀಟರ್ಗೆ ₹ 200 ದಾಟಿದೆ. ದೀಪದ ಎಣ್ಣೆಯೂ ಲೀಟರ್ಗೆ ₹ 200ಕ್ಕಿಂತ ಹೆಚ್ಚಾಗಿದೆ.</p>.<p>ಇನ್ನು ಬೇಳೆ, ಬೆಲ್ಲ, ಮೈದಾಹಿಟ್ಟು ಸೇರಿ ದಿನಸಿ ವಸ್ತುಗಳ ಬೆಲೆ ಗಗನಕ್ಕೇರಿದೆ. ಮಾರುಕಟ್ಟೆಯಲ್ಲಿ ಹೂವಿನ ಬೆಲೆ ಕೂಡ ಏರಿಕೆಯಾಗಿತ್ತು. ಒಂದು ಮಾರು ಸೇವಂತಿಗೆಗೆ₹ 100 ದರ ಇತ್ತು. ತರಕಾರಿಗಳ ಬೆಲೆ ಕೂಡ ಸ್ವಲ್ಪ ಮಟ್ಟಿಗೆ ಏರಿಕೆಯಾಗಿದೆ. ಈ ಬೆಲೆ ಏರಿಕೆ ನಡುವೆಯೂ ಹಬ್ಬದ ಸಿದ್ಧತೆ ಮಾತ್ರ ಜೋರಾಗಿಯೇನಡೆಯುತ್ತಿದೆ.</p>.<p>ಮಾರುಕಟ್ಟೆಯಲ್ಲಿ ಶುಕ್ರವಾರ ಜನಜಂಗುಳಿ ಕಂಡುಬಂತು. ಗಾಂಧಿ ಬಜಾರ್, ಶಿವಪ್ಪ ನಾಯಕ ವೃತ್ತದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹೊಸ ಬಟ್ಟೆ ಖರೀದಿ, ದಿನಸಿ, ಮಾವಿನ ಸೊಪ್ಪು, ಬೇವಿನ ಹೂವು ಮತ್ತು ಸೊಪ್ಪು, ಹೂವು, ಹಣ್ಣು ಹಂಪಲು ಖರೀದಿಯಲ್ಲಿ ಜನರು ತೊಡಗಿದ್ದರು.</p>.<p>ಶಿವಪ್ಪನಾಯಕ ಹೂವಿನ ಮಾರುಕಟ್ಟೆ, ನೆಹರೂ ರಸ್ತೆ, ಬಿ.ಎಚ್. ರಸ್ತೆ, ದುರ್ಗಿಗುಡಿ, ಗೋಪಿ ವೃತ್ತ, ಸವಳಂಗ ರಸ್ತೆ ಮುಂತಾದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಜನಜಂಗುಳಿ ಇತ್ತು. ಅಂಗಡಿಗಳಲ್ಲೂ ವ್ಯಾಪಾರ ಜೋರಾಗಿತ್ತು. ಪ್ರಮುಖ ವೃತ್ತಗಳಲ್ಲಿ ಮಾವು, ಕಹಿಬೇವು, ಬಾಳೆ ಕಂದು, ಹಣ್ಣು ಖರೀದಿನಡೆಯಿತು.</p>.<p>ಹಬ್ಬಕ್ಕೆ ಹೊರ ಊರುಗಳಲ್ಲಿ ಕೆಲಸ ಮಾಡುತ್ತಿರುವವರು ತಮ್ಮ ಊರುಗಳಿಗೆ ತೆರಳುತ್ತಿದ್ದು, ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು. ಶಿವಮೊಗ್ಗಕ್ಕೆ ಬರುವ ರೈಲುಗಳಲ್ಲೂ ಪ್ರಯಾಣಿಕರ ಸಂಖ್ಯೆ ಹೆಚ್ಚಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>