<p><strong>ಹೊಸನಗರ</strong>: ಬಿಜೆಪಿ ಮುಖಂಡ ಹಾಲಗದ್ದೆ ಉಮೇಶ್ ನೇತೃತ್ವದ ತಂಡ ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಅಡ್ಡಾಡುವ ಬೀಡಾಡಿ ದನಗಳ ಕೊರಳಿಗೆ ರೇಡಿಯಂ ಪಟ್ಟಿ ಕಟ್ಟುವ ಕಾರ್ಯಕ್ಕೆ ಈಚೆಗೆ ಚಾಲನೆ ನೀಡಿತು. </p>.<p>ಹೊಸನಗರ ಪಟ್ಟಣ ವ್ಯಾಪ್ತಿಯಲ್ಲಿ ಬೀಡಾಡಿ ದನಗಳು ಹಾಗೂ ವಾಹನಗಳ ನಡುವೆ ಅಪಘಾತಗಳು ಸಂಭವಿಸುತ್ತಿವೆ. ದನಗಳಿಗೆ ಈ ರೀತಿಯ ರೇಡಿಯಂ ಬೆಲ್ಟ್ ಕಟ್ಟುವುದರಿಂದ ರಸ್ತೆ ಅಪಘಾತಗಳನ್ನು ಆದಷ್ಟೂ ತಪ್ಪಿಸುವ ಯತ್ನ ಮಾಡುತ್ತಿದ್ದೇವೆ ಎಂದು ಹಾಲಗದ್ದೆ ಉಮೇಶ್ ಹೇಳಿದರು.</p>.<p>ರಾತ್ರಿ ವೇಳೆ ರಸ್ತೆಯುದ್ದಕ್ಕೂ ಬೀಡಾಡಿ ದನಗಳು ಮಲಗಿರುತ್ತವೆ. ಮಂಗಳೂರು, ಕೊಲ್ಲೂರು, ಸಿಗಂದೂರು ಮತ್ತಿತರ ಪ್ರಮುಖ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು, ನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ನಮ್ಮ ಈ ಪ್ರಯತ್ನದಿಂದ, ಜಾನುವಾರುಗಳನ್ನು ಗುರುತಿಸಲು ವಾಹನ ಸವಾರರಿಗೂ ನೆರವಾಗುತ್ತದೆ ಎಂದು ವಿವರಿಸಿದರು.</p>.<p>ಬಿಜೆಪಿ ಪ್ರಮುಖರಾದ ಮಹೇಂದ್ರ, ಆಟೋ ಕುಮಾರ್, ಕಾರ್ತಿಕ್ ಭಂಡಾರಿ, ಪಾನಿಪುರಿ ಸುಭಾಷ್, ಸುಮಿತ್, ಪವನ್, ನಿರಂಜನ್, ಶಶಾಂಕ್, ನಾಗರಾಜ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ</strong>: ಬಿಜೆಪಿ ಮುಖಂಡ ಹಾಲಗದ್ದೆ ಉಮೇಶ್ ನೇತೃತ್ವದ ತಂಡ ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಅಡ್ಡಾಡುವ ಬೀಡಾಡಿ ದನಗಳ ಕೊರಳಿಗೆ ರೇಡಿಯಂ ಪಟ್ಟಿ ಕಟ್ಟುವ ಕಾರ್ಯಕ್ಕೆ ಈಚೆಗೆ ಚಾಲನೆ ನೀಡಿತು. </p>.<p>ಹೊಸನಗರ ಪಟ್ಟಣ ವ್ಯಾಪ್ತಿಯಲ್ಲಿ ಬೀಡಾಡಿ ದನಗಳು ಹಾಗೂ ವಾಹನಗಳ ನಡುವೆ ಅಪಘಾತಗಳು ಸಂಭವಿಸುತ್ತಿವೆ. ದನಗಳಿಗೆ ಈ ರೀತಿಯ ರೇಡಿಯಂ ಬೆಲ್ಟ್ ಕಟ್ಟುವುದರಿಂದ ರಸ್ತೆ ಅಪಘಾತಗಳನ್ನು ಆದಷ್ಟೂ ತಪ್ಪಿಸುವ ಯತ್ನ ಮಾಡುತ್ತಿದ್ದೇವೆ ಎಂದು ಹಾಲಗದ್ದೆ ಉಮೇಶ್ ಹೇಳಿದರು.</p>.<p>ರಾತ್ರಿ ವೇಳೆ ರಸ್ತೆಯುದ್ದಕ್ಕೂ ಬೀಡಾಡಿ ದನಗಳು ಮಲಗಿರುತ್ತವೆ. ಮಂಗಳೂರು, ಕೊಲ್ಲೂರು, ಸಿಗಂದೂರು ಮತ್ತಿತರ ಪ್ರಮುಖ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು, ನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ನಮ್ಮ ಈ ಪ್ರಯತ್ನದಿಂದ, ಜಾನುವಾರುಗಳನ್ನು ಗುರುತಿಸಲು ವಾಹನ ಸವಾರರಿಗೂ ನೆರವಾಗುತ್ತದೆ ಎಂದು ವಿವರಿಸಿದರು.</p>.<p>ಬಿಜೆಪಿ ಪ್ರಮುಖರಾದ ಮಹೇಂದ್ರ, ಆಟೋ ಕುಮಾರ್, ಕಾರ್ತಿಕ್ ಭಂಡಾರಿ, ಪಾನಿಪುರಿ ಸುಭಾಷ್, ಸುಮಿತ್, ಪವನ್, ನಿರಂಜನ್, ಶಶಾಂಕ್, ನಾಗರಾಜ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>