<p><strong>ಶಿವಮೊಗ್ಗ:</strong> ‘ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕಾಂಗ್ರೆಸ್ ಏನನ್ನೂ ಮಾಡಿಲ್ಲ ಎಂಬುದನ್ನು ಆ ಪಕ್ಷದ ಅಗ್ರ ನಾಯಕ ರಾಹುಲ್ ಗಾಂಧಿಯವರೇ ಒಪ್ಪಿಕೊಂಡಿದ್ದಾರೆ’ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು. </p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ನಾವೂ ಏನೂ ಮಾಡಲಿಲ್ಲ, ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವಲ್ಲಿ ವಿಫಲರಾಗಿದ್ದೇವೆ. ಅರ್ಥಮಾಡಿಕೊಂಡಿದ್ದರೆ ಮತ್ತಷ್ಟು ಅಭಿವೃದ್ಧಿಯನ್ನು ಹಿಂದುಳಿದ ವರ್ಗಗಳಿಗಾಗಿ ಮಾಡಬಹುದಿತ್ತು ಎಂದು ರಾಹುಲ್ಗಾಂಧಿ ಹೇಳಿದ್ದಾರೆ. ಅವರಿಗೆ ಈಗಲಾದರೂ ಜ್ಞಾನೋದಯವಾಗಿದೆ ಎಂದು ಛೇಡಿಸಿದರು. </p>.<p>ರಾಹುಲ್ಗಾಂಧಿ ಹಿಂದುಳಿದ ವರ್ಗಗಳ ಹರಿಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದನ್ನು ನೋಡಿದರೆ ಆಶ್ಚರ್ಯವಾಗುತ್ತದೆ. ತಾವು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬ ಕಾರಣಕ್ಕಾಗಿ ಬಕೆಟ್ ಹಿಡಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು. </p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟರಿಗೂ ದ್ರೋಹ ಬಗೆಯುತ್ತಿದ್ದಾರೆ. ಅವರ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಸಾವಿರಾರು ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಪರಿಶಿಷ್ಟರಿಗಾಗಿ ಮೀಸಲಿಟ್ಟಿದ್ದ ₹37,000 ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ. ಇದು ಪರಿಶಿಷ್ಟರಿಗೆ ಮಾಡಿದ ದ್ರೋಹವಲ್ಲದೆ ಮತ್ತೇನೂ ಅಲ್ಲ. ಆಗಸ್ಟ್ 5ರಂದು ಇದಕ್ಕಾಗಿ ಒಂದು ವಿಶೇಷ ಸಭೆ ಕೂಡ ಕರೆದಿದ್ದಾರೆ. ಈಗ ಈ ಹಣವನ್ನು ಎಲ್ಲಿಂದ ಹೇಗೆ ತುಂಬಿಕೊಡುತ್ತಾರೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ ಎಂದರು. </p>.<p>ರಸಗೊಬ್ಬರದ ಕೊರತೆ ಪರಿಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಪತ್ರ ಬರೆಯುತ್ತಾರೆ. ಆದರೆ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಇಲ್ಲ ಎಂದು ಹೇಳುತ್ತಾರೆ. ಈ ವಿರೋಧಾಭಾಸದ ಹೇಳಿಕೆಗಳು ಏಕೆ ಎಂಬುದೇ ಅರ್ಥವಾಗುತ್ತಿಲ್ಲ. ಕೇಂದ್ರ ಸರ್ಕಾರದ ಮೇಲೆ ವಿನಾಕಾರಣ ದೂರು ಕೊಡುವ ಬದಲು ಕೇಂದ್ರವೇ ಹೇಳಿದಂತೆ, ರಸಗೊಬ್ಬರವನ್ನು ದಾಸ್ತಾನು ಮಾಡಬಹುದಾಗಿತ್ತಲ್ಲವೇ ಎಂದು ಪ್ರಶ್ನೆ ಮಾಡಿದರು. </p>.<p>ಪ್ರಮುಖರಾದ ಈ. ವಿಶ್ವಾಸ್, ಬಾಲು, ಮೋಹನ್ ಜಾಧವ್, ಶಿವಾಜಿ, ಕುಬೇರಪ್ಪ, ವಿನಯ್, ಕಾಚಿನಕಟ್ಟೆ ಸತ್ಯನಾರಾಯಣ್, ಗುರುರಾಜ್ ಶೇಟ್ ಇದ್ದರು.</p>.<p><strong>‘ಗೊಂದಲ ಪರಿಹಾರ; ಅಭಿನಂದನೆ’</strong></p><p>‘ದೈವಜ್ಞ ಬ್ರಾಹ್ಮಣ ಸಮುದಾಯದ ಜಾತಿ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸುವಂತೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಕೋರಲಾಗಿತ್ತು. ತಕ್ಷಣವೇ ಅದಕ್ಕೆ ಸ್ಪಂದಿಸಿದ ಸಚಿವರು ಸಮಸ್ಯೆ ಬಗೆಹರಿಸಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವೆ’ ಎಂದು ಕೆ.ಎಸ್. ಈಶ್ವರಪ್ಪ ತಿಳಿಸಿದರು.</p><p>‘ದೈವಜ್ಞ ಬ್ರಾಹ್ಮಣ ಸಮುದಾಯದವರು ಮೊದಲಿನಿಂದಲೂ ‘2ಎ’ನಲ್ಲಿ ಇದ್ದರು. ಆದರೆ ಅವರನ್ನು ಸಾಮಾನ್ಯವರ್ಗಕ್ಕೆ ಸೇರಿಸಲಾಗಿತ್ತು. ಇದರಿಂದ ಸಮುದಾಯದ ವಿದ್ಯಾರ್ಥಿಗಳಿಗೆ ತೊಂದರೆ ಆಗಿತ್ತು. ಆ ಬಗ್ಗೆ ಸಮುದಾಯದ ಮುಖಂಡರು ಗಮನ ಸೆಳೆದಿದ್ದರು. ತಕ್ಷಣವೇ ಸಚಿವ ಮಧು ಬಂಗಾರಪ್ಪ ಅವರಿಗೂ ವಿಷಯ ತಿಳಿಸಿದೆ. ಅವರೂ ತಕ್ಷಣವೇ ಸ್ಪಂದಿಸಿದರು. ಇಲಾಖೆಯ ಆಯುಕ್ತರಿಗೆ ಹೇಳಿ, ಎರಡೇ ದಿನದಲ್ಲಿ ಸಮಸ್ಯೆ ಬಗೆಹರಿಸಿದ್ದಾರೆ’ ಎಂದರು.</p><p>ದೈವಜ್ಞ ಸಮಾಜದ ಮುಖಂಡ ಗುರುರಾಜ್ ಎಂ.ಶೇಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕಾಂಗ್ರೆಸ್ ಏನನ್ನೂ ಮಾಡಿಲ್ಲ ಎಂಬುದನ್ನು ಆ ಪಕ್ಷದ ಅಗ್ರ ನಾಯಕ ರಾಹುಲ್ ಗಾಂಧಿಯವರೇ ಒಪ್ಪಿಕೊಂಡಿದ್ದಾರೆ’ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು. </p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ನಾವೂ ಏನೂ ಮಾಡಲಿಲ್ಲ, ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವಲ್ಲಿ ವಿಫಲರಾಗಿದ್ದೇವೆ. ಅರ್ಥಮಾಡಿಕೊಂಡಿದ್ದರೆ ಮತ್ತಷ್ಟು ಅಭಿವೃದ್ಧಿಯನ್ನು ಹಿಂದುಳಿದ ವರ್ಗಗಳಿಗಾಗಿ ಮಾಡಬಹುದಿತ್ತು ಎಂದು ರಾಹುಲ್ಗಾಂಧಿ ಹೇಳಿದ್ದಾರೆ. ಅವರಿಗೆ ಈಗಲಾದರೂ ಜ್ಞಾನೋದಯವಾಗಿದೆ ಎಂದು ಛೇಡಿಸಿದರು. </p>.<p>ರಾಹುಲ್ಗಾಂಧಿ ಹಿಂದುಳಿದ ವರ್ಗಗಳ ಹರಿಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದನ್ನು ನೋಡಿದರೆ ಆಶ್ಚರ್ಯವಾಗುತ್ತದೆ. ತಾವು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬ ಕಾರಣಕ್ಕಾಗಿ ಬಕೆಟ್ ಹಿಡಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು. </p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟರಿಗೂ ದ್ರೋಹ ಬಗೆಯುತ್ತಿದ್ದಾರೆ. ಅವರ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಸಾವಿರಾರು ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಪರಿಶಿಷ್ಟರಿಗಾಗಿ ಮೀಸಲಿಟ್ಟಿದ್ದ ₹37,000 ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ. ಇದು ಪರಿಶಿಷ್ಟರಿಗೆ ಮಾಡಿದ ದ್ರೋಹವಲ್ಲದೆ ಮತ್ತೇನೂ ಅಲ್ಲ. ಆಗಸ್ಟ್ 5ರಂದು ಇದಕ್ಕಾಗಿ ಒಂದು ವಿಶೇಷ ಸಭೆ ಕೂಡ ಕರೆದಿದ್ದಾರೆ. ಈಗ ಈ ಹಣವನ್ನು ಎಲ್ಲಿಂದ ಹೇಗೆ ತುಂಬಿಕೊಡುತ್ತಾರೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ ಎಂದರು. </p>.<p>ರಸಗೊಬ್ಬರದ ಕೊರತೆ ಪರಿಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಪತ್ರ ಬರೆಯುತ್ತಾರೆ. ಆದರೆ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಇಲ್ಲ ಎಂದು ಹೇಳುತ್ತಾರೆ. ಈ ವಿರೋಧಾಭಾಸದ ಹೇಳಿಕೆಗಳು ಏಕೆ ಎಂಬುದೇ ಅರ್ಥವಾಗುತ್ತಿಲ್ಲ. ಕೇಂದ್ರ ಸರ್ಕಾರದ ಮೇಲೆ ವಿನಾಕಾರಣ ದೂರು ಕೊಡುವ ಬದಲು ಕೇಂದ್ರವೇ ಹೇಳಿದಂತೆ, ರಸಗೊಬ್ಬರವನ್ನು ದಾಸ್ತಾನು ಮಾಡಬಹುದಾಗಿತ್ತಲ್ಲವೇ ಎಂದು ಪ್ರಶ್ನೆ ಮಾಡಿದರು. </p>.<p>ಪ್ರಮುಖರಾದ ಈ. ವಿಶ್ವಾಸ್, ಬಾಲು, ಮೋಹನ್ ಜಾಧವ್, ಶಿವಾಜಿ, ಕುಬೇರಪ್ಪ, ವಿನಯ್, ಕಾಚಿನಕಟ್ಟೆ ಸತ್ಯನಾರಾಯಣ್, ಗುರುರಾಜ್ ಶೇಟ್ ಇದ್ದರು.</p>.<p><strong>‘ಗೊಂದಲ ಪರಿಹಾರ; ಅಭಿನಂದನೆ’</strong></p><p>‘ದೈವಜ್ಞ ಬ್ರಾಹ್ಮಣ ಸಮುದಾಯದ ಜಾತಿ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸುವಂತೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಕೋರಲಾಗಿತ್ತು. ತಕ್ಷಣವೇ ಅದಕ್ಕೆ ಸ್ಪಂದಿಸಿದ ಸಚಿವರು ಸಮಸ್ಯೆ ಬಗೆಹರಿಸಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವೆ’ ಎಂದು ಕೆ.ಎಸ್. ಈಶ್ವರಪ್ಪ ತಿಳಿಸಿದರು.</p><p>‘ದೈವಜ್ಞ ಬ್ರಾಹ್ಮಣ ಸಮುದಾಯದವರು ಮೊದಲಿನಿಂದಲೂ ‘2ಎ’ನಲ್ಲಿ ಇದ್ದರು. ಆದರೆ ಅವರನ್ನು ಸಾಮಾನ್ಯವರ್ಗಕ್ಕೆ ಸೇರಿಸಲಾಗಿತ್ತು. ಇದರಿಂದ ಸಮುದಾಯದ ವಿದ್ಯಾರ್ಥಿಗಳಿಗೆ ತೊಂದರೆ ಆಗಿತ್ತು. ಆ ಬಗ್ಗೆ ಸಮುದಾಯದ ಮುಖಂಡರು ಗಮನ ಸೆಳೆದಿದ್ದರು. ತಕ್ಷಣವೇ ಸಚಿವ ಮಧು ಬಂಗಾರಪ್ಪ ಅವರಿಗೂ ವಿಷಯ ತಿಳಿಸಿದೆ. ಅವರೂ ತಕ್ಷಣವೇ ಸ್ಪಂದಿಸಿದರು. ಇಲಾಖೆಯ ಆಯುಕ್ತರಿಗೆ ಹೇಳಿ, ಎರಡೇ ದಿನದಲ್ಲಿ ಸಮಸ್ಯೆ ಬಗೆಹರಿಸಿದ್ದಾರೆ’ ಎಂದರು.</p><p>ದೈವಜ್ಞ ಸಮಾಜದ ಮುಖಂಡ ಗುರುರಾಜ್ ಎಂ.ಶೇಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>