<p>ಶಿವಮೊಗ್ಗ: ಸವಳಂಗ ರಸ್ತೆ ಮೇಲ್ಸೇತುವೆಯ ಎರಡು ಬದಿಯಲ್ಲಿರುವ ಸರ್ವಿಸ್ ರಸ್ತೆಯ ಕಾಮಗಾರಿಯನ್ನು ಸಂಸದ ಬಿ.ವೈ. ರಾಘವೇಂದ್ರ ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ಬುಧವಾರ ವೀಕ್ಷಿಸಿದರು. </p>.<p>ಮೇಲ್ಸೇತುವೆ ಕಾಮಗಾರಿ ಹಾಗೂ ಸರ್ವಿಸ್ ರಸ್ತೆಯಲ್ಲಿನ ಕಾಮಗಾರಿಗಳಲ್ಲಿ ಕೆಲ ಲೋಪಗಳಿವೆ ಎಂದು ನಿವಾಸಿಗಳಿಂದ ದೂರು ಬಂದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಮೇಲ್ಸೇತುವೆ ಕೊನೆಗೊಳ್ಳುವ ಉಷಾ ನರ್ಸಿಂಗ್ ಹೋಂ ವೃತ್ತದಲ್ಲಿ ಭಾರಿ ಸಂಚಾರ ಅವ್ಯವಸ್ಥೆ ಉಂಟಾಗುವ ಕಾರಣ ವೃತ್ತವನ್ನು ವಿಸ್ತರಿಸುವ ಮತ್ತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಬಗ್ಗೆ ಚರ್ಚಿಸಲಾಯಿತು.</p>.<p>ಸರ್ವಿಸ್ ರಸ್ತೆಯ ಎರಡು ಬದಿಯಲ್ಲಿ ಮಳೆ ನೀರು ಹೋಗಲು ಮತ್ತು ಮೇಲ್ಸೇತುವೆಯಿಂದ ಕೆಳಗೆ ಬೀಳುವ ಮಳೆ ನೀರನ್ನು ತಡೆದು ಇಂಗಿಸಲು ಹಾಗೂ ಅಂಡರ್ಪಾಸ್ನಲ್ಲಿನ ಸಣ್ಣಪುಟ್ಟ ಸಮಸ್ಯೆಗಳ ಬಗೆಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ರೈಲ್ವೆ ಮುಖ್ಯ ಎಂಜಿನಿಯರ್ ಪ್ರದೀಪ್ ಪುರಿ, ಮೂರ್ತಿರಾಜ್, ಹರ್ಷವರ್ಧನ್, ರಾಜ್ಕುಮಾರ್, ಸಿದ್ದಪ್ಪ, ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ, ಸ್ಮಾರ್ಟ್ ಸಿಟಿಯ ವಿಜಯ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಸವಳಂಗ ರಸ್ತೆ ಮೇಲ್ಸೇತುವೆಯ ಎರಡು ಬದಿಯಲ್ಲಿರುವ ಸರ್ವಿಸ್ ರಸ್ತೆಯ ಕಾಮಗಾರಿಯನ್ನು ಸಂಸದ ಬಿ.ವೈ. ರಾಘವೇಂದ್ರ ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ಬುಧವಾರ ವೀಕ್ಷಿಸಿದರು. </p>.<p>ಮೇಲ್ಸೇತುವೆ ಕಾಮಗಾರಿ ಹಾಗೂ ಸರ್ವಿಸ್ ರಸ್ತೆಯಲ್ಲಿನ ಕಾಮಗಾರಿಗಳಲ್ಲಿ ಕೆಲ ಲೋಪಗಳಿವೆ ಎಂದು ನಿವಾಸಿಗಳಿಂದ ದೂರು ಬಂದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಮೇಲ್ಸೇತುವೆ ಕೊನೆಗೊಳ್ಳುವ ಉಷಾ ನರ್ಸಿಂಗ್ ಹೋಂ ವೃತ್ತದಲ್ಲಿ ಭಾರಿ ಸಂಚಾರ ಅವ್ಯವಸ್ಥೆ ಉಂಟಾಗುವ ಕಾರಣ ವೃತ್ತವನ್ನು ವಿಸ್ತರಿಸುವ ಮತ್ತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಬಗ್ಗೆ ಚರ್ಚಿಸಲಾಯಿತು.</p>.<p>ಸರ್ವಿಸ್ ರಸ್ತೆಯ ಎರಡು ಬದಿಯಲ್ಲಿ ಮಳೆ ನೀರು ಹೋಗಲು ಮತ್ತು ಮೇಲ್ಸೇತುವೆಯಿಂದ ಕೆಳಗೆ ಬೀಳುವ ಮಳೆ ನೀರನ್ನು ತಡೆದು ಇಂಗಿಸಲು ಹಾಗೂ ಅಂಡರ್ಪಾಸ್ನಲ್ಲಿನ ಸಣ್ಣಪುಟ್ಟ ಸಮಸ್ಯೆಗಳ ಬಗೆಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ರೈಲ್ವೆ ಮುಖ್ಯ ಎಂಜಿನಿಯರ್ ಪ್ರದೀಪ್ ಪುರಿ, ಮೂರ್ತಿರಾಜ್, ಹರ್ಷವರ್ಧನ್, ರಾಜ್ಕುಮಾರ್, ಸಿದ್ದಪ್ಪ, ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ, ಸ್ಮಾರ್ಟ್ ಸಿಟಿಯ ವಿಜಯ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>