ಶಾಸಕ ಹಾಲಪ್ಪ ಹರತಾಳು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಸಂಸದರನ್ನು ಎದುರು ಹಾಕಿಕೊಳ್ಳಲು ಇಚ್ಚಿಸದೇ ಮೌನವಾಗಿದ್ದಾರೆ. ಅಧಿಕಾರ ಸಿಕ್ಕ ನಂತರ ಯಡಿಯೂರಪ್ಪ ಹಾಗೂ ರಾಘವೇಂದ್ರ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಶಿಕಾರಿಪುರ ಪುರಸಭೆಯಲ್ಲಿ ಕಾಂಗ್ರೆಸ್ಗೆ ಬಹುಮತ ಇದ್ದರೂ, ಮೂವರು ಸದಸ್ಯರಿಗೆ ರಾಜೀನಾಮೆ ಕೊಡಿಸಿ, ಬಿಜೆಪಿ ಅಧಿಕಾರ ಪಡೆಯಲು ಹೀನಕೃತ್ಯಕ್ಕೆ ಇಳಿದಿದ್ದಾರೆ. ಜಿಲ್ಲಾ ಪಂಚಾಯಿತಿಯಲ್ಲೂ ಜೆಡಿಎಸ್ ಅಧ್ಯಕ್ಷರನ್ನು ಬೆಂಬಲಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.