ಮಳೆಯಿಂದಾಗಿ ಹಾನಿ ಉಂಟಾದಾಗ ನಷ್ಟದ ಅಂದಾಜು ಪಟ್ಟಿಯನ್ನು ಸಮರ್ಪಕವಾಗಿ ತಯಾರಿಸಬೇಕು. ನಷ್ಟ ಅನುಭವಿಸಿದವರಿಗೆ ಸಾಧ್ಯವಾದಷ್ಟು ಮಟ್ಟಿಗೆ ಸರ್ಕಾರದಿಂದ ಹೆಚ್ಚಿನ ಪರಿಹಾರ ದೊರಕುವಂತೆ ನೋಡಿ
ಕೊಳ್ಳಬೇಕು. ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವ ರಸ್ತೆ, ಸೇತುವೆಗಳಿಗೆ ಹಾನಿ ಉಂಟಾಗಿದ್ದಲ್ಲಿ ಈ ಬಗ್ಗೆ ಶೀಘ್ರ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಇವುಗಳ ದುರಸ್ತಿಗೆ ಅಗತ್ಯ ಅನುದಾನವನ್ನು ಸರ್ಕಾರದಿಂದ ಕೊಡಿಸಲಾಗುವುದು ಎಂದು ಹೇಳಿದರು.