<p>ಸಾಗರ: ತಾಲ್ಲೂಕಿನಲ್ಲಿ ಒಂದು ವಾರದಿಂದ ಅಧಿಕ ಪ್ರಮಾಣದಲ್ಲಿ ಮಳೆಯಾಗಿದ್ದು, ಮಳೆ ಹಾನಿ ಸಂತ್ರಸ್ತರಿಗೆಶೀಘ್ರ ಪರಿಹಾರ ನೀಡಬೇಕು ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರಸಭೆ ರಂಗಮಂದಿರದಲ್ಲಿ ಶನಿವಾರ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಮಾ<br />ಲೋಚನಾ ಸಭೆಯಲ್ಲಿ ಮಾತನಾಡಿದರು.</p>.<p>ಮಳೆಯಿಂದಾಗಿ ಹಾನಿ ಉಂಟಾದಾಗ ನಷ್ಟದ ಅಂದಾಜು ಪಟ್ಟಿಯನ್ನು ಸಮರ್ಪಕವಾಗಿ ತಯಾರಿಸಬೇಕು. ನಷ್ಟ ಅನುಭವಿಸಿದವರಿಗೆ ಸಾಧ್ಯವಾದಷ್ಟು ಮಟ್ಟಿಗೆ ಸರ್ಕಾರದಿಂದ ಹೆಚ್ಚಿನ ಪರಿಹಾರ ದೊರಕುವಂತೆ ನೋಡಿ<br />ಕೊಳ್ಳಬೇಕು. ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವ ರಸ್ತೆ, ಸೇತುವೆಗಳಿಗೆ ಹಾನಿ ಉಂಟಾಗಿದ್ದಲ್ಲಿ ಈ ಬಗ್ಗೆ ಶೀಘ್ರ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಇವುಗಳ ದುರಸ್ತಿಗೆ ಅಗತ್ಯ ಅನುದಾನವನ್ನು ಸರ್ಕಾರದಿಂದ ಕೊಡಿಸಲಾಗುವುದು ಎಂದು ಹೇಳಿದರು.</p>.<p>ಕೋವಿಡ್ ಮೂರನೇ ಅಲೆ ಬರುವ ಕುರಿತು ತಜ್ಞರು ಎಚ್ಚರಿಕೆ ನೀಡುತ್ತಲೇ ಇದ್ದಾರೆ. ಹೀಗಾಗಿ ಮೂರನೇ ಅಲೆಯನ್ನು ಎದುರಿಸಲು ತಾಲ್ಲೂಕು ಆಡಳಿತ ಸಜ್ಜಾಗಬೇಕು. ಆಸ್ಪತ್ರೆಗಳಿಗೆ ಅಗತ್ಯವಿರುವ ಪರಿಕರ ಕೂಡಲೇ ಪೂರೈಸಲಾಗುವುದು ಎಂದರು.</p>.<p>ತಾಲ್ಲೂಕಿನಲ್ಲಿ ಕೋವಿಡ್ ಲಸಿಕೆ ಕೊರತೆ ಕುರಿತು ಪ್ರಸ್ತಾಪಿಸಿದ ಅವರು, ‘ದೇಶದ ಎಲ್ಲೆಡೆ ಲಸಿಕೆ ಕೊರತೆ ಇರುವುದು ಕಂಡುಬಂದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಲಸಿಕೆ ನೀಡುವಲ್ಲಿ ಸಾಗರ ಮೂರನೇ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಲಸಿಕೆ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು’ ಎಂದರು.</p>.<p>ಉಪವಿಭಾಗಾಧಿಕಾರಿ ಡಾ.ನಾಗರಾಜ್ ಎಲ್., ‘ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ<br />ಬಿಟ್ಟು ತೆರಳದಂತೆ ಸೂಚನೆ ನೀಡಲಾಗಿದೆ. ಅದನ್ನು ಉಲ್ಲಂಘಿಸುವವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ತಾಲ್ಲೂಕು ಪಂಚಾಯಿತಿ ಇಒ ಪುಷ್ಪಾ ಕಮ್ಮಾರ್, ಡಿವೈಎಸ್ಪಿ ವಿನಾಯಕ ಎನ್. ಶೆಟಗೇರಿ, ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ತಾಲ್ಲೂಕಿನಲ್ಲಿ ಒಂದು ವಾರದಿಂದ ಅಧಿಕ ಪ್ರಮಾಣದಲ್ಲಿ ಮಳೆಯಾಗಿದ್ದು, ಮಳೆ ಹಾನಿ ಸಂತ್ರಸ್ತರಿಗೆಶೀಘ್ರ ಪರಿಹಾರ ನೀಡಬೇಕು ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರಸಭೆ ರಂಗಮಂದಿರದಲ್ಲಿ ಶನಿವಾರ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಮಾ<br />ಲೋಚನಾ ಸಭೆಯಲ್ಲಿ ಮಾತನಾಡಿದರು.</p>.<p>ಮಳೆಯಿಂದಾಗಿ ಹಾನಿ ಉಂಟಾದಾಗ ನಷ್ಟದ ಅಂದಾಜು ಪಟ್ಟಿಯನ್ನು ಸಮರ್ಪಕವಾಗಿ ತಯಾರಿಸಬೇಕು. ನಷ್ಟ ಅನುಭವಿಸಿದವರಿಗೆ ಸಾಧ್ಯವಾದಷ್ಟು ಮಟ್ಟಿಗೆ ಸರ್ಕಾರದಿಂದ ಹೆಚ್ಚಿನ ಪರಿಹಾರ ದೊರಕುವಂತೆ ನೋಡಿ<br />ಕೊಳ್ಳಬೇಕು. ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವ ರಸ್ತೆ, ಸೇತುವೆಗಳಿಗೆ ಹಾನಿ ಉಂಟಾಗಿದ್ದಲ್ಲಿ ಈ ಬಗ್ಗೆ ಶೀಘ್ರ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಇವುಗಳ ದುರಸ್ತಿಗೆ ಅಗತ್ಯ ಅನುದಾನವನ್ನು ಸರ್ಕಾರದಿಂದ ಕೊಡಿಸಲಾಗುವುದು ಎಂದು ಹೇಳಿದರು.</p>.<p>ಕೋವಿಡ್ ಮೂರನೇ ಅಲೆ ಬರುವ ಕುರಿತು ತಜ್ಞರು ಎಚ್ಚರಿಕೆ ನೀಡುತ್ತಲೇ ಇದ್ದಾರೆ. ಹೀಗಾಗಿ ಮೂರನೇ ಅಲೆಯನ್ನು ಎದುರಿಸಲು ತಾಲ್ಲೂಕು ಆಡಳಿತ ಸಜ್ಜಾಗಬೇಕು. ಆಸ್ಪತ್ರೆಗಳಿಗೆ ಅಗತ್ಯವಿರುವ ಪರಿಕರ ಕೂಡಲೇ ಪೂರೈಸಲಾಗುವುದು ಎಂದರು.</p>.<p>ತಾಲ್ಲೂಕಿನಲ್ಲಿ ಕೋವಿಡ್ ಲಸಿಕೆ ಕೊರತೆ ಕುರಿತು ಪ್ರಸ್ತಾಪಿಸಿದ ಅವರು, ‘ದೇಶದ ಎಲ್ಲೆಡೆ ಲಸಿಕೆ ಕೊರತೆ ಇರುವುದು ಕಂಡುಬಂದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಲಸಿಕೆ ನೀಡುವಲ್ಲಿ ಸಾಗರ ಮೂರನೇ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಲಸಿಕೆ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು’ ಎಂದರು.</p>.<p>ಉಪವಿಭಾಗಾಧಿಕಾರಿ ಡಾ.ನಾಗರಾಜ್ ಎಲ್., ‘ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ<br />ಬಿಟ್ಟು ತೆರಳದಂತೆ ಸೂಚನೆ ನೀಡಲಾಗಿದೆ. ಅದನ್ನು ಉಲ್ಲಂಘಿಸುವವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ತಾಲ್ಲೂಕು ಪಂಚಾಯಿತಿ ಇಒ ಪುಷ್ಪಾ ಕಮ್ಮಾರ್, ಡಿವೈಎಸ್ಪಿ ವಿನಾಯಕ ಎನ್. ಶೆಟಗೇರಿ, ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>