‘ರಾಜ್ಯದಲ್ಲಿ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿದಿದ್ದು, ರೈತರ ಕೈ ಸೇರುವ ಹೊಸ್ತಿಲಲ್ಲಿದ್ದ ಭತ್ತ, ಮೆಕ್ಕೆಜೋಳ ಮೊಳಕೆಯೊಡೆಯುತ್ತಿವೆ. ಕಟಾವಿಗೆ ಬಂದಿದ್ದ ಭತ್ತ ಧರೆಗೆ ಉರುಳಿ ಸಂಪೂರ್ಣ ಹಾಳಾಗಿರುವುದು ಕ್ಷೇತ್ರ ಪ್ರವಾಸದ ಸಂದರ್ಭದಲ್ಲಿ ಕಂಡಿದ್ದೇನೆ. ಜೊತೆಗೆ ತೋಟಗಾರಿಕೆ ಬೆಳೆಗಳಾದ ಬಾಳೆ, ಅಡಿಕೆ ಸೇರಿ ಅನೇಕ ಬೆಳೆಗಳು ಮಳೆಯಿಂದ ಹಾನಿಗೀಡಾಗಿದ್ದು, ಸರ್ಕಾರ ರೈತರ ನೆರವಿಗೆ ಧಾವಿಸಬೇಕು’ ಎಂದು ತಿಳಿಸಿದರು.