<p>ಹೊಸನಗರ: ತಾಲ್ಲೂಕಿನಲ್ಲಿ ಮಳೆ ಜೋರಾಗುತ್ತಿದ್ದು, ಹೆಚ್ಚಿನ ಮಳೆಹಾನಿ ಸಂಭವಿಸುವ ಲಕ್ಷಣವಿದೆ. ಅಧಿಕಾರಿಗಳು ಮಳೆಹಾನಿ ವಿಚಾರದಲ್ಲಿ ನಿರ್ಲಕ್ಷ್ಯ ತಾಳದೆ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಸೂಚಿಸಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.</p>.<p>‘ತಾಲ್ಲೂಕಿನಲ್ಲಿ ಭಾರಿ ಮಳೆ ಸುರಿಯುತ್ತದೆ. ಇದರಿಂದ ಅಪಾಯ ಸಂಭವಿಸುವ ಸಾಧ್ಯತೆ ಇದೆ. ಅಧಿಕಾರಿಗಳು ಕ್ರಮಬದ್ಧ ವರದಿ ನೀಡಬೇಕು. ಮನೆ ಕುಸಿತವಾದಲ್ಲಿ ನಿರ್ದಿಷ್ಟ ವರದಿ ನೀಡಬೇಕು. ಕಚೇರಿಯಲ್ಲಿ ಕುಳಿತು ವರದಿ ತಯಾರಿಸಬೇಡಿ. ಸ್ಥಳಕ್ಕೆ ಹೋಗಿ ಪರಿಶೀಲಿಸಿ ನೋಡಿ ಫಲಾನುಭವಿಗಳಿಗೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕು. ಈ ಬಗ್ಗೆ ಅಧಿಕಾರಿಗಳು ಅಸಡ್ಡೆ ತಾಳಿದರೆ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಶಾಲೆಗಳ ಗೋಡೆ, ಚಾವಣೆ ಕುಸಿದು ಹಾನಿಯಾದ ಬಗ್ಗೆ ದೂರು ಬಂದಲ್ಲಿ ಹೆಚ್ಚಿನ ಅನುದಾನ ಮೀಸಲಿಟ್ಟು, ದುರಸ್ತಿ ಮಾಡಬೇಕು ಎಂದು ಬಿಇಒ ವೀರಭದ್ರಪ್ಪ ಅವರಿಗೆ ಸೂಚಿಸಿದರು.</p>.<p>ಮಳೆಗಾಲದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿ ಇರಬೇಕು. ಶಿವಮೊಗ್ಗದಲ್ಲಿ ಮನೆ ಮಾಡಿಕೊಂಡು, ಇಲ್ಲಿಗೆ ಬಂದು ಹೋಗುವವರು ಇಲ್ಲಿಯೇ ಇರಬೇಕು. ಈ ಬಗ್ಗೆ ಹೆಚ್ಚಿನ ಗಮನ ನೀಡಬೇಕು ಎಂದು ತಾಕೀತು ಮಾಡಿದರು.</p>.<p class="Subhead">ಕುಡಿಯಲು ಹಿನ್ನೀರ ನೀರು: ತಾಲ್ಲೂಕಿನ ಹಲವು ಗ್ರಾಮ ಪಂಚಾಯಿತಿಗಳಿಗೆ ಕುಡಿಯುವ ನೀರು ಪೂರೈಸಲು ಬಹುಗ್ರಾಮ ಯೋಜನೆ ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಶರಾವತಿ ಹಿನ್ನೀರು ಮತ್ತು ಮಾಣಿ, ಸಾವೇಹಕ್ಕಲು ಹಿನ್ನೀರು ಪ್ರದೇಶದಿಂದ ಗ್ರಾಮಗಳ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಮಾಡಲು ಚಿಂತಿಸಲಾಗಿದೆ. ಈ ಕುರಿತು ಯೋಗ್ಯ ಸ್ಥಳಗಳ ಪರಿಶೀಲನೆ, ಸರ್ವೆ ಕಾರ್ಯ ನಡೆಯುತ್ತಿದೆ ಎಂದರು.</p>.<p>ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಪರೇಷನ್ ರೂಂ ಸೋರುತ್ತಿದೆ. ಇಲ್ಲಿ ಆಪರೇಷನ್ ಮಾಡಲು ಆಗುತ್ತಿಲ್ಲ. ಒಬ್ಬರು ಪ್ರಸೂತಿ ತಜ್ಞರು ಇದ್ದರೂ ಆಪರೇಷನ್ ಮಾಡಲು ಸಾಧ್ಯವಾಗುತ್ತಿಲ್ಲ. ಕೂಡಲೇ ದುರಸ್ತಿ ಮಾಡಿಸಿ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಸುರೇಶ ನಾಯ್ಕ ಮನವಿ ಮಾಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ‘ಒಟಿ ರೂಂ ನೆಲ ಮಹಡಿಯಲ್ಲಿ ಇರಬೇಕು. ಯಾಕೆ ಮೊದಲ ಮಹಡಿಯಲ್ಲಿದೆ ಎಂದು ಪ್ರಶ್ನಿಸಿದರು. ಶೀಘ್ರ ದುರಸ್ತಿ ಮಾಡಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p class="Subhead">ಪರೀಕ್ಷೆ ಹೆಚ್ಚಿನ ಗಮನ ನೀಡಿ: ಸೋಮವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗುತ್ತಿದೆ. ವಿದ್ಯಾರ್ಥಿಗಳಿಗೆ ಯಾವುದೇ ಕೊರತೆ ಆಗದಂತೆ ಮುತುವರ್ಜಿ ವಹಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಸೌಲಭ್ಯಗಳು ಇರಬೇಕು. ಮುಂಜಾಗೃತಾ ಕ್ರಮ ವಹಿಸಿ ಸರ್ಕಾರದ ಆದೇಶ ಪಾಲಿಸಬೇಕು. ಈ ವಿಚಾರದಲ್ಲಿ ಯಾರೂ ಸುಮ್ಮನೆ ಕೂರಬಾರದು ಎಂದು ಎಚ್ಚರಿಸಿದರು.</p>.<p>ತಾಲ್ಲೂಕಿನ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಮಕ್ಕಳನ್ನು ಸಕಾಲಕ್ಕೆ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸನಗರ: ತಾಲ್ಲೂಕಿನಲ್ಲಿ ಮಳೆ ಜೋರಾಗುತ್ತಿದ್ದು, ಹೆಚ್ಚಿನ ಮಳೆಹಾನಿ ಸಂಭವಿಸುವ ಲಕ್ಷಣವಿದೆ. ಅಧಿಕಾರಿಗಳು ಮಳೆಹಾನಿ ವಿಚಾರದಲ್ಲಿ ನಿರ್ಲಕ್ಷ್ಯ ತಾಳದೆ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಸೂಚಿಸಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.</p>.<p>‘ತಾಲ್ಲೂಕಿನಲ್ಲಿ ಭಾರಿ ಮಳೆ ಸುರಿಯುತ್ತದೆ. ಇದರಿಂದ ಅಪಾಯ ಸಂಭವಿಸುವ ಸಾಧ್ಯತೆ ಇದೆ. ಅಧಿಕಾರಿಗಳು ಕ್ರಮಬದ್ಧ ವರದಿ ನೀಡಬೇಕು. ಮನೆ ಕುಸಿತವಾದಲ್ಲಿ ನಿರ್ದಿಷ್ಟ ವರದಿ ನೀಡಬೇಕು. ಕಚೇರಿಯಲ್ಲಿ ಕುಳಿತು ವರದಿ ತಯಾರಿಸಬೇಡಿ. ಸ್ಥಳಕ್ಕೆ ಹೋಗಿ ಪರಿಶೀಲಿಸಿ ನೋಡಿ ಫಲಾನುಭವಿಗಳಿಗೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕು. ಈ ಬಗ್ಗೆ ಅಧಿಕಾರಿಗಳು ಅಸಡ್ಡೆ ತಾಳಿದರೆ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ಶಾಲೆಗಳ ಗೋಡೆ, ಚಾವಣೆ ಕುಸಿದು ಹಾನಿಯಾದ ಬಗ್ಗೆ ದೂರು ಬಂದಲ್ಲಿ ಹೆಚ್ಚಿನ ಅನುದಾನ ಮೀಸಲಿಟ್ಟು, ದುರಸ್ತಿ ಮಾಡಬೇಕು ಎಂದು ಬಿಇಒ ವೀರಭದ್ರಪ್ಪ ಅವರಿಗೆ ಸೂಚಿಸಿದರು.</p>.<p>ಮಳೆಗಾಲದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿ ಇರಬೇಕು. ಶಿವಮೊಗ್ಗದಲ್ಲಿ ಮನೆ ಮಾಡಿಕೊಂಡು, ಇಲ್ಲಿಗೆ ಬಂದು ಹೋಗುವವರು ಇಲ್ಲಿಯೇ ಇರಬೇಕು. ಈ ಬಗ್ಗೆ ಹೆಚ್ಚಿನ ಗಮನ ನೀಡಬೇಕು ಎಂದು ತಾಕೀತು ಮಾಡಿದರು.</p>.<p class="Subhead">ಕುಡಿಯಲು ಹಿನ್ನೀರ ನೀರು: ತಾಲ್ಲೂಕಿನ ಹಲವು ಗ್ರಾಮ ಪಂಚಾಯಿತಿಗಳಿಗೆ ಕುಡಿಯುವ ನೀರು ಪೂರೈಸಲು ಬಹುಗ್ರಾಮ ಯೋಜನೆ ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಶರಾವತಿ ಹಿನ್ನೀರು ಮತ್ತು ಮಾಣಿ, ಸಾವೇಹಕ್ಕಲು ಹಿನ್ನೀರು ಪ್ರದೇಶದಿಂದ ಗ್ರಾಮಗಳ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಮಾಡಲು ಚಿಂತಿಸಲಾಗಿದೆ. ಈ ಕುರಿತು ಯೋಗ್ಯ ಸ್ಥಳಗಳ ಪರಿಶೀಲನೆ, ಸರ್ವೆ ಕಾರ್ಯ ನಡೆಯುತ್ತಿದೆ ಎಂದರು.</p>.<p>ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಪರೇಷನ್ ರೂಂ ಸೋರುತ್ತಿದೆ. ಇಲ್ಲಿ ಆಪರೇಷನ್ ಮಾಡಲು ಆಗುತ್ತಿಲ್ಲ. ಒಬ್ಬರು ಪ್ರಸೂತಿ ತಜ್ಞರು ಇದ್ದರೂ ಆಪರೇಷನ್ ಮಾಡಲು ಸಾಧ್ಯವಾಗುತ್ತಿಲ್ಲ. ಕೂಡಲೇ ದುರಸ್ತಿ ಮಾಡಿಸಿ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಸುರೇಶ ನಾಯ್ಕ ಮನವಿ ಮಾಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ‘ಒಟಿ ರೂಂ ನೆಲ ಮಹಡಿಯಲ್ಲಿ ಇರಬೇಕು. ಯಾಕೆ ಮೊದಲ ಮಹಡಿಯಲ್ಲಿದೆ ಎಂದು ಪ್ರಶ್ನಿಸಿದರು. ಶೀಘ್ರ ದುರಸ್ತಿ ಮಾಡಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p class="Subhead">ಪರೀಕ್ಷೆ ಹೆಚ್ಚಿನ ಗಮನ ನೀಡಿ: ಸೋಮವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗುತ್ತಿದೆ. ವಿದ್ಯಾರ್ಥಿಗಳಿಗೆ ಯಾವುದೇ ಕೊರತೆ ಆಗದಂತೆ ಮುತುವರ್ಜಿ ವಹಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಸೌಲಭ್ಯಗಳು ಇರಬೇಕು. ಮುಂಜಾಗೃತಾ ಕ್ರಮ ವಹಿಸಿ ಸರ್ಕಾರದ ಆದೇಶ ಪಾಲಿಸಬೇಕು. ಈ ವಿಚಾರದಲ್ಲಿ ಯಾರೂ ಸುಮ್ಮನೆ ಕೂರಬಾರದು ಎಂದು ಎಚ್ಚರಿಸಿದರು.</p>.<p>ತಾಲ್ಲೂಕಿನ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಮಕ್ಕಳನ್ನು ಸಕಾಲಕ್ಕೆ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>