<p><strong>ಸಾಗರ: </strong>ತಾಲ್ಲೂಕಿನಲ್ಲಿ ಶನಿವಾರ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕಳೆದ ಏಳು ದಿನಗಳಿಂದ ನಿರಂತರವಾಗಿ ಜಡಿಮಳೆಯಾದ ಕಾರಣ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. </p>.<p>ತಾಲ್ಲೂಕಿನ ತಾಳಗುಪ್ಪ ಹೋಬಳಿಯಲ್ಲಿ ವರದಾ ನದಿ ಪ್ರವಾಹದಿಂದ ಸುಮಾರು 2 ಸಾವಿರ ಎಕರೆ ಭತ್ತದ ಗದ್ದೆಯಲ್ಲಿ ನಿಂತಿರುವ ನೀರಿನ ಪ್ರಮಾಣ ಇನ್ನೂ ಇಳಿಕೆಯಾಗಿಲ್ಲ. ತಾಳಗುಪ್ಪ, ಕಾನ್ಲೆ, ಸೈದೂರು, ಮಂಡಗಳಲೆ, ತಡಗಳಲೆ, ಹಿರೇನೆಲ್ಲೂರು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.</p>.<p>ಸೈದೂರು, ಕಾನ್ಲೆ ನಡುವಿನ ಕನ್ನಹೊಳೆ ಸೇತುವೆ ಮೇಲೆ ನೀರು ಹರಿಯುತ್ತಿದ್ದು ಈ ಸೇತುವೆ ಮೇಲಿನ ಸಂಚಾರ ನಿಷೇಧ ಮುಂದುವರೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಶನಿವಾರ ಈ ಭಾಗಕ್ಕೆ ಭೇಟಿ ನೀಡಿದ್ದರು. </p>.<p>ಕನ್ನಹೊಳೆ ಸೇತುವೆ ಮೇಲೆ ಸಂಚಾರ ನಿಷೇಧಿಸಿರುವುದರಿಂದ ಸೈದೂರು, ತಡಗಳಲೆ ಭಾಗದ ಗ್ರಾಮಸ್ಥರು ತಾಳಗುಪ್ಪದ ಮೂಲಕ ಸಾಗರಕ್ಕೆ ಸಂಚರಿಸುವಂತಾಗಿದೆ. ಬೀಸನಗದ್ದೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡಿದ್ದು ಮಳೆಯ ಪ್ರಮಾಣ ಹೆಚ್ಚಾದರೆ ಈ ಗ್ರಾಮ ನಾಗರಿಕ ಜಗತ್ತಿನ ಸಂಪರ್ಕ ಕಡಿದುಕೊಳ್ಳುವ ಅಪಾಯಕ್ಕೆ ಸಿಲುಕಿದೆ.</p>.<p>ನಗರದ ಬಸವನಹೊಳೆ ಡ್ಯಾಂನಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಗಾಂಧಿನಗರ ಬಡಾವಣೆಯ ಹಬೀಬ್ ಸಾಬ್, ಇನಾಯತ್ ಹಾಗೂ ನಿಸ್ಸಾರ್ ಎಂಬುವವರ ಮನೆಯ ಗೋಡೆ ಕುಸಿದು ಹಾನಿ ಉಂಟಾಗಿದೆ. ಒಂದು ದ್ವಿಚಕ್ರ ವಾಹನ, ಗೃಹಪಯೋಗಿ ವಸ್ತುಗಳು ಜಖಂಗೊಂಡಿವೆ. ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಭೇಟಿ ನೀಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ತಾಲ್ಲೂಕಿನಲ್ಲಿ ಶನಿವಾರ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕಳೆದ ಏಳು ದಿನಗಳಿಂದ ನಿರಂತರವಾಗಿ ಜಡಿಮಳೆಯಾದ ಕಾರಣ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. </p>.<p>ತಾಲ್ಲೂಕಿನ ತಾಳಗುಪ್ಪ ಹೋಬಳಿಯಲ್ಲಿ ವರದಾ ನದಿ ಪ್ರವಾಹದಿಂದ ಸುಮಾರು 2 ಸಾವಿರ ಎಕರೆ ಭತ್ತದ ಗದ್ದೆಯಲ್ಲಿ ನಿಂತಿರುವ ನೀರಿನ ಪ್ರಮಾಣ ಇನ್ನೂ ಇಳಿಕೆಯಾಗಿಲ್ಲ. ತಾಳಗುಪ್ಪ, ಕಾನ್ಲೆ, ಸೈದೂರು, ಮಂಡಗಳಲೆ, ತಡಗಳಲೆ, ಹಿರೇನೆಲ್ಲೂರು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.</p>.<p>ಸೈದೂರು, ಕಾನ್ಲೆ ನಡುವಿನ ಕನ್ನಹೊಳೆ ಸೇತುವೆ ಮೇಲೆ ನೀರು ಹರಿಯುತ್ತಿದ್ದು ಈ ಸೇತುವೆ ಮೇಲಿನ ಸಂಚಾರ ನಿಷೇಧ ಮುಂದುವರೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಶನಿವಾರ ಈ ಭಾಗಕ್ಕೆ ಭೇಟಿ ನೀಡಿದ್ದರು. </p>.<p>ಕನ್ನಹೊಳೆ ಸೇತುವೆ ಮೇಲೆ ಸಂಚಾರ ನಿಷೇಧಿಸಿರುವುದರಿಂದ ಸೈದೂರು, ತಡಗಳಲೆ ಭಾಗದ ಗ್ರಾಮಸ್ಥರು ತಾಳಗುಪ್ಪದ ಮೂಲಕ ಸಾಗರಕ್ಕೆ ಸಂಚರಿಸುವಂತಾಗಿದೆ. ಬೀಸನಗದ್ದೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡಿದ್ದು ಮಳೆಯ ಪ್ರಮಾಣ ಹೆಚ್ಚಾದರೆ ಈ ಗ್ರಾಮ ನಾಗರಿಕ ಜಗತ್ತಿನ ಸಂಪರ್ಕ ಕಡಿದುಕೊಳ್ಳುವ ಅಪಾಯಕ್ಕೆ ಸಿಲುಕಿದೆ.</p>.<p>ನಗರದ ಬಸವನಹೊಳೆ ಡ್ಯಾಂನಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಗಾಂಧಿನಗರ ಬಡಾವಣೆಯ ಹಬೀಬ್ ಸಾಬ್, ಇನಾಯತ್ ಹಾಗೂ ನಿಸ್ಸಾರ್ ಎಂಬುವವರ ಮನೆಯ ಗೋಡೆ ಕುಸಿದು ಹಾನಿ ಉಂಟಾಗಿದೆ. ಒಂದು ದ್ವಿಚಕ್ರ ವಾಹನ, ಗೃಹಪಯೋಗಿ ವಸ್ತುಗಳು ಜಖಂಗೊಂಡಿವೆ. ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಭೇಟಿ ನೀಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>