ಅಪಾಯದಲ್ಲಿ ವಿದ್ಯಾರ್ಥಿಗಳು: ‘ಕರಡಿಮನೆ ಗ್ರಾಮದ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಇದೇ ರಸ್ತೆಯನ್ನು ಅವಲಂಬಿಸಿದ್ದು, ಪ್ರಾಣವನ್ನು ಕೈಯಲ್ಲಿಡಿದು ಓಡಾಡುತ್ತಿದ್ದಾರೆ. ಮಳೆ ಹೆಚ್ಚಾದ ಸಂದರ್ಭದಲ್ಲಿ ರಭಸವಾಗಿ ನೀರು ಹರಿಯುತ್ತದೆ. ಮಕ್ಕಳಿಗೆ ಅಪಾಯವಾದರೆ ಹೊಣೆ ಯಾರು’ ಎಂದು ಗ್ರಾಮಸ್ಥರಾದ ಶಿವಲಿಂಗಯ್ಯ, ಸತೀಶ್, ಮಂಜುನಾಥ್, ಮಲ್ಲಿಕಾರ್ಜುನ, ಭೂಮಿಕಾ, ಹೇಮಂತ್, ಲಿಂಗರಾಜ್ ಪ್ರಶ್ನಿಸುತ್ತಾರೆ.