ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಮುಂದುವರಿದ ಮಳೆ, ತುಂಬಿ ಹರಿದ ತುಂಗೆ

Last Updated 5 ಆಗಸ್ಟ್ 2020, 13:07 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯ ಎಲ್ಲೆಡೆ ಬುಧವಾರವೂ ಮಳೆ ಆರ್ಭಟ ಮುಂದುವರಿದಿದೆ.

ಕೆಲವು ತಾಲ್ಲೂಕುಗಳಲ್ಲಿ ರಾತ್ರಿ ಇಡೀ ಮಳೆಯಾಗಿದೆ. ಹೊಸನಗರ ತಾಲ್ಲೂಕಿನಲ್ಲಿ ಒಂದೇ ದಿನ 483 ಮಿ.ಮೀ ಮಳೆಯಾಗಿದೆ. ಜಲಾಶಯಗಳ ನದಿ ಪಾತ್ರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ತುಂಗಾ ಜಲಾಶಯಕ್ಕೆ 55,774 ಕ್ಯುಸೆಕ್, ಭದ್ರಾಗೆ 22,203 ಕ್ಯುಸೆಕ್ ನೀರು ಹರಿದು ಬರುತ್ತಿದೆ.

ತುಂಗಾ ಜಲಾಶಯದಿಂದ 59 ಸಾವಿರ ಕ್ಯುಸೆಕ್‌ ನೀರು ಹೊರ ಬಿಡಲಾಗುತ್ತಿದೆ. ಇದರಿಂದ ತುಂಗಾ ನದಿ ತುಂಬಿ ಹರಿಯುತ್ತಿದೆ. ಶಿವಮೊಗ್ಗ ನಗರದ ಕೋರ್ಪಲ್ಲಯ್ಯನ ಛತ್ರದ ಮಂಟಪ ಮುಳುಗಿದೆ. ಕೊರೊನಾ ಸಂಕಷ್ಟದ ಸಮಯದಲ್ಲೂ ಜನರು ತಂಡೋಪತಂಡವಾಗಿ ಬಂದು ತುಂಬಿದ ನದಿ ವೀಕ್ಷಿಸಿದರು. ಕೆಲವರು ಪೂಜೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT