<p><strong>ಶಿವಮೊಗ್ಗ</strong>: ಜಿಲ್ಲೆಯಾದ್ಯಂತ ಮುಂಗಾರು ಚುರುಕು ಪಡೆದುಕೊಂಡಿದೆ. ಕೆಲವೆಡೆ ಬಿಡುವು ಕೊಡದೆ ಮಳೆ ಸುರಿಯುತ್ತಿದೆ. ಹಾಗಾಗಿ ಕೆರೆ, ಕಟ್ಟೆಗಳಲ್ಲಿ ನೀರು ತುಂಬಿದ್ದು, ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗುತ್ತಿದೆ.</p>.<p>ಹೊಸನಗರ ತಾಲ್ಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿದೆ. ಮನೆಯಿಂದ ಹೊರ ಬರಲಾಗದಷ್ಟು ಮಳೆ ಅಬ್ಬರಿಸುತ್ತಿದೆ. ಇದರ ನಡುವೆಯೇ ಕೃಷಿ ಚಟುವಟಿಕೆ ಬಿರುಸು ಪಡೆದುಕೊಂಡಿದೆ.</p>.<p class="Subhead"><strong>ತುಂಬಿದ ತುಂಗೆ: </strong>ಜಿಲ್ಲೆಯ ಹಲವೆಡೆ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಗಾಜನೂರು, ತುಂಗಾ ಡ್ಯಾಂ ಭರ್ತಿಯಾಗಿದೆ. ತುಂಗಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ.</p>.<p class="Subhead">ಹೊನ್ನೆತಾಳುವಿನಲ್ಲಿ ಭಾರಿ ಮಳೆ: ಆಗುಂಬೆ ಸಮೀಪದ ಹೊನ್ನೆತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ 12 ಸೆಂ.ಮೀ ಮಳೆಯಾಗಿದೆ. ಉಳಿದಂತೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದೆ. ಸಾಗರದಲ್ಲೂ ಮುಂಗಾರು ಜೋರಿದೆ.</p>.<p>ರಿಪ್ಪನ್ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರ್ಲಿಗೆ ಗ್ರಾಮದ ಹೊಗಳಿಕಮ್ಮ ಕೆರೆಯ ದಂಡೆ ಒಡೆದು ಹಲವು ಭೂ ಪ್ರದೇಶ ಜಾಲಾವೃತಗೊಂಡು ಅಪಾರ ಬೆಳೆ ಹಾನಿಯಾಗಿದೆ.</p>.<p class="Subhead"><strong>ಶಿವಮೊಗ್ಗದಲ್ಲಿ ಮಳೆ, ಬಿಸಿಲಿನ ಆಟ</strong>: ಶಿವಮೊಗ್ಗದಲ್ಲಿ ಬೆಳಿಗ್ಗೆಯಿಂದ ಮಳೆಯಾಗುತ್ತಿತ್ತು. ಮಧ್ಯೆ ಮಧ್ಯೆ ಬಿಡುವು ನೀಡಿದ ಮಳೆ ಬಿಸಿಲಿನ ದರ್ಶನವಾಯಿತು. ಶಿವಮೊಗ್ಗದಲ್ಲಿ ಮಳೆ, ಬಿಸಿಲಿನ ಆಟವಿತ್ತು.</p>.<p class="Subhead"><strong>ಕೃಷಿ ಚಟುವಟಿಕೆ ಬಿರುಸು: </strong>ಜಿಲ್ಲೆಯಾದ್ಯಂತ ಉತ್ತಮ ಮಳೆ ಯಾಗುತ್ತಿದೆ. ಮಲೆನಾಡು ಭಾಗಗಳು ಅನಿಸಿಕೊಂಡಿರುವ ಸಾಗರ, ತೀರ್ಥಹಳ್ಳಿ, ಹೊಸನಗರದಲ್ಲಿ ಜೋರು ಮಳೆಯಾಗುತ್ತಿದೆ. ಅರೆ ಮಲೆನಾಡು ಭಾಗಗಳಲ್ಲೂ ಉತ್ತಮ ಮಳೆಯಾಗಿದ್ದು, ಮೆಕ್ಕೆ ಜೋಳ ಬಿತ್ತನೆಗೆ ವೇಗ ಸಿಕ್ಕಂತಾಗಿದೆ. ಅಡಿಕೆ ತೋಟಗಳಲ್ಲಿ ಬಿಸಿಗಾಲುವೆಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ.</p>.<p><strong>ತೀರ್ಥಹಳ್ಳಿಯಲ್ಲಿ ತುಂಬಿದ ತುಂಗೆ</strong></p>.<p><strong>ತೀರ್ಥಹಳ್ಳಿ:</strong> ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಳೆ ಬಾರಿ ಅವಾಂತರ ಸೃಷ್ಟಿ ಮಾಡಿದೆ. ಇಡೀ ದಿನ ಮಳೆ ಸುರಿಯುತ್ತಿದ್ದು, ಆಗುಂಬೆ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗಿದೆ.</p>.<p>ಮೇಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗರವಳ್ಳಿಯಲ್ಲಿ ಬಾರಿ ಮಳೆಗೆ ಮನೆ ಕುಸಿದಿದೆ. ಪುರಾತನ ಬಾವಿಯೊಂದು ಜರಿದು ಬಿದ್ದ ಕುರಿತು ವರದಿಯಾಗಿದೆ.</p>.<p>ಆಗುಂಬೆಯಲ್ಲಿ 20 ಸೆಂ.ಮೀ, ತೀರ್ಥಹಳ್ಳಿಯಲ್ಲಿ 67.4 ಮಿ.ಮೀ ಮಳೆಯಾಗಿದೆ. ಮಳೆಯಿಂದಾಗಿ ಹಲವೆಡೆ ಗದ್ದೆಗಳು ಜಲಾವೃತವಾಗಿವೆ. ತೀರ್ಥಹಳ್ಳಿ ಮತ್ತು ಶೃಂಗೇರಿ ಭಾಗದಲ್ಲಿ ಬಾರಿ ಮಳೆಯಾಗುತ್ತಿರುವುದರಿಂದ ತುಂಗಾ ನದಿಯಲ್ಲಿ ನೀರಿನ ಮಟ್ಟ ಏರುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಜಿಲ್ಲೆಯಾದ್ಯಂತ ಮುಂಗಾರು ಚುರುಕು ಪಡೆದುಕೊಂಡಿದೆ. ಕೆಲವೆಡೆ ಬಿಡುವು ಕೊಡದೆ ಮಳೆ ಸುರಿಯುತ್ತಿದೆ. ಹಾಗಾಗಿ ಕೆರೆ, ಕಟ್ಟೆಗಳಲ್ಲಿ ನೀರು ತುಂಬಿದ್ದು, ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗುತ್ತಿದೆ.</p>.<p>ಹೊಸನಗರ ತಾಲ್ಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿದೆ. ಮನೆಯಿಂದ ಹೊರ ಬರಲಾಗದಷ್ಟು ಮಳೆ ಅಬ್ಬರಿಸುತ್ತಿದೆ. ಇದರ ನಡುವೆಯೇ ಕೃಷಿ ಚಟುವಟಿಕೆ ಬಿರುಸು ಪಡೆದುಕೊಂಡಿದೆ.</p>.<p class="Subhead"><strong>ತುಂಬಿದ ತುಂಗೆ: </strong>ಜಿಲ್ಲೆಯ ಹಲವೆಡೆ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಗಾಜನೂರು, ತುಂಗಾ ಡ್ಯಾಂ ಭರ್ತಿಯಾಗಿದೆ. ತುಂಗಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ.</p>.<p class="Subhead">ಹೊನ್ನೆತಾಳುವಿನಲ್ಲಿ ಭಾರಿ ಮಳೆ: ಆಗುಂಬೆ ಸಮೀಪದ ಹೊನ್ನೆತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ 12 ಸೆಂ.ಮೀ ಮಳೆಯಾಗಿದೆ. ಉಳಿದಂತೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದೆ. ಸಾಗರದಲ್ಲೂ ಮುಂಗಾರು ಜೋರಿದೆ.</p>.<p>ರಿಪ್ಪನ್ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರ್ಲಿಗೆ ಗ್ರಾಮದ ಹೊಗಳಿಕಮ್ಮ ಕೆರೆಯ ದಂಡೆ ಒಡೆದು ಹಲವು ಭೂ ಪ್ರದೇಶ ಜಾಲಾವೃತಗೊಂಡು ಅಪಾರ ಬೆಳೆ ಹಾನಿಯಾಗಿದೆ.</p>.<p class="Subhead"><strong>ಶಿವಮೊಗ್ಗದಲ್ಲಿ ಮಳೆ, ಬಿಸಿಲಿನ ಆಟ</strong>: ಶಿವಮೊಗ್ಗದಲ್ಲಿ ಬೆಳಿಗ್ಗೆಯಿಂದ ಮಳೆಯಾಗುತ್ತಿತ್ತು. ಮಧ್ಯೆ ಮಧ್ಯೆ ಬಿಡುವು ನೀಡಿದ ಮಳೆ ಬಿಸಿಲಿನ ದರ್ಶನವಾಯಿತು. ಶಿವಮೊಗ್ಗದಲ್ಲಿ ಮಳೆ, ಬಿಸಿಲಿನ ಆಟವಿತ್ತು.</p>.<p class="Subhead"><strong>ಕೃಷಿ ಚಟುವಟಿಕೆ ಬಿರುಸು: </strong>ಜಿಲ್ಲೆಯಾದ್ಯಂತ ಉತ್ತಮ ಮಳೆ ಯಾಗುತ್ತಿದೆ. ಮಲೆನಾಡು ಭಾಗಗಳು ಅನಿಸಿಕೊಂಡಿರುವ ಸಾಗರ, ತೀರ್ಥಹಳ್ಳಿ, ಹೊಸನಗರದಲ್ಲಿ ಜೋರು ಮಳೆಯಾಗುತ್ತಿದೆ. ಅರೆ ಮಲೆನಾಡು ಭಾಗಗಳಲ್ಲೂ ಉತ್ತಮ ಮಳೆಯಾಗಿದ್ದು, ಮೆಕ್ಕೆ ಜೋಳ ಬಿತ್ತನೆಗೆ ವೇಗ ಸಿಕ್ಕಂತಾಗಿದೆ. ಅಡಿಕೆ ತೋಟಗಳಲ್ಲಿ ಬಿಸಿಗಾಲುವೆಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ.</p>.<p><strong>ತೀರ್ಥಹಳ್ಳಿಯಲ್ಲಿ ತುಂಬಿದ ತುಂಗೆ</strong></p>.<p><strong>ತೀರ್ಥಹಳ್ಳಿ:</strong> ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಳೆ ಬಾರಿ ಅವಾಂತರ ಸೃಷ್ಟಿ ಮಾಡಿದೆ. ಇಡೀ ದಿನ ಮಳೆ ಸುರಿಯುತ್ತಿದ್ದು, ಆಗುಂಬೆ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗಿದೆ.</p>.<p>ಮೇಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗರವಳ್ಳಿಯಲ್ಲಿ ಬಾರಿ ಮಳೆಗೆ ಮನೆ ಕುಸಿದಿದೆ. ಪುರಾತನ ಬಾವಿಯೊಂದು ಜರಿದು ಬಿದ್ದ ಕುರಿತು ವರದಿಯಾಗಿದೆ.</p>.<p>ಆಗುಂಬೆಯಲ್ಲಿ 20 ಸೆಂ.ಮೀ, ತೀರ್ಥಹಳ್ಳಿಯಲ್ಲಿ 67.4 ಮಿ.ಮೀ ಮಳೆಯಾಗಿದೆ. ಮಳೆಯಿಂದಾಗಿ ಹಲವೆಡೆ ಗದ್ದೆಗಳು ಜಲಾವೃತವಾಗಿವೆ. ತೀರ್ಥಹಳ್ಳಿ ಮತ್ತು ಶೃಂಗೇರಿ ಭಾಗದಲ್ಲಿ ಬಾರಿ ಮಳೆಯಾಗುತ್ತಿರುವುದರಿಂದ ತುಂಗಾ ನದಿಯಲ್ಲಿ ನೀರಿನ ಮಟ್ಟ ಏರುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>