ಕೃಷಿ ಚಟುವಟಿಕೆ ಬಿರುಸು: ಜಿಲ್ಲೆಯಾದ್ಯಂತ ಉತ್ತಮ ಮಳೆ ಯಾಗುತ್ತಿದೆ. ಮಲೆನಾಡು ಭಾಗಗಳು ಅನಿಸಿಕೊಂಡಿರುವ ಸಾಗರ, ತೀರ್ಥಹಳ್ಳಿ, ಹೊಸನಗರದಲ್ಲಿ ಜೋರು ಮಳೆಯಾಗುತ್ತಿದೆ. ಅರೆ ಮಲೆನಾಡು ಭಾಗಗಳಲ್ಲೂ ಉತ್ತಮ ಮಳೆಯಾಗಿದ್ದು, ಮೆಕ್ಕೆ ಜೋಳ ಬಿತ್ತನೆಗೆ ವೇಗ ಸಿಕ್ಕಂತಾಗಿದೆ. ಅಡಿಕೆ ತೋಟಗಳಲ್ಲಿ ಬಿಸಿಗಾಲುವೆಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ.