<p>ಹೊಸನಗರ: ತಾಲ್ಲೂಕಿನ ನಗರ ಹೋಬಳಿಯಲ್ಲಿ ಸೋಮವಾರ ವ್ಯಾಪಕ ಮಳೆಯಾಗುತ್ತಿದ್ದು, ರಸ್ತೆ ಮೇಲೆ ಬೃಹತ್ ಗಾತ್ರದ ಬಂಡೆ ಉರುಳಿದೆ. ಪರಿಣಾಮ ಹಿಲ್ಕುಂಜಿ ಸುಳುಗೋಡು ಸಂಪರ್ಕ ಕಡಿತಗೊಂಡಿದೆ.</p>.<p>ಆಗರಬೈಲು, ಸುಳುಗೋಡು, ಹೆಂಡೆಗದ್ದೆ ಗ್ರಾಮದ ಸಂಪರ್ಕ ರಸ್ತೆ ಇದಾಗಿದ್ದು, ಈಗ ಸಂಚಾರಕ್ಕೆ ಕುತ್ತು ಬಂದಿದೆ.</p>.<p>ಬಂಡೆಕಲ್ಲು ರಸ್ತೆಯನ್ನು ಸಂಪೂರ್ಣ ಆವರಿಸಿದ್ದು, ಬೈಕ್ ಸಂಚಾರ ಕೂಡ ಸಾಧ್ಯವಿಲ್ಲದಂತಾಗಿದೆ. ಈ ಸಂಪರ್ಕಕ್ಕೆ 20ಕ್ಕೂ ಹೆಚ್ಚು ಕುಟುಂಬಗಳು ಅವಲಂಬಿತವಾಗಿವೆ.</p>.<p>ಬಂಡೆಯನ್ನು ಕೂಡಲೇ ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸುವಂತೆ ನಗರ ಸೊಸೈಟಿ ಉಪಾಧ್ಯಕ್ಷ ಹಿಲ್ಕುಂಜಿ ಕುಮಾರ್ ಒತ್ತಾಯಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಹೊಸನಗರ: ತಾಲ್ಲೂಕಿನ ನಗರ ಹೋಬಳಿಯಲ್ಲಿ ಸೋಮವಾರ ವ್ಯಾಪಕ ಮಳೆಯಾಗುತ್ತಿದ್ದು, ರಸ್ತೆ ಮೇಲೆ ಬೃಹತ್ ಗಾತ್ರದ ಬಂಡೆ ಉರುಳಿದೆ. ಪರಿಣಾಮ ಹಿಲ್ಕುಂಜಿ ಸುಳುಗೋಡು ಸಂಪರ್ಕ ಕಡಿತಗೊಂಡಿದೆ.</p>.<p>ಆಗರಬೈಲು, ಸುಳುಗೋಡು, ಹೆಂಡೆಗದ್ದೆ ಗ್ರಾಮದ ಸಂಪರ್ಕ ರಸ್ತೆ ಇದಾಗಿದ್ದು, ಈಗ ಸಂಚಾರಕ್ಕೆ ಕುತ್ತು ಬಂದಿದೆ.</p>.<p>ಬಂಡೆಕಲ್ಲು ರಸ್ತೆಯನ್ನು ಸಂಪೂರ್ಣ ಆವರಿಸಿದ್ದು, ಬೈಕ್ ಸಂಚಾರ ಕೂಡ ಸಾಧ್ಯವಿಲ್ಲದಂತಾಗಿದೆ. ಈ ಸಂಪರ್ಕಕ್ಕೆ 20ಕ್ಕೂ ಹೆಚ್ಚು ಕುಟುಂಬಗಳು ಅವಲಂಬಿತವಾಗಿವೆ.</p>.<p>ಬಂಡೆಯನ್ನು ಕೂಡಲೇ ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸುವಂತೆ ನಗರ ಸೊಸೈಟಿ ಉಪಾಧ್ಯಕ್ಷ ಹಿಲ್ಕುಂಜಿ ಕುಮಾರ್ ಒತ್ತಾಯಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>