ಸಾಗರ: ಮತದಾನದ ಹಕ್ಕನ್ನು ಚಲಾಯಿಸಲು ಇದ್ದ ವಯೋಮಿತಿಯನ್ನು 21 ವರ್ಷಗಳಿಂದ 18 ವರ್ಷಕ್ಕೆ ಇಳಿಸುವ ಮೂಲಕ ಯುವ ಸಮುದಾಯಕ್ಕೆ ರಾಜಕೀಯ ಶಕ್ತಿಯನ್ನು ನೀಡಿದ್ದು ರಾಜೀವ್ ಗಾಂಧಿಯವರ ಹೆಗ್ಗಳಿಕೆಯಾಗಿದೆ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಹೇಳಿದರು.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಂಚಾಯತ್ ರಾಜ್ ಯೋಜನೆಯನ್ನು ಸದೃಢಗೊಳಿಸಿದ್ದು ಸಹ ರಾಜೀವ್ ಗಾಂಧಿಯವರ ರಾಜಕೀಯ ಇಚ್ಛಾಶಕ್ತಿಯ ದ್ಯೋತಕವಾಗಿದೆ ಎಂದರು.