<p><strong>ಶಿವಮೊಗ್ಗ:</strong> ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಏರಿಸಿದ್ದಕ್ಕೆ ರಾಜ್ಯ ಬಿಜೆಪಿ ಪ್ರತಿಭಟನೆಗೆ ಇಳಿದಿರುವುದು ಹಾಸ್ಯಾಸ್ಪದವಾಗಿ ಕಾಣುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾ ಸಮಿತಿ ವಕ್ತಾರ ಎಂ. ರಮೇಶ್ ಶೆಟ್ಟಿ ತಿಳಿಸಿದರು. </p>.<p>ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ ₹ 60 ಮತ್ತು ₹ 55 ಇತ್ತು. ಆದರೆ, ಬಿಜೆಪಿ ಸರ್ಕಾರ ಪ್ರತಿ ದಿನ 25 ರಿಂದ 30 ಪೈಸೆಯಂತೆ ಏರಿಕೆ ಮಾಡುವ ಮೂಲಕ ಜನರ ಕಣ್ಣಿಗೆ ಮಣ್ಣು ಎರಚಿ ಅಂತಿಮವಾಗಿ ಪೆಟ್ರೋಲ್ ಲೀಟರ್ಗೆ ₹ 110 ಹಾಗೂ ಡೀಸೆಲ್ ಲೀಟರ್ಗೆ ₹ 98ರವರೆಗೂ ಏರಿಸಿದಾಗ ಕಣ್ಣು ಮುಚ್ಚಿ ಕುಳಿತ್ತಿದ್ದ ರಾಜ್ಯ ಬಿಜೆಪಿ ನಾಯಕರು ಈಗ ಕೇವಲ ₹ 3 ಏರಿಸಿದ್ದಕ್ಕೆ ಬೊಬ್ಬೆ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.</p>.<p>ಬಿಜೆಪಿಯವರಿಗೆ ಜನರ ಮೇಲೆ ಕಾಳಜಿ ಇದ್ದರೆ ಪ್ರತಿಭಟನೆ ಕೈಬಿಟ್ಟು, ಕೇಂದ್ರದ ಮೇಲೆ ಒತ್ತಡ ತಂದು ತೈಲ ಬೆಲೆ ಕಡಿತಕ್ಕೆ ಒತ್ತಾಯಿಸಿಲಿ ಎಂದು ಹೇಳಿದರು.</p>.<p>ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣ, ತಿಂಗಳಿಗೆ ₹ 2,000 ಹಾಗೂ ನಿರುದ್ಯೋಗಿ ಯುವಕರಿಗೆ ತಿಂಗಳಿಗೆ ₹ 3,000 ನೀಡುತ್ತಿದ್ದು, ಸಂಪನ್ಮೂಲ ಸಂಗ್ರಹಣೆಗೆ ₹ 3 ಏರಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಅಕ್ಷಮ್ಯ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಏರಿಸಿದ್ದಕ್ಕೆ ರಾಜ್ಯ ಬಿಜೆಪಿ ಪ್ರತಿಭಟನೆಗೆ ಇಳಿದಿರುವುದು ಹಾಸ್ಯಾಸ್ಪದವಾಗಿ ಕಾಣುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾ ಸಮಿತಿ ವಕ್ತಾರ ಎಂ. ರಮೇಶ್ ಶೆಟ್ಟಿ ತಿಳಿಸಿದರು. </p>.<p>ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ ₹ 60 ಮತ್ತು ₹ 55 ಇತ್ತು. ಆದರೆ, ಬಿಜೆಪಿ ಸರ್ಕಾರ ಪ್ರತಿ ದಿನ 25 ರಿಂದ 30 ಪೈಸೆಯಂತೆ ಏರಿಕೆ ಮಾಡುವ ಮೂಲಕ ಜನರ ಕಣ್ಣಿಗೆ ಮಣ್ಣು ಎರಚಿ ಅಂತಿಮವಾಗಿ ಪೆಟ್ರೋಲ್ ಲೀಟರ್ಗೆ ₹ 110 ಹಾಗೂ ಡೀಸೆಲ್ ಲೀಟರ್ಗೆ ₹ 98ರವರೆಗೂ ಏರಿಸಿದಾಗ ಕಣ್ಣು ಮುಚ್ಚಿ ಕುಳಿತ್ತಿದ್ದ ರಾಜ್ಯ ಬಿಜೆಪಿ ನಾಯಕರು ಈಗ ಕೇವಲ ₹ 3 ಏರಿಸಿದ್ದಕ್ಕೆ ಬೊಬ್ಬೆ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.</p>.<p>ಬಿಜೆಪಿಯವರಿಗೆ ಜನರ ಮೇಲೆ ಕಾಳಜಿ ಇದ್ದರೆ ಪ್ರತಿಭಟನೆ ಕೈಬಿಟ್ಟು, ಕೇಂದ್ರದ ಮೇಲೆ ಒತ್ತಡ ತಂದು ತೈಲ ಬೆಲೆ ಕಡಿತಕ್ಕೆ ಒತ್ತಾಯಿಸಿಲಿ ಎಂದು ಹೇಳಿದರು.</p>.<p>ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣ, ತಿಂಗಳಿಗೆ ₹ 2,000 ಹಾಗೂ ನಿರುದ್ಯೋಗಿ ಯುವಕರಿಗೆ ತಿಂಗಳಿಗೆ ₹ 3,000 ನೀಡುತ್ತಿದ್ದು, ಸಂಪನ್ಮೂಲ ಸಂಗ್ರಹಣೆಗೆ ₹ 3 ಏರಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಅಕ್ಷಮ್ಯ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>