ಸಿಡಿಮದ್ದು ಪ್ರದರ್ಶನವನ್ನು ನೋಡಲು ಆಗಮಿಸಿದ ಜನರಿಗೆ ತುಂಗಾನದಿ ದಡದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿತ್ತು. ವಾಹನ ದಟ್ಟಣೆ ನಿಯಂತ್ರಿಸಲು ಪಟ್ಟಣದ ವಿವಿಧ ಭಾಗಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಅಹಿತಕರ ಘಟನೆ ಸಂಭವಿಸದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಪ್ಪೋತ್ಸವ ಸಮಿತಿ, ಪೊಲೀಸ್ ಇಲಾಖೆ ಕೈಗೊಂಡಿತ್ತು.