<p><strong>ತೀರ್ಥಹಳ್ಳಿ</strong>: ರಾಜ್ಯ ಧಾರ್ಮಿಕ ಪರಿಷತ್ ಆದೇಶದಂತೆ ಇಲ್ಲಿನ ಶ್ರೀ ರಾಮೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಡಿ.ಎಸ್. ವಿಶ್ವನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಪುನರ್ ರಚನೆಗೊಂಡಿದೆ.</p>.<p>2021ರ ಸೆಪ್ಟೆಂಬರ್ 17ರಂದು ಧಾರ್ಮಿಕ ಪರಿಷತ್ ಸದಸ್ಯ ಕಾರ್ಯದರ್ಶಿ ಆದೇಶದಂತೆ ಸಮಿತಿ ರಚನೆಗೆ ಅವಕಾಶ ದೊರಕಿದೆ. ಅದರಂತೆ ಶನಿವಾರ ದೇವಸ್ಥಾನದಲ್ಲಿ ವಿಶ್ವನಾಥ ಶೆಟ್ಟಿ ಸಮಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.</p>.<p>ಜಿಲ್ಲಾ ಧಾರ್ಮಿಕ ಪರಿಷತ್ ಮುಖ್ಯಸ್ಥರಾದ ಜಿಲ್ಲಾಧಿಕಾರಿ 2019 ಫೆಬ್ರವರಿ 18ರಂದು ವಿಶ್ವನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ 9 ಸದಸ್ಯರ ಸಮಿತಿ ರಚಿಸಿ ಆದೇಶ ಹೊರಡಿಸಿದ್ದರು.</p>.<p>ಆದರೆ, ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ಬಳಿಕ ಉಳಿದ ನಾಟ ವಿಲೇವಾರಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ತಹಶೀಲ್ದಾರ್ ಅವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ 2019ರ ಅಕ್ಟೋಬರ್ 16ರಂದು ಆದೇಶ ಹೊರಡಿಸಿದ್ದ ಜಿಲ್ಲಾಧಿಕಾರಿ ಸಮಿತಿ ಅಮಾನತು ಮಾಡಿದ್ದರು.</p>.<p>ಜಿಲ್ಲಾಧಿಕಾರಿನಿಯಮ ಬಾಹಿರವಾಗಿ ದೇವಸ್ಥಾನದ ಸಮಿತಿಯನ್ನು ಅಮಾನತು ಮಾಡಿದ್ದಾರೆ.ಜಿಲ್ಲಾಧಿಕಾರಿ ಆದೇಶ ರದ್ದು ಪಡಿಸಬೇಕು ಎಂದು ಕೋರಿ ವಿಶ್ವನಾಥ ಶೆಟ್ಟಿ ಹಾಗೂ ಸಮಿತಿಯ 7 ಸದಸ್ಯರು ರಾಜ್ಯ ಧಾರ್ಮಿಕ ಪರಿಷತ್ಗೆ ಆಕ್ಷೇಪಣೆ ಸಲ್ಲಿಸಿದ್ದರು.</p>.<p>ಈ ಪ್ರಕರಣ ತೀವ್ರ ವಿವಾದ ಸೃಷ್ಟಿಸಿತ್ತು. ರಾಜಕೀಯ ಮೇಲಾಟಕ್ಕೆ ಕಾರಣವಾಗಿದ್ದ ಸಮಿತಿ ಅಮಾನತು ಹಾಗೂ ನಾಟಾ ವಿಲೇವಾರಿ ಅಕ್ರಮ ಕುರಿತು ಪರ, ವಿರೋಧ ಪ್ರತಿಭಟನೆಗಳೂ ನಡೆದಿದ್ದವು.</p>.<p>ಸಮಿತಿ ಅಮಾನತು ಆದೇಶದ ವಿರುದ್ಧ ಸಲ್ಲಿಸಿದ್ದ ಆಕ್ಷೇಪಣೆ ಕುರಿತು ದೀರ್ಘಾವಧಿ ವಿಚಾರಣೆ ನಡೆಸಿದಧಾರ್ಮಿಕ ಪರಿಷತ್, ಸಮಿತಿ ರಚನೆಗೆ ಅವಕಾಶ ನೀಡಿತ್ತು. ವಿಶ್ವನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಇದೀಗ ವ್ಯವಸ್ಥಾಪನ ಸಮಿತಿ ಪುನರ್ ಸ್ಥಾಪನೆಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ</strong>: ರಾಜ್ಯ ಧಾರ್ಮಿಕ ಪರಿಷತ್ ಆದೇಶದಂತೆ ಇಲ್ಲಿನ ಶ್ರೀ ರಾಮೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಡಿ.ಎಸ್. ವಿಶ್ವನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಪುನರ್ ರಚನೆಗೊಂಡಿದೆ.</p>.<p>2021ರ ಸೆಪ್ಟೆಂಬರ್ 17ರಂದು ಧಾರ್ಮಿಕ ಪರಿಷತ್ ಸದಸ್ಯ ಕಾರ್ಯದರ್ಶಿ ಆದೇಶದಂತೆ ಸಮಿತಿ ರಚನೆಗೆ ಅವಕಾಶ ದೊರಕಿದೆ. ಅದರಂತೆ ಶನಿವಾರ ದೇವಸ್ಥಾನದಲ್ಲಿ ವಿಶ್ವನಾಥ ಶೆಟ್ಟಿ ಸಮಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.</p>.<p>ಜಿಲ್ಲಾ ಧಾರ್ಮಿಕ ಪರಿಷತ್ ಮುಖ್ಯಸ್ಥರಾದ ಜಿಲ್ಲಾಧಿಕಾರಿ 2019 ಫೆಬ್ರವರಿ 18ರಂದು ವಿಶ್ವನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ 9 ಸದಸ್ಯರ ಸಮಿತಿ ರಚಿಸಿ ಆದೇಶ ಹೊರಡಿಸಿದ್ದರು.</p>.<p>ಆದರೆ, ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ಬಳಿಕ ಉಳಿದ ನಾಟ ವಿಲೇವಾರಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ತಹಶೀಲ್ದಾರ್ ಅವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ 2019ರ ಅಕ್ಟೋಬರ್ 16ರಂದು ಆದೇಶ ಹೊರಡಿಸಿದ್ದ ಜಿಲ್ಲಾಧಿಕಾರಿ ಸಮಿತಿ ಅಮಾನತು ಮಾಡಿದ್ದರು.</p>.<p>ಜಿಲ್ಲಾಧಿಕಾರಿನಿಯಮ ಬಾಹಿರವಾಗಿ ದೇವಸ್ಥಾನದ ಸಮಿತಿಯನ್ನು ಅಮಾನತು ಮಾಡಿದ್ದಾರೆ.ಜಿಲ್ಲಾಧಿಕಾರಿ ಆದೇಶ ರದ್ದು ಪಡಿಸಬೇಕು ಎಂದು ಕೋರಿ ವಿಶ್ವನಾಥ ಶೆಟ್ಟಿ ಹಾಗೂ ಸಮಿತಿಯ 7 ಸದಸ್ಯರು ರಾಜ್ಯ ಧಾರ್ಮಿಕ ಪರಿಷತ್ಗೆ ಆಕ್ಷೇಪಣೆ ಸಲ್ಲಿಸಿದ್ದರು.</p>.<p>ಈ ಪ್ರಕರಣ ತೀವ್ರ ವಿವಾದ ಸೃಷ್ಟಿಸಿತ್ತು. ರಾಜಕೀಯ ಮೇಲಾಟಕ್ಕೆ ಕಾರಣವಾಗಿದ್ದ ಸಮಿತಿ ಅಮಾನತು ಹಾಗೂ ನಾಟಾ ವಿಲೇವಾರಿ ಅಕ್ರಮ ಕುರಿತು ಪರ, ವಿರೋಧ ಪ್ರತಿಭಟನೆಗಳೂ ನಡೆದಿದ್ದವು.</p>.<p>ಸಮಿತಿ ಅಮಾನತು ಆದೇಶದ ವಿರುದ್ಧ ಸಲ್ಲಿಸಿದ್ದ ಆಕ್ಷೇಪಣೆ ಕುರಿತು ದೀರ್ಘಾವಧಿ ವಿಚಾರಣೆ ನಡೆಸಿದಧಾರ್ಮಿಕ ಪರಿಷತ್, ಸಮಿತಿ ರಚನೆಗೆ ಅವಕಾಶ ನೀಡಿತ್ತು. ವಿಶ್ವನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಇದೀಗ ವ್ಯವಸ್ಥಾಪನ ಸಮಿತಿ ಪುನರ್ ಸ್ಥಾಪನೆಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>