ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಣೆಬೆನ್ನೂರು ರೈಲು ಮಾರ್ಗ ಶೀಘ್ರ: ರಾಘವೇಂದ್ರ

Last Updated 14 ಅಕ್ಟೋಬರ್ 2021, 5:53 IST
ಅಕ್ಷರ ಗಾತ್ರ

ಶಿವಮೊಗ್ಗ: ಶಿಕಾರಿಪುರ–ರಾಣೆಬೆನ್ನೂರು ನೂತನ ರೈಲು ಮಾರ್ಗದ ಮೊದಲಹಂತದ ಕಾಮಗಾರಿಗಳು ಈ ವರ್ಷದ ಡಿಸೆಂಬರ್‌ ಅಂತ್ಯಕ್ಕೆ ಆರಂಭವಾಗಲಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗದಲ್ಲಿ ಬುಧವಾರ ರೈಲ್ವೆ ಅಧಿಕಾರಿಗಳ ತಂಡದ ಜತೆ ಚರ್ಚಿಸಿದ ನಂತರ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.

‘ಶಿವಮೊಗ್ಗ–ರಾಣೆಬೆನ್ನೂರು ಮಧ್ಯೆ ರೈಲು ಸಂಪರ್ಕ ಕಲ್ಪಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ನಾನು ಅವಿರತ ಪ್ರಯತ್ನ ನಡೆಸಿದ್ದೆವು. ಅಧಿಕಾರಿಗಳ ತಂಡ ರಾಣೆಬೆನ್ನೂರಿನಿಂದ ಶಿಕಾರಿಪುರ, ಶಿವಮೊಗ್ಗವರೆಗೆ ಸ್ಥಳ ಪರಿಶೀಲನೆ ನಡೆಸಿದೆ. ಅಧಿಕಾರಿಗಳು ಭೂ ಸ್ವಾಧೀನ, ಸ್ಥಳೀಯ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ’ ಎಂದು ವಿವರ ನೀಡಿದರು.

ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದ ತಾಂತ್ರಿಕ ವಿಷಯಗಳ ಕುರಿತುರೈಟ್ಸ್ ಕಂಪನಿ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದುಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT