<p><strong>ಶಿವಮೊಗ್ಗ</strong>: ಇಲ್ಲಿನ ರಂಗಾಯಣದಲ್ಲಿ ಮೂರನೇ ಹಂತದ ಕಾಲೇಜು ರಂಗೋತ್ಸವ ಕಾರ್ಯಕ್ರಮ ಮಾರ್ಚ್ 15ರಿಂದ 17ರವರೆಗೆ ನಡೆಯಲಿದೆ. ಸುವರ್ಣ ಸಂಸ್ಕೃತಿ ಭವನದಲ್ಲಿ ಪ್ರತಿ ದಿನ ಸಂಜೆ 6.30ಕ್ಕೆ ನಾಟಕ ಪ್ರದರ್ಶನ ನಡೆಯಲಿದೆ.</p>.<p>ಮಾ.15ರಂದು ದಾವಣಗೆರೆ ಜಿಲ್ಲೆ ಹೊನ್ನಾಳಿಯ ಹಿರೇಕಲ್ಮಠದ ಎಸ್ಜೆವಿಪಿ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಎಚ್.ಎಸ್.ವೆಂಕಟೇಶಮೂರ್ತಿ ರಚನೆಯ ಧರಣಿ ಮಂಡಲ ನಾಟಕ ಆಡಲಿದ್ದು, ಬಾಗಲಕೋಟೆಯ ಮಹಾಂತೇಶ ಅದೀಮ ನಿರ್ದೇಶಿಸಿದ್ದಾರೆ.</p>.<p>ಮಾ.16ರಂದು ಕೋಲಾರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು <strong>ಎಚ್.ಎಸ್.ವೆಂಕಟೇಶಮೂರ್ತಿ ರಚನೆಯ ಸುಣ್ಣದ ಸುತ್ತ ನಾಟಕ ಆಡಲಿದ್ದಾರೆ. ಎ.ಎನ್.ವಿದ್ಯಾರಾಣಿ ನಿರ್ದೇಶನ ಮಾಡಿದ್ದಾರೆ.</strong></p>.<p>ಮಾ.17ರಂದು ಬೆಂಗಳೂರಿನ ದಕ್ಷಾ ಅಕಾಡೆಮಿ ವಿದ್ಯಾರ್ಥಿಗಳು ಮಹಾಂತೇಶ ರಾಮದುರ್ಗ ರಚನೆಯ, ಉಡುಪಿಯ ಶಿಲ್ಪಾ ಶೆಟ್ಟಿ ನಿರ್ದೇಶಿಸಿರುವ ಸೋರುತಿಹುದು ಸಂಬಂಧ ನಾಟಕ ಪ್ರದರ್ಶನ ಮಾಡಲಿದ್ದಾರೆ.</p>.<p>ಮೂರು ದಿನಗಳು ಬೆಳಿಗ್ಗೆ 9.30 ರಿಂದ ಸಂಜೆ 5 ರವರೆಗೆ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ‘ಶಿಕ್ಷಣದಲ್ಲಿ ರಂಗಕಲೆ’ ಕಮ್ಮಟ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ಅಣ್ಣಪ್ಪ ಒಂಟಿಮಾಳಗಿ ಹಾಗೂ ಕೆ. ಸತೀಶ್ ಕುಮಾರ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಇಲ್ಲಿನ ರಂಗಾಯಣದಲ್ಲಿ ಮೂರನೇ ಹಂತದ ಕಾಲೇಜು ರಂಗೋತ್ಸವ ಕಾರ್ಯಕ್ರಮ ಮಾರ್ಚ್ 15ರಿಂದ 17ರವರೆಗೆ ನಡೆಯಲಿದೆ. ಸುವರ್ಣ ಸಂಸ್ಕೃತಿ ಭವನದಲ್ಲಿ ಪ್ರತಿ ದಿನ ಸಂಜೆ 6.30ಕ್ಕೆ ನಾಟಕ ಪ್ರದರ್ಶನ ನಡೆಯಲಿದೆ.</p>.<p>ಮಾ.15ರಂದು ದಾವಣಗೆರೆ ಜಿಲ್ಲೆ ಹೊನ್ನಾಳಿಯ ಹಿರೇಕಲ್ಮಠದ ಎಸ್ಜೆವಿಪಿ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಎಚ್.ಎಸ್.ವೆಂಕಟೇಶಮೂರ್ತಿ ರಚನೆಯ ಧರಣಿ ಮಂಡಲ ನಾಟಕ ಆಡಲಿದ್ದು, ಬಾಗಲಕೋಟೆಯ ಮಹಾಂತೇಶ ಅದೀಮ ನಿರ್ದೇಶಿಸಿದ್ದಾರೆ.</p>.<p>ಮಾ.16ರಂದು ಕೋಲಾರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು <strong>ಎಚ್.ಎಸ್.ವೆಂಕಟೇಶಮೂರ್ತಿ ರಚನೆಯ ಸುಣ್ಣದ ಸುತ್ತ ನಾಟಕ ಆಡಲಿದ್ದಾರೆ. ಎ.ಎನ್.ವಿದ್ಯಾರಾಣಿ ನಿರ್ದೇಶನ ಮಾಡಿದ್ದಾರೆ.</strong></p>.<p>ಮಾ.17ರಂದು ಬೆಂಗಳೂರಿನ ದಕ್ಷಾ ಅಕಾಡೆಮಿ ವಿದ್ಯಾರ್ಥಿಗಳು ಮಹಾಂತೇಶ ರಾಮದುರ್ಗ ರಚನೆಯ, ಉಡುಪಿಯ ಶಿಲ್ಪಾ ಶೆಟ್ಟಿ ನಿರ್ದೇಶಿಸಿರುವ ಸೋರುತಿಹುದು ಸಂಬಂಧ ನಾಟಕ ಪ್ರದರ್ಶನ ಮಾಡಲಿದ್ದಾರೆ.</p>.<p>ಮೂರು ದಿನಗಳು ಬೆಳಿಗ್ಗೆ 9.30 ರಿಂದ ಸಂಜೆ 5 ರವರೆಗೆ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ‘ಶಿಕ್ಷಣದಲ್ಲಿ ರಂಗಕಲೆ’ ಕಮ್ಮಟ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ಅಣ್ಣಪ್ಪ ಒಂಟಿಮಾಳಗಿ ಹಾಗೂ ಕೆ. ಸತೀಶ್ ಕುಮಾರ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>