<p><strong>ಶಿವಮೊಗ್ಗ :</strong> ಹಸ್ತಾಂತರಗೊಂಡಿರುವ ವಾಣಿಜ್ಯ ಸಂಕೀರ್ಣಗಳನ್ನು ಸಾರ್ವಜನಿಕರ ಉಪಯೋಗಕ್ಕೆ ಕೊಡದೇ ಮಹಾನಗರ ಪಾಲಿಕೆ ಕೋಟ್ಯಾಂತರ ರೂಪಾಯಿ ನಷ್ಟವುಂಟುಮಾಡಿದೆ ಎಂದು ಆರೋಪಿಸಿ ಶನಿವಾರ ರಾಷ್ಟ್ರಭಕ್ತರ ಬಳಗದಿಂದ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.</p>.<p>ಕೆ.ಈ. ಕಾಂತೇಶ್ ಮಾತನಾಡಿ, ನಗರದಲ್ಲಿ ಆಶ್ರಯ ಯೋಜನೆಯ ಮನೆಗಳನ್ನು ಆದಷ್ಟು ಬೇಗ ವಿತರಿಸಬೇಕು. ಇ-ಸ್ವತ್ತು ನೊಂದಣಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಗಟ್ಟಬೇಕು. ರಸ್ತೆಗಳಲ್ಲಿನ ಗುಂಡಿಗಳ ಮುಚ್ಚಬೇಕು. ನಿರಂತರ ನೀರು ಪೂರೈಕೆ ಯೋಜನೆ ಸಮರ್ಪಕವಾಗಿ ಜಾರಿಗೊಳಿಸಬೇಕು. ಬೀದಿದೀಪ ಮತ್ತು ನಗರದ ಸ್ವಚ್ಛತೆಗೆ ಆದ್ಯತೆ ಕೊಡಬೇಕು ಎಂದು ಆಗ್ರಹಿಸಿದರು.</p>.<p>ಕೊಳಚೆ ಪ್ರದೇ ಶದ ನಿವಾಸಿಗಳಿಗೆ ಮೂಲಸೌಕರ್ಯ ಕಲ್ಪಿಸಬೇಕು. ಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆ ತಲುಪಬೇಕು. ಪೌರಕಾರ್ಮಿಕರ ಭವನ ನಿರ್ಮಿಸಬೇಕು. ರೋಟರಿ ಅನಿಲ ಚಿತಾಗಾರ ದುರಸ್ತಿಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಈ ಸಂದರ್ಭದಲ್ಲಿ ಮಾಜಿ ಕಾರ್ಪೋರೇಟರ್ ಈ. ವಿಶ್ವಾಸ್ ಮಾತನಾಡಿ, ಶಿವಪ್ಪನಾಯಕ ಹೂವಿನ ಮಾರುಕಟ್ಟೆ, ಗಾರ್ಡನ್ ಏರಿಯಾ ವಾಣಿಜ್ಯ ಸಂಕಿರ್ಣ, ಗಾಂಧಿನಗರದ ವಾಣಿಜ್ಯ ಸಂಕಿರ್ಣಗಳಲ್ಲಿ ನಿರ್ಮಾಣವಾದ ಮಳಿಗೆಗಳನ್ನು ಇದುವರೆಗೂ ಮಹಾನಗರಪಾಲಿಕೆ ಬಾಡಿಗೆ ನೀಡಿಲ್ಲ ಎಂದು ಆರೋಪಿಸಿದರು.</p>.<p>ಈ ಸಂದರ್ಭದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಮಾತನಾಡಿ, ರಾಷ್ಟ್ರಭಕ್ತರ ಬಳಗ ಸದಾ ಜನಪರ ಹೋರಾಟಕ್ಕೆ ಮುಂಚೂಣಿಯಲ್ಲಿದೆ. ಪಾಲಿಕೆ ವ್ಯಾಪ್ತಿಯ ಎಲ್ಲಾ ಸಮಸ್ಯೆಗಳು ಬಗೆಹರಿಸುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.</p>.<p>ಪ್ರತಿಭಟನೆಯ ನೇತೃತ್ವ ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಲಕ್ಷ್ಮೀ ಶಂಕರ್ನಾಯ್ಕ, ಆರತಿ ಆ.ಮ ಪ್ರಕಾಶ್, ಬಾಲು, ಶ್ರೀಕಾಂತ್, ಮೋಹನ್ ಜಾಧವ್, ಶಕುಂತಲಾ, ಶಶಿಕಲಾ, ಚಿದಾನಂದ, ಕುಬೇರಪ್ಪ, ನಾಗರತ್ನಮ್ಮ, ರಾಜೇಶ್ವರಿ, ಜಯಲಕ್ಷ್ಮೀ, ಎಸ್ಟಿಡಿ ರಾಜು, ಆಶಾ ಚನ್ನಬಸಪ್ಪ, ಸೀತಾಲಕ್ಷ್ಮೀ, ಅನಿತಾ, ಇಂದಿರಾನಗರ ರಾಜು ವಹಿಸಿದ್ದರು.</p>.<div><blockquote>ಕೆಲವೊಂದು ತಾಂತ್ರಿಕ ತೊಂದರೆಯಿಂದ ಇ-ಸ್ವತ್ತು ನೀಡಲು ತಡವಾಗಿದೆ. ಆದರೂ ನಾನು ಬಂದ ಬಳಿಕ ಆರು ತಿಂಗಳಲ್ಲಿ 30000 ಇ-ಸ್ವತ್ತು ವಿತರಿಸಲಾಗಿದೆ </blockquote><span class="attribution">ಮಾಯಣ್ಣಗೌಡ ಮಹಾನಗರ ಪಾಲಿಕೆ ಆಯುಕ್ತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ :</strong> ಹಸ್ತಾಂತರಗೊಂಡಿರುವ ವಾಣಿಜ್ಯ ಸಂಕೀರ್ಣಗಳನ್ನು ಸಾರ್ವಜನಿಕರ ಉಪಯೋಗಕ್ಕೆ ಕೊಡದೇ ಮಹಾನಗರ ಪಾಲಿಕೆ ಕೋಟ್ಯಾಂತರ ರೂಪಾಯಿ ನಷ್ಟವುಂಟುಮಾಡಿದೆ ಎಂದು ಆರೋಪಿಸಿ ಶನಿವಾರ ರಾಷ್ಟ್ರಭಕ್ತರ ಬಳಗದಿಂದ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.</p>.<p>ಕೆ.ಈ. ಕಾಂತೇಶ್ ಮಾತನಾಡಿ, ನಗರದಲ್ಲಿ ಆಶ್ರಯ ಯೋಜನೆಯ ಮನೆಗಳನ್ನು ಆದಷ್ಟು ಬೇಗ ವಿತರಿಸಬೇಕು. ಇ-ಸ್ವತ್ತು ನೊಂದಣಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಗಟ್ಟಬೇಕು. ರಸ್ತೆಗಳಲ್ಲಿನ ಗುಂಡಿಗಳ ಮುಚ್ಚಬೇಕು. ನಿರಂತರ ನೀರು ಪೂರೈಕೆ ಯೋಜನೆ ಸಮರ್ಪಕವಾಗಿ ಜಾರಿಗೊಳಿಸಬೇಕು. ಬೀದಿದೀಪ ಮತ್ತು ನಗರದ ಸ್ವಚ್ಛತೆಗೆ ಆದ್ಯತೆ ಕೊಡಬೇಕು ಎಂದು ಆಗ್ರಹಿಸಿದರು.</p>.<p>ಕೊಳಚೆ ಪ್ರದೇ ಶದ ನಿವಾಸಿಗಳಿಗೆ ಮೂಲಸೌಕರ್ಯ ಕಲ್ಪಿಸಬೇಕು. ಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆ ತಲುಪಬೇಕು. ಪೌರಕಾರ್ಮಿಕರ ಭವನ ನಿರ್ಮಿಸಬೇಕು. ರೋಟರಿ ಅನಿಲ ಚಿತಾಗಾರ ದುರಸ್ತಿಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಈ ಸಂದರ್ಭದಲ್ಲಿ ಮಾಜಿ ಕಾರ್ಪೋರೇಟರ್ ಈ. ವಿಶ್ವಾಸ್ ಮಾತನಾಡಿ, ಶಿವಪ್ಪನಾಯಕ ಹೂವಿನ ಮಾರುಕಟ್ಟೆ, ಗಾರ್ಡನ್ ಏರಿಯಾ ವಾಣಿಜ್ಯ ಸಂಕಿರ್ಣ, ಗಾಂಧಿನಗರದ ವಾಣಿಜ್ಯ ಸಂಕಿರ್ಣಗಳಲ್ಲಿ ನಿರ್ಮಾಣವಾದ ಮಳಿಗೆಗಳನ್ನು ಇದುವರೆಗೂ ಮಹಾನಗರಪಾಲಿಕೆ ಬಾಡಿಗೆ ನೀಡಿಲ್ಲ ಎಂದು ಆರೋಪಿಸಿದರು.</p>.<p>ಈ ಸಂದರ್ಭದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಮಾತನಾಡಿ, ರಾಷ್ಟ್ರಭಕ್ತರ ಬಳಗ ಸದಾ ಜನಪರ ಹೋರಾಟಕ್ಕೆ ಮುಂಚೂಣಿಯಲ್ಲಿದೆ. ಪಾಲಿಕೆ ವ್ಯಾಪ್ತಿಯ ಎಲ್ಲಾ ಸಮಸ್ಯೆಗಳು ಬಗೆಹರಿಸುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.</p>.<p>ಪ್ರತಿಭಟನೆಯ ನೇತೃತ್ವ ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಲಕ್ಷ್ಮೀ ಶಂಕರ್ನಾಯ್ಕ, ಆರತಿ ಆ.ಮ ಪ್ರಕಾಶ್, ಬಾಲು, ಶ್ರೀಕಾಂತ್, ಮೋಹನ್ ಜಾಧವ್, ಶಕುಂತಲಾ, ಶಶಿಕಲಾ, ಚಿದಾನಂದ, ಕುಬೇರಪ್ಪ, ನಾಗರತ್ನಮ್ಮ, ರಾಜೇಶ್ವರಿ, ಜಯಲಕ್ಷ್ಮೀ, ಎಸ್ಟಿಡಿ ರಾಜು, ಆಶಾ ಚನ್ನಬಸಪ್ಪ, ಸೀತಾಲಕ್ಷ್ಮೀ, ಅನಿತಾ, ಇಂದಿರಾನಗರ ರಾಜು ವಹಿಸಿದ್ದರು.</p>.<div><blockquote>ಕೆಲವೊಂದು ತಾಂತ್ರಿಕ ತೊಂದರೆಯಿಂದ ಇ-ಸ್ವತ್ತು ನೀಡಲು ತಡವಾಗಿದೆ. ಆದರೂ ನಾನು ಬಂದ ಬಳಿಕ ಆರು ತಿಂಗಳಲ್ಲಿ 30000 ಇ-ಸ್ವತ್ತು ವಿತರಿಸಲಾಗಿದೆ </blockquote><span class="attribution">ಮಾಯಣ್ಣಗೌಡ ಮಹಾನಗರ ಪಾಲಿಕೆ ಆಯುಕ್ತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>