‘ಈ ಹಿಂದೆ ಹರತಾಳು ಹಾಲಪ್ಪನವರು ಸಾಕಷ್ಟು ಅಭಿವೃದ್ಧಿ ಪರ ಕೆಲಸಗಳನ್ನು ಮಾಡಿದ್ದರೂ ಕಾಗೋಡು ತಿಮ್ಮಪ್ಪ ಹೋರಾಟ ಮಾಡುತ್ತಿದ್ದರು. ಆದರೆ, ಇಂದು ಕ್ಷೇತ್ರದಲ್ಲಿ ರೈತರಿಗೆ ತೊಂದರೆ, ಭ್ರಷ್ಟಾಚಾರಗಳು ನಡೆಯುತ್ತಿದ್ದರೂ ಚಕಾರವೆತ್ತುತ್ತಿಲ್ಲ. ಮುಂದಿನ ದಿನಗಳಲ್ಲಿ ಯಾವ ಪಕ್ಷದವರು ತಪ್ಪು ಮಾಡಿದರೂ ಖಂಡಿಸುವ ಕೆಲಸ ಮಾಡಬೇಕು. ಸಾರ್ವಜನಿಕರಿಗೆ ತೊಂದರೆ ಆದಾಗ ಗಮನ ಹರಿಸುವ ಕೆಲಸವನ್ನು ನೀವು ಮಾಡಬೇಕು. ನಿಮ್ಮ ಕಾಲದಲ್ಲಿ ಹಾಗೂ ಹರತಾಳು ಹಾಲಪ್ಪ ಅವರ ಅವಧಿಯಲ್ಲಿ ಕ್ಷೇತ್ರ ಹೇಗೆ ಅಭಿವೃದ್ದಿಯಾಗಿತ್ತು ಎಂಬುದನ್ನು ಗಮನಿಸಬೇಕು’ ಎಂದು ಹೇಳಿದರು.