2017ರಲ್ಲಿ ಅಮೆರಿಕದ ಮಿಚಿಗನ್ ವಿಶ್ವವಿದ್ಯಾಲಯದ ಆವರಣದಲ್ಲಿ ಡಿ.ವಿ.ಮಲ್ಲಿಕಾರ್ಜುನ್ ಅವರ ಆಸಕ್ತಿಯಿಂದ ಡಾ.ವರ್ಗೀಸ್ ಕುರಿಯನ್ ಪುತ್ಥಳಿ ಸ್ಥಾಪನೆ ಮಾಡಲಾಗಿತ್ತು. ಅದಾದ ಬಳಿಕ ಕೇಂದ್ರ ಸರ್ಕಾರ ಕುರಿಯನ್ ಅಂಚೆ ಚೀಟಿ ಹೊರತರಬೇಕೆಂದು ಮಲ್ಲಿಕಾರ್ಜುನ್ ಪತ್ರ ವ್ಯವಹಾರ ನಡೆಸಿದ್ದರು. ಅಂಚೆ ಚೀಟಿ ಬಿಡುಗಡೆಗಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಪ್ರಧಾನಮಂತ್ರಿ ಡಾ.ಮನ್ಮೋಹನ್ ಸಿಂಗ್, ಕೇಂದ್ರದ ಮಾಜಿ ಸಚಿವ ದಿವಂಗತ ಅನಂತ್ಕುಮಾರ್, ಡಿ.ವಿ.ಸದಾನಂದಗೌಡ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಅವರಿಗೆ ಈ ಸಂಬಂಧ ಕೇಂದ್ರ ಸರ್ಕಾರದೊಂದಿಗೆ ಪತ್ರ ವ್ಯವಹಾರವನ್ನು ಮಾಡಿಸಿದ್ದರು.