<p><strong>ರಿಪ್ಪನ್ಪೇಟೆ:</strong> ‘ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಧಾರ್ಮಿಕ ಹಬ್ಬಹರಿದಿನದ ಆಚರಣೆಗಳು ಭಾವೈಕ್ಯದ ಸಂಕೇತವಾಗಿವೆ’ ಎಂದು ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರ್ಯಪ್ಪ ಹೇಳಿದರು.</p>.<p>ಪಟ್ಟಣದ ಶಿವಮಂದಿರದಲ್ಲಿ ಪೊಲೀಸ್ ಇಲಾಖೆ ಗುರುವಾರ ಆಯೋಜಿಸಿದ್ದ ನಾಗರಿಕ ಶಾಂತಿಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಗೌರಿ– ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳು ಶಾಂತಿ ಸೌಹಾರ್ದದ ಪ್ರತೀಕವಾಗಿವೆ. ಅಂತಹ ಸಂದರ್ಭದಲ್ಲಿ ಕೆಲವು ದುಷ್ಟ ಶಕ್ತಿಗಳು ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ ಮಾಡಿದರೆ, ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ರಕ್ಷಣಾ ಇಲಾಖೆ ಕ್ರಮ ಕೈಗೊಳ್ಳಲಿದೆ’ ಎಂದು ಎಚ್ಚರಿಸಿದರು.</p>.<p>ತಹಶೀಲ್ದಾರ್ ರಶ್ಮಿ ಹಾಲೇಶ್ ಮಾತನಾಡಿದರು. ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ಪ್ರಸ್ತಾವಿಕವಾಗಿ ಮಾತನಾಡಿದರು.</p>.<p>ಸಿಪಿಐ ಗುರಣ್ಣ ಹೆಬ್ಬಾಳ, ತೀರ್ಥಹಳ್ಳಿ ಸಿಪಿಐ ಇಮ್ರಾನ್ ಬೇಗಂ, ಪಿಎಸ್ಐ ರಾಜುರೆಡ್ಡಿ, ಅಬಕಾರಿ ಇಲಾಖೆಯ ಪಿಎಸ್ಐ ನಾಗರಾಜ್ ಕೆ.ಎಂ, ಅಗ್ನಿಶಾಮಕ ದಳದ ಗೋಪಾಲ್, ಮೆಸ್ಕಾಂ ಇಲಾಖೆಯ ಸಹಾಯಕ ಎಂಜಿನಿಯರ್ ಕೃಷ್ಣ ಬಿ.ಎಂ. ಅರಸಾಳು, ಆರ್ಎಫ್ಒ ಶರಣಯ್ಯ ಮಾತನಾಡಿದರು.</p>.<p>ಕೆರೆಹಳ್ಳಿ ಹಾಗೂ ಹುಂಚ ಹೋಬಳಿ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಗಣಪತಿ ಸೇವಾ ಸಮಿತಿ ಹಾಗೂ ಈದ್ ಮಿಲಾದ್ ಸೇವಾ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರು, ಸಮಾಜದ ಹಿರಿಯ ಮುಖಂಡರು ಮತ್ತು ನಾಗರಿಕರು ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ:</strong> ‘ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಧಾರ್ಮಿಕ ಹಬ್ಬಹರಿದಿನದ ಆಚರಣೆಗಳು ಭಾವೈಕ್ಯದ ಸಂಕೇತವಾಗಿವೆ’ ಎಂದು ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರ್ಯಪ್ಪ ಹೇಳಿದರು.</p>.<p>ಪಟ್ಟಣದ ಶಿವಮಂದಿರದಲ್ಲಿ ಪೊಲೀಸ್ ಇಲಾಖೆ ಗುರುವಾರ ಆಯೋಜಿಸಿದ್ದ ನಾಗರಿಕ ಶಾಂತಿಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಗೌರಿ– ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳು ಶಾಂತಿ ಸೌಹಾರ್ದದ ಪ್ರತೀಕವಾಗಿವೆ. ಅಂತಹ ಸಂದರ್ಭದಲ್ಲಿ ಕೆಲವು ದುಷ್ಟ ಶಕ್ತಿಗಳು ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ ಮಾಡಿದರೆ, ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ರಕ್ಷಣಾ ಇಲಾಖೆ ಕ್ರಮ ಕೈಗೊಳ್ಳಲಿದೆ’ ಎಂದು ಎಚ್ಚರಿಸಿದರು.</p>.<p>ತಹಶೀಲ್ದಾರ್ ರಶ್ಮಿ ಹಾಲೇಶ್ ಮಾತನಾಡಿದರು. ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ಪ್ರಸ್ತಾವಿಕವಾಗಿ ಮಾತನಾಡಿದರು.</p>.<p>ಸಿಪಿಐ ಗುರಣ್ಣ ಹೆಬ್ಬಾಳ, ತೀರ್ಥಹಳ್ಳಿ ಸಿಪಿಐ ಇಮ್ರಾನ್ ಬೇಗಂ, ಪಿಎಸ್ಐ ರಾಜುರೆಡ್ಡಿ, ಅಬಕಾರಿ ಇಲಾಖೆಯ ಪಿಎಸ್ಐ ನಾಗರಾಜ್ ಕೆ.ಎಂ, ಅಗ್ನಿಶಾಮಕ ದಳದ ಗೋಪಾಲ್, ಮೆಸ್ಕಾಂ ಇಲಾಖೆಯ ಸಹಾಯಕ ಎಂಜಿನಿಯರ್ ಕೃಷ್ಣ ಬಿ.ಎಂ. ಅರಸಾಳು, ಆರ್ಎಫ್ಒ ಶರಣಯ್ಯ ಮಾತನಾಡಿದರು.</p>.<p>ಕೆರೆಹಳ್ಳಿ ಹಾಗೂ ಹುಂಚ ಹೋಬಳಿ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಗಣಪತಿ ಸೇವಾ ಸಮಿತಿ ಹಾಗೂ ಈದ್ ಮಿಲಾದ್ ಸೇವಾ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರು, ಸಮಾಜದ ಹಿರಿಯ ಮುಖಂಡರು ಮತ್ತು ನಾಗರಿಕರು ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>