<p><strong>ಶಿವಮೊಗ್ಗ:</strong> ಜನವರಿ 26ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಲಿದ್ದು, ಆಕರ್ಷಕ ಪಥಸಂಚಲನ ನಡೆಯಲಿದೆ. ಶಾಲಾ ವಿದ್ಯಾರ್ಥಿಗಳಿಂದ ಸಾಮೂಹಿಕ ನೃತ್ಯ ಕಾರ್ಯಕ್ರಮ ನಡೆಯಲಿದ್ದು, ಸಂಜೆ 6 ರಿಂದ ರಾತ್ರಿ 9ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದರು.<br><br>ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಹಲವು ಸಮಿತಿಗಳ ರಚಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಗೆ ನಿಯೋಜಿಸಲಾಗಿದೆ. ಸಂಭ್ರಮಾಚರಣೆ ಅಂಗವಾಗಿ ಮಹಾನಗರ ಪಾಲಿಕೆ ಮತ್ತು ಶಿಮುಲ್ ವತಿಯಿಂದ ಗಣ್ಯರು ಮತ್ತು ಸಾರ್ವಜನಿಕರಿಗೆ ಸಿಹಿ ಹಂಚಿಕೆ, ವಿದ್ಯಾರ್ಥಿಗಳಿಗೆ ಉಪಹಾರ ವ್ಯವಸ್ಥೆ ಮಾಡುವಂತೆ ತಿಳಿಸಿದರು.</p>.<p>ಸಭೆಯಲ್ಲಿ ಎಸ್ಪಿ ಬಿ.ನಿಖಿಲ್, ಎಡಿಸಿ ವಿ.ಅಭಿಷೇಕ್, ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಕೆಎಸ್ಆರ್ಪಿ ಕಮಾಂಡೆಂಟ್ ಯುವಕುಮಾರ್, ಎಸಿ ಸತ್ಯನಾರಾಯಣ, ಸೂಡಾ ಆಯುಕ್ತ ವಿಶ್ವನಾಥ ಮುದಜ್ಜಿ, ತಹಶೀಲ್ದಾರ್ ರಾಜೀವ್ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಜನವರಿ 26ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಲಿದ್ದು, ಆಕರ್ಷಕ ಪಥಸಂಚಲನ ನಡೆಯಲಿದೆ. ಶಾಲಾ ವಿದ್ಯಾರ್ಥಿಗಳಿಂದ ಸಾಮೂಹಿಕ ನೃತ್ಯ ಕಾರ್ಯಕ್ರಮ ನಡೆಯಲಿದ್ದು, ಸಂಜೆ 6 ರಿಂದ ರಾತ್ರಿ 9ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದರು.<br><br>ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಹಲವು ಸಮಿತಿಗಳ ರಚಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಗೆ ನಿಯೋಜಿಸಲಾಗಿದೆ. ಸಂಭ್ರಮಾಚರಣೆ ಅಂಗವಾಗಿ ಮಹಾನಗರ ಪಾಲಿಕೆ ಮತ್ತು ಶಿಮುಲ್ ವತಿಯಿಂದ ಗಣ್ಯರು ಮತ್ತು ಸಾರ್ವಜನಿಕರಿಗೆ ಸಿಹಿ ಹಂಚಿಕೆ, ವಿದ್ಯಾರ್ಥಿಗಳಿಗೆ ಉಪಹಾರ ವ್ಯವಸ್ಥೆ ಮಾಡುವಂತೆ ತಿಳಿಸಿದರು.</p>.<p>ಸಭೆಯಲ್ಲಿ ಎಸ್ಪಿ ಬಿ.ನಿಖಿಲ್, ಎಡಿಸಿ ವಿ.ಅಭಿಷೇಕ್, ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಕೆಎಸ್ಆರ್ಪಿ ಕಮಾಂಡೆಂಟ್ ಯುವಕುಮಾರ್, ಎಸಿ ಸತ್ಯನಾರಾಯಣ, ಸೂಡಾ ಆಯುಕ್ತ ವಿಶ್ವನಾಥ ಮುದಜ್ಜಿ, ತಹಶೀಲ್ದಾರ್ ರಾಜೀವ್ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>